ಗಾಯಕಿ ವಾಣಿ ಜಯರಾಮ್ ನಿಗೂಢ ಸಾವು : ಮರಣೋತ್ತರ ವರದಿಯಲ್ಲೇನಿದೆ?

Public TV
2 Min Read
vani 2

ಭಾರತೀಯ ಸಿನಿಮಾ ರಂಗದ ಹೆಸರಾಂತ ಗಾಯಕಿ ವಾಣಿ ಜಯರಾಂ ಶನಿವಾರ ತಮ್ಮ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದರು. ಅವರ ತಲೆಯಲ್ಲಿ ಗಾಯದ ಗುರುತು ಮತ್ತು ಬಿದ್ದ ಸ್ಥಳದಲ್ಲಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದವು. ಹಾಗಾಗಿ ಪೊಲೀಸರು ಅಸಹಜ ಸಾವು ಎಂದು ಕೇಸು ದಾಖಲಿಸಿದ್ದರು. ಮರಣೋತ್ತರ ಪರೀಕ್ಷೆಗೂ ವಾಣಿ ಅವರ ದೇಹವನ್ನು ರವಾನಿಸಲಾಗಿತ್ತು. ನಿನ್ನೆಯಷ್ಟೇ ಮರಣೋತ್ತರ ಪರೀಕ್ಷೆಯ ವರದಿ ಬಂದಿದೆ. ಮರಣೋತ್ತರ ವರದಿಯಲ್ಲಿ ಯಾವುದೇ ಅನುಮಾನವನ್ನು ವ್ಯಕ್ತ ಪಡಿಸಿಲ್ಲ.

vanic

ವಾಣಿ ಅವರು ಮಲಗಿದ್ದ ಪಕ್ಕದಲ್ಲೇ ಕಟ್ಟಿಗೆ ಟೇಬಲ್ ಇದ್ದು, ಅದರ ಮೇಲೆ ವಾಣಿ ಬಿದ್ದಿದ್ದಾರೆ. ಹಾಗಾಗಿ ತಲೆಗೆ ಗಾಯವಾಗಿದೆ. ರಕ್ತಸ್ರಾವವಾಗಿದೆ. ಹೃದಯಾಘಾತದಿಂದ ಅವರು ನಿಧನ ಹೊಂದಿದ್ದಾರೆ. ಅಕ್ಕಪಕ್ಕದ ಮನೆಯ ಸಿಸಿಟಿವಿಯನ್ನು ಗಮನಿಸಿರುವ ಪೊಲೀಸರು, ಅಲ್ಲಿ ಯಾರ ಸುಳಿವೂ ದೊರೆತಿಲ್ಲ. ಮತ್ತು ಅವರ ಮನೆಗೆ ಯಾರೂ ಪ್ರವೇಶ ಮಾಡಿಲ್ಲ ಎಂದು ಪರಿಶೀಲನೆ ವೇಳೆ ಗೊತ್ತಾಗಿದೆ. ಹಾಗಾಗಿ ಈ ಸಾವನ್ನು ಅವರು ಅನುಮಾನದಿಂದ ನೋಡಿಲ್ಲ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಸಿದ್ಧಾರ್ಥ್-ಕಿಯಾರಾ ಅವರದ್ದು ನಿಜವಾದ ಪ್ರೀತಿ ಎಂದು ಹಾಡಿ ಹೊಗಳಿದ ಕಂಗನಾ ರಣಾವತ್

vani 1

ವಾಣಿ ಅವರು ಒಬ್ಬರೇ ಮನೆಯಲ್ಲಿ ವಾಸವಿದ್ದರು. ಮನೆಗೆಲಸದಾಕೆ ಬಂದು ಬಾಗಿಲು ಬಡಿದಾಗ, ಬಾಗಿಲು ತೆರೆದಿಲ್ಲ. ಹಾಗಾಗಿ ಪಕ್ಕದ ಮನೆಯವರಿಗೆ ತಿಳಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಮನೆಯ ಬಾಗಿಲು ತೆರೆದಾಗ, ವಾಣಿ ಜಯರಾಂ ನೆಲಕ್ಕೆ ಉರುಳಿ ಬಿದ್ದಿದ್ದರು. ಅವರ ಹಣೆಗೂ ಗಾಯವಾಗಿದ್ದು, ಬಿದ್ದಿರುವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಬಿದ್ದಲ್ಲಿಯೇ ಅವರಿಗೆ ಹೃದಯಾಘಾತವಾಗಿದೆ. ವಾಣಿ ಜಯರಾಂ ಒಬ್ಬರೇ ಚೆನ್ನೈನ ನುಂಗಂಬಾಕ್ಕಂನ ಹಡ್ಡೋಸ್ ರಸ್ತೆಯಲ್ಲಿರುವ ಮನೆಯಲ್ಲಿ ವಾಸವಿದ್ದರು.

vani

ಕನ್ನಡವೂ ಸೇರಿದಂತೆ ಅನೇಕ ಭಾಷೆಗಳ ಚಿತ್ರಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. 1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಗಾಯಕಿಯಾಗಿ ಸಿನಿಮಾ ರಂಗ ಪ್ರವೇಶಿಸಿದ್ದ ಅವರು ಹತ್ತು ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಈ ಗೀತೆಗಳಿಗಾಗಿಯೇ ಅವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಬಂದಿದೆ. ಮೊನ್ನೆಯಷ್ಟೇ ಕೇಂದ್ರ ಸರಕಾರ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ ಪದ್ಮ ಭೂಷಣವನ್ನೂ ಘೋಷಿಸಿದೆ.

FotoJet 4 5

ಹುಟ್ಟಿದ್ದು ತಮಿಳುನಾಡಿನ ವೆಲ್ಲೋರ್ ನಲ್ಲಿ. ಬಾಲ್ಯದಿಂದಲೇ ಸಂಗೀತ ಅಭ್ಯಾಸ ಮಾಡಿದ್ದ ಅವರು, ನಂತರ ಮದ್ರಾಸ್ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದವರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲೂ ಕೆಲಸ ಮಾಡಿದರು. ಮದುವೆಯ ನಂತರ ಮತ್ತು ಮುಂಬೈನಲ್ಲಿ ಅವರು ನೆಲೆಯೂರಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದರು.

FotoJet 5 2

ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಓಡಿಯಾ, ಗುಜರಾತಿ, ಬಂಗಾಳಿ ಸೇರಿದಂತೆ ಭಾರತೀಯ ನಾನಾ ಭಾಷೆಗಳ ಸಿನಿಮಾಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು.   ಕನ್ನಡದಲ್ಲಿ ಅನುಭವ, ರಣರಂಗ, ಶಿವ ಮೆಚ್ಚಿದ ಕಣ್ಣಪ್ಪ, ಒಲವಿನ ಉಡುಗೊರೆ, ಮಲಯ ಮಾರುತ ಸೇರಿದಂತೆ ಐವತ್ತಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್, ಅನಂತ್ ನಾಗ್ ಸೇರಿದಂತೆ ಹೆಸರಾಂತ ಕಲಾವಿದರ ಚಿತ್ರಕ್ಕೆ ಹಾಡಿದ ಹೆಗ್ಗಳಿಕೆ ಇವರದ್ದು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *