Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನಾಮಿಕ ಹೇಳಿದ ಎಲ್ಲಾ ಕಡೆ ಭೂಮಿ ಅಗೆದ್ರೂ ಖಾಲಿ ಖಾಲಿ – ಉತ್ಖನನ ನಿಲ್ಲಿಸಲು ಎಸ್‌ಐಟಿ ನಿರ್ಧಾರ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಅನಾಮಿಕ ಹೇಳಿದ ಎಲ್ಲಾ ಕಡೆ ಭೂಮಿ ಅಗೆದ್ರೂ ಖಾಲಿ ಖಾಲಿ – ಉತ್ಖನನ ನಿಲ್ಲಿಸಲು ಎಸ್‌ಐಟಿ ನಿರ್ಧಾರ?

Dakshina Kannada

ಅನಾಮಿಕ ಹೇಳಿದ ಎಲ್ಲಾ ಕಡೆ ಭೂಮಿ ಅಗೆದ್ರೂ ಖಾಲಿ ಖಾಲಿ – ಉತ್ಖನನ ನಿಲ್ಲಿಸಲು ಎಸ್‌ಐಟಿ ನಿರ್ಧಾರ?

Public TV
Last updated: August 16, 2025 11:40 am
Public TV
Share
2 Min Read
Dharmasthala Case 4
SHARE

ಮಂಗಳೂರು: ಧರ್ಮಸ್ಥಳ (Dharmasthala) ಗ್ರಾಮದಲ್ಲಿ ನೂರಾರು ಶವ ಹೂತು ಹಾಕಿದ್ದೇನೆಂದು ಹೇಳಿದ್ದ ಅನಾಮಿಕ ದೂರುದಾರನ ಮಾತು ನಂಬಿದ ಎಸ್‌ಐಟಿ (SIT) ಅಧಿಕಾರಿಗಳೇ ಇದೀಗ ಟೆನ್ಷನ್ ಆಗಿದ್ದಾರೆ. ಆತನ ಮಾತು ನಂಬಿ ಕಳೆದ 20 ದಿನಗಳಿಂದ ಧರ್ಮಸ್ಥಳದ ಅರಣ್ಯದಲ್ಲಿ ಉತ್ಖನನ ನಡೆದಿತ್ತು. ಎಲ್ಲೂ ಏನೂ ಸಿಗದೇ ಇರೋದ್ರಿಂದ ಉತ್ಖನನವನ್ನ ಬಹುತೇಕ ಅಂತ್ಯಗೊಳಿಸಲು ಇದೀಗ ಎಸ್‌ಐಟಿ ನಿರ್ಧರಿಸಿದೆ. ಈ ನಡುವೆ ಬುರುಡೆಯನ್ನು ತಂದು ಬುರುಡೆ ಬಿಟ್ಟಿದ್ದ ಅನಾಮಿಕನಿಗೆ ಅದೇ ಬುರುಡೆ ಕಂಟಕವಾಗೋ ಸಾಧ್ಯತೆ ಇದೆ.

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ನಿಗೂಢ ಪ್ರಕರಣ (Dharmasthala Mass Burials) ಇನ್ನರೆಡು ದಿನದಲ್ಲಿ ಎಲ್ಲವೂ ಬಹಿರಂಗಗೊಳ್ಳಲಿದೆ. ಅನಾಮಿಕನ ಮಾತು ನಂಬಿ 15 ದಿನದಲ್ಲಿ 25ಕ್ಕೂ ಹೆಚ್ಚು ಗುಂಡಿ ತೋಡಿದರೂ ಯಾವುದೇ ಸಾಕ್ಷಿ ಸಿಗದ ಹಿನ್ನೆಲೆ ಎಸ್‌ಐಟಿ ಅಧಿಕಾರಿಗಳಿಗೆ ಮೋಸ ಹೋದಂತಿದೆ. ಹಾಗಾಗಿ, ಎಸ್‌ಐಟಿ ಅಧಿಕಾರಿಗಳು ಗುಂಡಿ ತೆಗೆದು ಮಣ್ಣು ಮುಚ್ಚುವುದನ್ನು ಕೈಬಿಟ್ಟು, ತನಿಖೆಯ ದಾರಿಯನ್ನೇ ಬದಲಿಸಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಸರ್ಕಾರ ಧರ್ಮಸ್ಥಳದ ಜೊತೆಗಿರುತ್ತೆ, ದಿಕ್ಕು ತಪ್ಪಿಸಿದವರನ್ನ ನಾವು ಬಿಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

ತನಿಖೆಗಾಗಿ ಅಧಿಕಾರಿಗಳು ಆತ ಹೇಳಿದಂತೆಲ್ಲಾ ನೆಲ ಅಗೆದಿದ್ರು. ಜಿಪಿಆರ್ ಕೂಡ ತರಿಸಿದ್ರು. ಆದರೆ ಒಂದೇ ಒಂದು ಕಳೇಬರದ ತುಂಡು ಸಹ ಸಿಕ್ಕಿಲ್ಲ. ಹಾಗಾಗಿ, ಮುಂದಕ್ಕೆ ಮತ್ತೆ ನೆಲ ಅಗೆದರೆ ಉಪಯೋಗವಿಲ್ಲ ಅಂತ ಐಪಿಎಸ್ ಅಧಿಕಾರಿಗಳು ಅನಾಮಿಕನಿಗೆ ಆರಂಭದಲ್ಲೇ ಮಾಡಬೇಕಿದ್ದ ಮಂಪರು ಪರೀಕ್ಷೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಹೀಗಾಗಿ ಇನ್ನು ಉತ್ಖನನ ನಡೆಸದಿರಲು ತೀರ್ಮಾನಿಸಿದ್ದು, ಇಂದೇ ಬಹುತೇಕ ಉತ್ಖನನ ಕಾರ್ಯ ಕೊನೆಗೊಳ್ಳಲಿದೆ. ಇದನ್ನೂ ಓದಿ: ಇಂದು ಬಿಜೆಪಿಯಿಂದ ʻಧರ್ಮಸ್ಥಳ ಚಲೋʼ – 500 ಕಾರುಗಳಲ್ಲಿ ಬೃಹತ್‌ ಯಾತ್ರೆ

ಎಸ್‌ಐಟಿ ತನಿಖೆಯ ಹಾದಿ ಬದಲಿಸೋಕೆ ನಿರ್ಧರಿಸಿಯೇ ಇಷ್ಟು ದಿನ ಮಣ್ಣು ಮಾತ್ರ ಅಗೆಯುತ್ತಿದ್ದ ಅಧಿಕಾರಿಗಳು ಇದೀಗ ಮಹಜರು ಆರಂಭಿಸಿದ್ದಾರೆ. 20 ವರ್ಷಗಳ ಹಿಂದೆ ಅನಾಮಿಕ ಧರ್ಮಸ್ಥಳದಲ್ಲಿ ವಾಸವಿದ್ದ ಜಾಗದ ಸ್ಥಳ ಮಹಜರು ಕೂಡ ನಡೆಸಿರೋದು ಅಧಿಕಾರಿಗಳು ತನಿಖೆಯ ಗೊಂದಲಕ್ಕೆ ಬಂದಿರೋದು ಸ್ಪಷ್ಟವಾಗಿದೆ. ಈಗಾಗಲೇ ಒಂದೆಡೆ 20 ದಿನದಿಂದ ಒಂದೂ ಸಾಕ್ಷಿಯೂ ಸಿಗದ ಕಾರಣ ಧರ್ಮಸ್ಥಳದ ಭಕ್ತರು-ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬಿದ್ದಿದ್ರೆ, ಇತ್ತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಖಾಲಿ ಡಬ್ಬ, ಷಡ್ಯಂತ್ರ, ಕುತಂತ್ರ ಎಂದಿರೋದು ತನಿಖೆಯ ಹಾದಿಯ ಬದಲಾವಣೆಗೆ ಕಾರಣವಾಗಿದೆ. ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಮಳೆಯಿಂದ ಭೂಕುಸಿತ – ಇಬ್ಬರು ಸಾವು, ಇಂದು ರೆಡ್ ಅಲರ್ಟ್ ಘೋಷಣೆ

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೂಡ ಸೋಮವಾರ ಮಾತನಾಡ್ತೀನಿ ಎಂದಿರೋದ್ರಿಂದ ಎಸ್‌ಐಟಿ, ನೆಲ ಅಗೆಯೋ ತನಿಖೆ ಕೈಬಿಟ್ಟು ಸರ್ಕಾರಕ್ಕೆ ವರದಿ ನೀಡೋದು ದಟ್ಟವಾಗಿದೆ. ಈ ನಡುವೆ ಆರಂಭದಲ್ಲಿ ಅನಾಮಿಕ ತಂದ ತಲೆ ಬುರುಡೆಯ ರಹಸ್ಯ ಬೇಧಿಸಲು ಆರಂಭಿಸಿರೋ ಎಸ್‌ಐಟಿ ಈ ಕೇಸ್‌ನಲ್ಲಿ ಆತನನ್ನು ಬಂಧಿಸಿ ತನಿಖೆ ನಡೆಸಲಿದ್ದಾರೆ.

ಒಟ್ಟಿನಲ್ಲಿ ಇಷ್ಟು ದಿನಗಳ ಬಳಿಕವಾದ್ರೂ ಎಸ್‌ಐಟಿ ಅಧಿಕಾರಿಗಳು ಸುಖಾಸುಮ್ಮನೇ ಮಣ್ಣು ಅಗೆಯೋ ಕೆಲಸ ಕೈಬಿಡಲು ನಿರ್ಧರಿಸಿದ್ದಾರೆ. ಆದರೆ, ಅನಾಮಿಕನನ್ನು ಯಾವ ರೀತಿಯ ತನಿಖೆಗೆ ಒಳಪಡಿಸುತ್ತಾರೆ ಅನ್ನೋದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಸದ್ಯದಲ್ಲೇ ಮಂಪರು ಪರೀಕ್ಷೆ ಮಾಡ್ತಾರೋ, ಬಂಧಿಸ್ತಾರೋ ಅನ್ನೋದು ನಿಗೂಢವಾಗಿದೆ. ಏನೇ ಇರಲಿ, ನಿಷ್ಪಕ್ಷಪಾತವಾದ ತನಿಖೆಯಾಗಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಅನ್ನೋದು ಎಲ್ಲರ ಆಶಯವಾಗಿದೆ.

TAGGED:DharamasthalaDharmasthala Mass Burial Casemagalurusitಎಸ್‍ಐಟಿಧರ್ಮಸ್ಥಳಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

ಸ್ವಾಮಿನಾರಾಯಣ ದೇವಸ್ಥಾನ, ಕ್ಯಾಲಿಫೋರ್ನಿಯಾ
Latest

US ಹಿಂದೂ ದೇವಾಲಯಗಳ ಮೇಲಿನ ದಾಳಿ ಬಗ್ಗೆ ಮಾತನಾಡಲ್ಲ – ಅಮೆರಿಕದ ಸರ್ಕಾರದ USCIRF ವರದಿಗೆ ಭಾರತ ಕಿಡಿ

Public TV
By Public TV
29 minutes ago
rain
Bidar

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Public TV
By Public TV
32 minutes ago
CM Siddaramaiah
Bengaluru City

ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

Public TV
By Public TV
1 hour ago
Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
1 hour ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
2 hours ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?