– ಎಸ್ಐಟಿಗೆ ಸಿಗದೆ ತಿಮರೋಡಿ ಎಸ್ಕೇಪ್
ಮಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣ (Dharmasthala Mass Burials) ಸಂಬಂಧಿಸಿದಂತೆ ಎಸ್ಐಟಿ ತನಿಖೆ ಚುರುಕುಗೊಳಿಸಿದೆ. ಚಿನ್ನಯ್ಯನಿಗೆ ಆಶ್ರಯ ನೀಡಿದ ಆರೋಪದಲ್ಲಿ ಮಹೇಶ್ ತಿಮರೋಡಿ (Mahesh Shetty Thimarody) ಮನೆಗೆ ಪೊಲೀಸರು ರೇಡ್ ಮಾಡಿದ್ದಾರೆ. ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿ ನಾಪತ್ತೆಯಾಗಿದ್ದು, ಬಂಧನ ಭೀತಿ ಎದುರಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಯನ್ನು ಎಸ್ಐಟಿ (SIT) ಮುಂದುವರಿಸಿದೆ. ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಮಹೇಶ್ ಶೆಟ್ಟಿ ತಿಮರೋಡಿ ಮನೆಯನ್ನು ಎಸ್ಐಟಿ ಜಾಲಾಡಿದೆ. ಪ್ರಕರಣದ ಆರಂಭದ ದಿನದಿಂದಲೂ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ವಾಸ್ತವ್ಯವಿದ್ದ ಚಿನ್ನಯ್ಯನಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆಯನ್ನು ಮಾಡಲಾಗಿತ್ತು. ಪ್ರಮುಖ ಆರೋಪಿಗೆ ಆಶ್ರಯ ಕೊಟ್ಟ ಆರೋಪದಡಿ ತಿಮರೋಡಿ ಮನೆಯಲ್ಲಿ ಎಸ್ಐಟಿ ಶೋಧ ನಡೆಸಿದೆ. ಇದನ್ನೂ ಓದಿ: ಎಸ್ಐಟಿ ಕಚೇರಿ ಕದ ತಟ್ಟಿದ ಸುಜಾತ ಭಟ್ – ಅನನ್ಯಾ ಸೃಷ್ಟಿಕರ್ತೆಗೆ 6 ಗಂಟೆ ಗ್ರಿಲ್
ಮಂಗಳವಾರ ಉಜಿರೆಯ ತಿಮರೋಡಿ ಮನೆಗೆ ದಿಢೀರ್ ರೇಡ್ ಮಾಡಿ ಬೆಳ್ತಂಗಡಿ ಎಸ್ಐಟಿ ತಂಡ ಶೋಧ ನಡೆಸಿತ್ತು. ಎಸ್ಐಟಿ ಬರುವ ಸುದ್ದಿ ತಿಳಿದು ಮಹೇಶ್ ತಿಮರೋಡಿ ಮನೆಯಿಂದ ಪರಾರಿಯಾಗಿದ್ದಾರೆ. ಮಹೇಶ್ ತಿಮರೋಡಿ ಮನೆಯಿಂದ ಸ್ವಲ್ಪ ದೂರದಲ್ಲಿರುವ ಸಹೋದರ ಮೋಹನ್ ಕುಮಾರ್ ಶೆಟ್ಟಿ ಮನೆಯಲ್ಲೂ ಎಸ್ಐಟಿ ಶೋಧ ಮಾಡಿದೆ. ಇದನ್ನೂ ಓದಿ: ಗಿರೀಶ್ ಮಟ್ಟಣ್ಣವರ್ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು
ತಿಮರೋಡಿ ಮನೆ ಮೇಲೆ ರೇಡ್ಗೆ ಕಾರಣಗಳೇನು?
* ತಿಮರೋಡಿ ಹೆಸರು ಬಾಯ್ಬಿಟ್ಟಿರುವ ಚಿನ್ನಯ್ಯ
* ಚಿನ್ನಯ್ಯಗೆ ಆಶ್ರಯ ಕೊಟ್ಟಿದ್ದ ಮಹೇಶ್ ತಿಮರೋಡಿ
* ತಿಮರೋಡಿ ಮನೆಯಲ್ಲೇ ಯೂಟ್ಯೂಬ್ ಚಾನೆಲ್ಗಳಿಗೆ ಸಂದರ್ಶನ
* 5ಕ್ಕೂ ಅಧಿಕ ಯೂಟ್ಯೂಬರ್ಗಳ ತಂಡ ತಿಮರೋಡಿ ಮನೆಯಲ್ಲೇ ವಾಸ್ತವ್ಯ
* ಎಸ್ಐಟಿ ವಿಚಾರಣೆ ವೇಳೆ ತಿಮರೋಡಿ ಮನೆಗೆ ಹೋಗ್ತಿದ್ದ ಚಿನ್ನಯ್ಯ
* ತಿಮರೋಡಿ ತನ್ನ ಮೊಬೈಲ್ ಕಸಿದುಕೊಂಡಿದ್ದಾಗಿ ಹೇಳಿದ್ದ ಚಿನ್ನಯ್ಯ
ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಚಿನ್ನಯ್ಯ ವಾಸ್ತವ್ಯವಿದ್ದ ಕೋಣೆಯಲ್ಲಿ ಆತ ಬಳಸುತ್ತಿದ್ದ ಮೊಬೈಲ್ ಪತ್ತೆಯಾಗಿದೆ. ಎಸ್ಐಟಿ ಅಧಿಕಾರಿಗಳು ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಜೊತೆಗೆ ಚಿನ್ನಯ್ಯ ಬಳಸುತ್ತಿದ್ದ ವಸ್ತ್ರ, ಆತ ಊರಿಂದ ತಂದಿದ್ದ ಬ್ಯಾಗ್ಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ. ನಿರಂತರವಾದ ತನಿಖೆ ವೇಳೆ ಹಲವು ಮಹತ್ವದ ವಿಚಾರಗಳು ಎಸ್ಐಟಿಗೆ ಲಭ್ಯವಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಮನೆಯ ಸಿಸಿ ಕ್ಯಾಮೆರಾ ಎಸ್ಐಟಿ ವಶಕ್ಕೆ ಪಡೆದುಕೊಂಡಿದೆ. ತಿಮರೋಡಿ ಸಿಗದೇ ಇರೋದ್ರಿಂದ ನೋಟೀಸ್ ನೀಡಿ ಬಳಿಕ ಸುಳ್ಳು ಬುರುಡೆ ಕೇಸ್ನಲ್ಲಿ ಬಂಧನ ಮಾಡೋ ಸಾಧ್ಯತೆಯೂ ಇದೆ. ಇದನ್ನೂ ಓದಿ: ಭಾರತದ ಈ ಹಳ್ಳಿಯ ಮನೆಗಳಲ್ಲಿ ಅಡುಗೆ ಮನೆಯೇ ಇಲ್ಲ – ಕಾರಣ ಏನು? ಆಹಾರ ಸೇವನೆ ಹೇಗೆ?
ಇಷ್ಟೆಲ್ಲಾ ಬೆಳವಣಿಗೆಯ ನಡುವೆ ಎಸ್ಐಟಿ ತನಿಖೆ ಮಾತ್ರ ನಿಗೂಢವಾಗಿಯೇ ನಡೆಯುತ್ತಿದೆ. ಒಟ್ಟಿನಲ್ಲಿ ಎಸ್ಐಟಿ ತನಿಖೆ ಕ್ಷಿಪ್ರ ಗತಿಯಲ್ಲಿ ನಡೆಸಲಾಗುತ್ತಿದೆ. ತನಿಖೆ ವಿವಿಧ ಆಯಾಮಗಳಲ್ಲಿ ನಡೆಯುತ್ತಿದ್ದು, ಸತ್ಯ ಏನಿದೆ ಅನ್ನೋದೇ ಕುತೂಹಲ ಹುಟ್ಟಿಸಿದೆ. ಇದನ್ನೂ ಓದಿ: ಗಣೇಶನಿಗೆ ಮೊದಲ ಪೂಜೆ ಯಾಕೆ?