Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಂಗ: ನಿರ್ಮಾಪಕ ಉದಯ್ ಮೆಹ್ತಾರ ಡೈಮಂಡ್‍ನಂಥಾ ಕನಸು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಂಗ: ನಿರ್ಮಾಪಕ ಉದಯ್ ಮೆಹ್ತಾರ ಡೈಮಂಡ್‍ನಂಥಾ ಕನಸು!

Bengaluru City

ಸಿಂಗ: ನಿರ್ಮಾಪಕ ಉದಯ್ ಮೆಹ್ತಾರ ಡೈಮಂಡ್‍ನಂಥಾ ಕನಸು!

Public TV
Last updated: June 30, 2019 5:07 pm
Public TV
Share
3 Min Read
Uday K Mehta 7
SHARE

ಬೆಂಗಳೂರು: ಸಿನಿಮಾ ನಿರ್ಮಾಣವೆಂಬುದು ವ್ಯವಹಾರ. ಆದರೆ ನಿರ್ಮಾಪಕ ಅದನ್ನು ಬರೀ ಬ್ಯುಸಿನೆಸ್ ಅಂತಷ್ಟೇ ಪರಿಗಣಿಸಿದರೆ ಬಹುಶಃ ಅದ್ಭುತ ದೃಶ್ಯ ಕಾವ್ಯಗಳು ಹುಟ್ಟಲು ಸಾಧ್ಯವಿರುತ್ತಿರಲಿಲ್ಲ. ಯಾಕೆಂದರೆ, ಯಶಸ್ವಿ ಸಿನಿಮಾಗಳ ಹಿಂದೆ ಇಂಥಾ ವ್ಯಾವಹಾರಿಕ ಉದ್ದೇಶದಾಚೆಯ ಉತ್ಕಟ ಕಲಾ ಪ್ರೇಮವಿರುತ್ತದೆ. ನಿರ್ದೇಶಕರ ಕನಸಿಗೆ ಪ್ರತೀ ಹೆಜ್ಜೆಯಲ್ಲೂ ಸಾಥ್ ಕೊಡುತ್ತಾ, ಎಂಥಾ ಸವಾಲುಗಳು ಬಂದರೂ ಎದೆಕೊಡುತ್ತಾ ನಿರ್ಮಾಪಕ ಸಾಗಿ ಬಂದರೇನೇ ಸಿನಿಮಾವೊಂದು ಅಚ್ಚುಕಟ್ಟಾಗಿ ರೂಪುಗೊಳ್ಳುತ್ತೆ. ಹೀಗೆ ಸ್ವತಃ ದೊಡ್ಡ ಮಟ್ಟದ ವ್ಯಾಪಾರ ಉದ್ಯಮದ ವಾರಸುದಾರರಾಗಿದ್ದರೂ ಸಿನಿಮಾವನ್ನು ಆರಾಧಿಸುವ ಸ್ವಭಾವದ ಉದಯ್ ಮೆಹ್ತಾರ ಏಳನೇ ಕನಸು ‘ಸಿಂಗ’!

Uday K Mehta 5

ಚಿರಂಜೀವಿ ಸರ್ಜಾ ಅಭಿನಯದ ಸಿಂಗ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಈಗಾಗಲೇ ಟ್ರೈಲರ್ ಮೂಲಕ ದೊಡ್ಡ ಮಟ್ಟದಲ್ಲಿಯೇ ಸಂಚಲನ ಸೃಷ್ಟಿಸಿರೋ ಈ ಚಿತ್ರವನ್ನು ಈ ಹಿಂದೆ ರಾಮ್ ಲೀಲಾ ಎಂಬ ಸಿನಿಮಾ ನಿರ್ದೇಶನ ಮಾಡಿದ್ದ ವಿಜಯ್ ಕಿರಣ್ ರೂಪಿಸಿದ್ದಾರೆ. ಯಾವುದೇ ಚಿತ್ರ ಬಿಡುಗಡೆ ಪೂರ್ವದಲ್ಲಿ ಈ ಥರದ ಟಾಕ್ ಕ್ರಿಯೇಟ್ ಮಾಡಿದರೆ ಗೆಲುವು ಗ್ಯಾರಂಟಿ. ಅಂಥಾದ್ದೊಂದು ಸಕಾರಾತ್ಮಕ ವಾತಾವರಣದೊಂದಿಗೆ ಥೇಟರಿನ ಹಾದಿಯಲ್ಲಿರೋ ಸಿಂಗನನ್ನು ಉದಯ್ ಮೆಹ್ತಾ ಅವರು ನಿರ್ಮಾಣ ಮಾಡಲು ಒಪ್ಪಿಕೊಂಡಿರೋದೇ ಕಥೆಯ ಕಾರಣದಿಂದ.

Uday K Mehta 1

ಅಷ್ಟಕ್ಕೂ ಎಲ್ಲ ದಿಕ್ಕಿನಿಂದಲೂ ಕಥೆ ಒಪ್ಪಿಗೆಯಾಗದೇ ಇದ್ದರೆ ಉದಯ್ ಮೆಹ್ತಾ ನಿರ್ಮಾಣಕ್ಕಿಳಿಯುವವರೇ ಅಲ್ಲ. ಅವರು ಎಂಥಾ ಟೇಸ್ಟು ಹೊಂದಿದ್ದಾರೆ, ಗುಣಮಟ್ಟವನ್ನು ಹೇಗೆಲ್ಲ ಬಯಸುತ್ತಾರೆಂಬುದಕ್ಕೆ ಅವರೇ ನಿರ್ಮಾಣ ಮಾಡಿರೋ ಆರು ಚಿತ್ರಗಳೇ ಸಾಕ್ಷಿಗಿವೆ. ವಿಜಯ್ ಕಿರಣ್ ಆರಂಭದಲ್ಲಿ ಈ ಕಥೆ ಹೇಳಿದಾಗ ಒಂದೇ ಗುಕ್ಕಿಗದು ಮೆಹ್ತಾರಿಗೆ ಹಿಡಿಸಿತ್ತಂತೆ.

Uday K Mehta 3

 

ಪಕ್ಕಾ ಕಮರ್ಶಿಯಲ್ ಶೈಲಿಯ ಈ ಕಥೆ ಎಲ್ಲ ಅಂಶಗಳನ್ನೂ ಒಳಗೊಂಡು, ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವಂತಿರೋದರಿಂದಲೇ ಮೆಹ್ತಾ ನಿರ್ಮಾಣ ಮಾಡಲು ಒಪ್ಪಿಕೊಂಡಿದ್ದರಂತೆ. ಇದೀಗ ಒಟ್ಟಾರೆಯಾಗಿ ಸಿಂಗ ಮೂಡಿ ಬಂದಿರೋ ರೀತಿಯ ಬಗ್ಗೆಯೂ ಅವರಲ್ಲೊಂದು ತೃಪ್ತಿಯಿದೆ.

Uday K Mehta 2

ಉದಯ್ ಮೆಹ್ತಾ ಮೂಲತಃ ಬೆಂಗಳೂರಿನವರೇ. ಆರಂಭ ಕಾಲದಿಂದಲೂ ಅವರಿಗೆ ಸಿನಿಮಾಗಳ ಮೇಲೆ ವಿಪರೀತ ಸೆಳೆತ. ಇಂಥಾ ಸಿನಿಮಾ ಒಲವನ್ನು ಕಾಪಾಡಿಕೊಂಡೇ ಮುಂದುವರೆದರೂ ಬದುಕಿನ ಅನಿವಾರ್ಯತೆ ಅವರನ್ನು ಡೈಮಂಡ್ ಮರ್ಚೆಂಟ್ ಆಗಿ ರೂಪಿಸಿತ್ತು. ಈ ಉದ್ಯಮದಲ್ಲಿ ಬಲು ಆಸ್ಥೆಯಿಂದ ತೊಡಗಿಸಿಕೊಂಡು ಯಶಸ್ವಿಯಾದ ಮೆಹ್ತಾ ಈಗ್ಗೆ ದಶಕಗಳ ಹಿಂದೆಯೇ ನಿರ್ಮಾಪಕರಾಗುವ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದ್ದರು. ಹೀಗೆ ಒಂದೊಳ್ಳೆ ಪ್ರಾಜೆಕ್ಟಿಗೆ ಹುಡುಕುತ್ತಿದ್ದಾಗ 2009ರಲ್ಲಿ ಲೂಸ್ ಮಾದ ಯೋಗಿ ಅಭಿನಯದ ರಾವಣ ಎಂಬ ಚಿತ್ರದ ಮೂಲಕ ಅದಕ್ಕೆ ಅವಕಾಶ ಒದಗಿ ಬಂದಿತ್ತು.

Uday K Mehta 4

ಆ ಚಿತ್ರ ಯಶ ಕಾಣುತ್ತಲೇ ನಿರ್ಮಾಪಕರಾಗಿ ಕಾಲೂರಿ ನಿಂತ ಉದಯ್ ಮೆಹ್ತಾ, ಕೃಷ್ಣನ್ ಲವ್ ಸ್ಟೋರಿ, ಕಿಚ್ಚ ಸುದೀಪ್ ಅಭಿನಯದ ಬಚ್ಚನ್, ನೀನಾಸಂ ಸತೀಶ್ ಅಭಿನಯದ ಲವ್ ಇನ್ ಮಂಡ್ಯ, ಶರಣ್ ಅಭಿನಯದ ರಾಜ ರಾಜೇಂದ್ರ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು. ಸಿಂಗ ಅವರ ಏಳನೇ ಚಿತ್ರ. ಈ ಚಿತ್ರ ಬಿಡುಗಡೆಯ ಹಾದಿಯಲ್ಲಿರುವಾಗಲೇ ನೀನಾಸಂ ಸತೀಶ್ ಅಭಿನಯದ ಬ್ರಹ್ಮಚಾರಿ ಚಿತ್ರವನ್ನೂ ಮೆಹ್ತಾ ಆರಂಭಿಸಿದ್ದಾರೆ. ಅದಾಗಲೇ ಧೃವ ಸರ್ಜಾರ ಚಿತ್ರವೊಂದನ್ನು ನಿರ್ಮಾಣ ಮಾಡಲು ತಯಾರಿಯನ್ನೂ ಆರಂಭಿಸಿದ್ದಾರೆ.

Uday K Mehta 6

ಹೀಗೆ ಸಾಗಿ ಬಂದಿರುವ ಉದಯ್ ಮೆಹ್ತಾ ಈಗ ಕನ್ನಡದ ಸ್ಟಾರ್ ನಿರ್ಮಾಪಕರಾಗಿ ಹೊರ ಹೊಮ್ಮಿದ್ದಾರೆ. ಅವರೊಂದು ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆಂದರೆ ಗಾಂಧಿನಗರ ಅದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಅದಕ್ಕೆ ಕಾರಣ ಕಥೆಯನ್ನು ಆರಿಸಿಕೊಳ್ಳೋದರಲ್ಲಿ ಅವರಿಗಿರುವ ಜಾಣ್ಮೆ. ಸಿಂಗ ಕಥೆಯನ್ನೂ ಕೂಡಾ ಅವರು ಅದೇ ಮಾನದಂಡಗಳನ್ನು ಪ್ರಯೋಗಿಸಿ ಆರಿಸಿಕೊಂಡಿದ್ದಾರೆ. ಈ ಸಿನಿಮಾ ದೊಡ್ಡ ಗೆಲುವು ಕಾಣೋದರೊಂದಿಗೆ ತಮ್ಮ ಸಿನಿಮಾ ಬದುಕಿನ ಮಹತ್ವದ ಚಿತ್ರವಾಗಿ ದಾಖಲಾಗುತ್ತದೆ ಎಂಬ ಭರವಸೆ ಉದಯ್ ಮೆಹ್ತಾ ಅವರಲ್ಲಿದೆ. ಈಗ ಪ್ರೇಕ್ಷಕರ ವಲಯದಲ್ಲಿ ಸಿಂಗ ಪಸರಿಸಿರೋ ಕ್ರೇಜ್ ಮೆಹ್ತಾರ ನಂಬಿಕೆಗೆ ಮತ್ತಷ್ಟು ಇಂಬು ಕೊಡುವಂತಿದೆ.

TAGGED:cinemaKannada Cinema ProducersandalwoodSinngaUday Mehtaಉದಯ್ ಮೆಹ್ತಾಕನ್ನಡ ಚಿತ್ರ ನಿರ್ಮಾಪಕಸಿಂಗಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Banashankari temple Bengaluru
Bengaluru City

ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ

Public TV
By Public TV
29 minutes ago
Vijayapura Fire Accident
Districts

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ – ಹೊತ್ತಿಯುರಿದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು

Public TV
By Public TV
50 minutes ago
Mukesh Ambani Reliance Donald Trump
Latest

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ

Public TV
By Public TV
1 hour ago
Mandya Crime
Crime

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಅರೆಸ್ಟ್

Public TV
By Public TV
1 hour ago
ಸಾಂದರ್ಭಿಕ ಚಿತ್ರ
Latest

ಇರಾನ್‌ನಿಂದ ಖಡಕ್‌ ಪ್ರತಿಕ್ರಿಯೆ – ತೈಲ ಟ್ಯಾಂಕರ್‌ ಕುರಿತ ಅಮೆರಿಕದ ಪೋಸ್ಟ್‌ ಡಿಲೀಟ್‌

Public TV
By Public TV
2 hours ago
Punjab Accident Foreign Womem
Latest

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ ಯುವತಿ, ಸ್ಥಳದಲ್ಲೇ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?