ಶಿರಸಿ ಉತ್ಸವದಲ್ಲಿ ಕೆಂಡ ಹಾಯ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್

Public TV
1 Min Read
shivaram hebbar 2

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರ ಗ್ರಾಮದ ವೀರಭದ್ರೇಶ್ವರ ಮತ್ತು ಚೌಡೇಶ್ವರಿ ದೇವಸ್ಥಾನದಲ್ಲಿ ಇಂದು ನಡೆದ ಗುಗ್ಗಳ ಉತ್ಸವದ ವೇಳೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಕೆಂಡ ಹಾಯ್ದರು.

shivaram hebbar

ದೇವಸ್ಥಾನದಲ್ಲಿ ಪ್ರತಿ ವರ್ಷ ನಡೆಯುವ ಉತ್ಸವದ ವೇಳೆ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಹರಕೆ ಕಟ್ಟಿಕೊಂಡವರು, ಈಡೇರಿದ ಮೇಲೆ ಕೆಂಡ ಹಾಯುವ ಪದ್ಧತಿ ನಡೆಸಿಕೊಂಡು ಬರಲಾಗುತ್ತಿದೆ. ಇಲ್ಲಿ ಪ್ರತಿ ವರ್ಷ ಇಷ್ಟಾರ್ಥ ಈಡೇರಿಕೆಗೆ ಪ್ರಾರ್ಥಿಸಿ ಭಕ್ತರು ಈ ಪದ್ಧತಿ ಅನುಸರಿಸುತ್ತಿದ್ದಾರೆ. ಆದರೆ ದೇವರ ದರ್ಶನಕ್ಕೆ ತೆರಳಿದ್ದ ಶಿವರಾಮ್ ಹೆಬ್ಬಾರ್ ಭಕ್ತರ ಜೊತೆಗೆ ತಾವೂ ಕೂಡ ಕೆಂಡ ಹಾಯ್ದಿದ್ದಾರೆ. ಇದನ್ನೂ ಓದಿ: PSI ಹುದ್ದೆ ಕೊಡಿಸುವುದಾಗಿ 21 ಲಕ್ಷ ವಂಚನೆ – ಆರೋಪಿ ಅರೆಸ್ಟ್

shivaram hebbar

ಶಿವರಾಮ್ ಹೆಬ್ಬಾರ್ ಕೂಡ ಹಿಂದೆ ಶ್ರೀ ವೀರಭದ್ರ ದೇವರಲ್ಲಿ ಹರಕೆ ಕಟ್ಟಿಕೊಂಡಿದ್ದು, ಅದು ನೆರವೇರಿರುವುದರಿಂದ ಅವರು ಸಹ ಕೆಂಡಹಾಯ್ದಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳಿವೆ. ಇದನ್ನೂ ಓದಿ: ಧ್ವನಿವರ್ಧಕ ನಿಯಮ ಉಲ್ಲಂಘನೆಯಾದ್ರೆ ಸಮಿತಿಯಲ್ಲಿರುವವರ ವಿರುದ್ಧ ಕ್ರಮ: ಆನಂದ್ ಸಿಂಗ್

Share This Article
Leave a Comment

Leave a Reply

Your email address will not be published. Required fields are marked *