Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಸಹಿಯನ್ನೇ ತಿರುಚಲಾಗಿದೆ, 1 ದಿನವಾದ್ರೂ ಜೈಲಿಗೆ ಹಾಕಲು ಪ್ಲ್ಯಾನ್‌ ನಡೆಯುತ್ತಿದೆ: ಹೆಚ್‌ಡಿಕೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನ್ನ ಸಹಿಯನ್ನೇ ತಿರುಚಲಾಗಿದೆ, 1 ದಿನವಾದ್ರೂ ಜೈಲಿಗೆ ಹಾಕಲು ಪ್ಲ್ಯಾನ್‌ ನಡೆಯುತ್ತಿದೆ: ಹೆಚ್‌ಡಿಕೆ ಕಿಡಿ

Bengaluru City

ನನ್ನ ಸಹಿಯನ್ನೇ ತಿರುಚಲಾಗಿದೆ, 1 ದಿನವಾದ್ರೂ ಜೈಲಿಗೆ ಹಾಕಲು ಪ್ಲ್ಯಾನ್‌ ನಡೆಯುತ್ತಿದೆ: ಹೆಚ್‌ಡಿಕೆ ಕಿಡಿ

Public TV
Last updated: August 21, 2024 3:23 pm
Public TV
Share
2 Min Read
hd kumaraswamy
SHARE

– ಭ್ರಷ್ಟಾಚಾರದ ವಿರುದ್ಧ ಮಾತನಾಡಿದ್ದಕ್ಕೆ ಟಾರ್ಗೆಟ್‌
– ಅಧಿಕಾರಿಗಳು ಮಾಡಿದ ತಪ್ಪಿಗೆ ನನ್ನ ವಿರುದ್ಧ ಕ್ರಮ

ಬೆಂಗಳೂರು: ಸರ್ಕಾರದ ಭ್ರಷ್ಟಾಚಾರ (Corruption) ಬಗ್ಗೆ ವಿರುದ್ಧ ಮಾತನಾಡುತ್ತಿರುವುದಕ್ಕೆ ಸಿದ್ದರಾಮಯ್ಯ (Siddaramaiah) ಸರ್ಕಾರ ನನ್ನನ್ನು ಟಾರ್ಗೆಟ್ ಮಾಡಿದೆ. ಒಂದು ದಿನವಾದರೂ ಜೈಲಿಗೆ ಹಾಕಿಸಬೇಕು ಅಂತ ನನ್ನ ಸಹಿ ತಿರುಚಿರುವ ದಾಖಲಾತಿಗಳನ್ನ ಇಟ್ಟುಕೊಂಡು ಪ್ರಯತ್ನ ಮಾಡುತ್ತಿದ್ದಾರೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ರಾಜ್ಯ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.

ಸಾಯಿ ವೆಂಕಟೇಶ್ವರ ಮೈನಿಂಗ್ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದಕ್ಕೆ ಹೆಚ್‌ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ನನ್ನ ವಿರುದ್ದ ಷಡ್ಯಂತ್ರ ಮಾಡುತ್ತಿದೆ. ನನ್ನನ್ನ ಒಂದು ದಿನವಾದರೂ ಜೈಲಿಗೆ ಹಾಕಲು ಪ್ಲ್ಯಾನ್ ನಡೆಯುತ್ತಿದೆ. ಸಾಯಿ ವೆಂಕಟೇಶ್ವರ ಮೈನಿಂಗ್ ಕೇಸ್ ನಲ್ಲಿ ನನ್ನ ಸಹಿಯನ್ನೇ ನಕಲು ಮಾಡಿದ್ದಾರೆ. ನಾನು ಸಹಿ ಮಾಡಿದೇ ಹೋದರೂ ನನ್ನ ಸಹಿ ಅಂತ ಕೇಸ್ ನಡೆಯುತ್ತಿದೆ. ಅಧಿಕಾರಿಗಳು ಮಾಡಿರುವ ತಪ್ಪಿಗೆ ನನ್ನ ಮೇಲೆ ಕ್ರಮಕ್ಕೆ ಮುಂದಾಗಿದ್ದು, ಇದು ರಾಜ್ಯ ಸರ್ಕಾರದ ಸೇಡಿನ ರಾಜಕೀಯ ಎಂದು ವಾಗ್ದಾಳಿ ನಡೆಸಿದರು.

ಸಾಯಿ ವೆಂಕಟೇಶ್ವರ ಮಿನರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ (Supreme Court) 2017 ರಲ್ಲಿ 3 ತಿಂಗಳ ಒಳಗೆ ಎಸ್‌ಐಟಿ ತನಿಖೆ ಮಾಡಿ ವರದಿ ನೀಡುವಂತೆ ಸೂಚಿಸಿತ್ತು. ಆದರೆ ಈ ಸರ್ಕಾರ 2024 ಆದರೂ ಸುಪ್ರೀಂಗೆ ತನಿಖಾ ವರದಿ ಸಲ್ಲಿಕೆ ಮಾಡಿಲ್ಲ. ಅದನ್ನು ಬಿಟ್ಟು ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಿ ಎಂದು ಎಸ್‌ಐಟಿ ಮೂಲಕ ಪತ್ರ ಬರೆಸಿ ಹೇಗಾದರೂ ಮಾಡಿ ನನ್ನನ್ನ ಸಿಲುಕಿಸಬೇಕು ಎಂದು ಪ್ಲ್ಯಾನ್‌ ಮಾಡಿದೆ ಎಂದು ಆರೋಪಿಸಿದರು

2017 ರಿಂದಲೂ ನನ್ನನ್ನ ಜೈಲಿಗೆ ಹಾಕಿಸಲು ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಿದ್ದಾರೆ. ಸರ್ಕಾರದ ಭ್ರಷ್ಟಾಚಾರ ವಿರುದ್ದ ನಾನು ಮಾತಾಡಿದ್ದಕ್ಕೆ ನನ್ನ ವಿರುದ್ದ ಕುತಂತ್ರ ನಡೆಯುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮಂಡ್ಯದಲ್ಲಿ ಪತಿ-ಪತ್ನಿ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಹೆಂಡತಿ ಶವ ಪತ್ತೆ – ಕೆರೆಗೆ ಹಾರಿ ಗಂಡ ಆತ್ಮಹತ್ಯೆ

 

ಸಿದ್ದರಾಮಯ್ಯ ಮೇಲೆ ಲೋಕಾಯುಕ್ತದಲ್ಲಿ 61 ಕೇಸ್ ಇವೆ. ಇದೂವರೆಗೂ 50 ಕೇಸ್ ತನಿಖೆಯೇ ಆಗಿಲ್ಲ. ತಮ್ಮ ಮೇಲಿನ ಕೇಸ್ ಮುಚ್ಚಿ ಹಾಕಲು ಎಸಿಬಿ ರಚನೆ ಮಾಡಿದರು. ಆದರೂ ನನ್ನ ಜೀವನ ತೆರದ ಪುಸ್ತಕ ಅಂತ ಭಜನೆ ಮಾಡುತ್ತಾರೆ. ನನ್ನ ವಿರುದ್ದ ನಿತ್ಯ ಸಭೆಗಳನ್ನು ಮಾಡುತ್ತಿದ್ದಾರೆ. ಸಿಎಂ ಕಾನೂನು ಸಲಹೆಗಾರರು ಅವರಿಗೆ ಸಲಹೆ ಕೊಡ್ತಿದ್ದಾರೆ. ಇಷ್ಟೆಲ್ಲ ನನ್ನ ಮೇಲೆ ಆರೋಪ ಮಾಡುವ ಸಿದ್ದರಾಮಯ್ಯ ಬೆಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಅದಿರು ಕದ್ದವರಿಗೆ ಮತ್ತೆ ಮೈನಿಂಗ್ ಮಾಡಲು ಅಕ್ರಮವಾಗಿ ಅವಕಾಶ ಕೊಟ್ಟಿದೆ. ಸಮಯ ಬಂದಾಗ ದಾಖಲಾತಿ ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು.

ಕುಮಾರಸ್ವಾಮಿ ಮುಗಿಸಲು ಏನಾದರೂ ಹುಡುಕಿ ಎಂದು ಸಿಎಂ ಅಂಡ್ ಟೀಂ ಸದಸ್ಯರು ಓಡಾಡುತ್ತಿದ್ದಾರೆ. ಕುಮಾರಸ್ವಾಮಿ ವಿರುದ್ಧ ದಾಖಲಾತಿ ತೆಗೆಯಬೇಕು ಅಂತ ನಿತ್ಯ ಕೆಲಸ ಮಾಡುತ್ತಿದ್ದಾರೆ. ನನ್ನ ಮೇಲೆ ಯಾಕೆ ದ್ವೇಷ? ನನ್ನ ಮೇಲೆ ಇವರಿಗೆ ಇರುವ ಆತಂಕಕ್ಕೆ ಹೀಗೆ ಮಾಡುತ್ತಿದ್ದಾರೆ. ಸಾಯಿ ವೆಂಕಟೇಶ್ವರ ಮೈನಿಂಗ್ ಕೇಸ್ ಸಂಬಂಧ ನಾನು ಲೀಗಲ್ ಫೈಟ್ ಮಾಡುತ್ತೇನೆ. ಇಂತಹ ಪರಿಸ್ಥಿತಿಗಳಲ್ಲಿ ಕಾನೂನು ಮೊರೆ ಹೋಗಲೇಬೇಕು ಎಂದರು.

 

TAGGED:bengaluruhd kumaraswamysiddaramaiahSupreme Courtಬೆಂಗಳೂರುಸಿದ್ದರಾಮಯ್ಯಸುಪ್ರೀಂ ಕೋರ್ಟ್ಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
8 minutes ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
18 minutes ago
Bhopal Boy Stabbed
Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
By Public TV
24 minutes ago
iran protest 1
Latest

ಕೂಡಲೇ ದೇಶ ತೊರೆಯಿರಿ – ಇರಾನ್‌ನಲ್ಲಿರೋ ಭಾರತೀಯ ಪ್ರಜೆಗಳಿಗೆ ವಾರ್ನಿಂಗ್‌

Public TV
By Public TV
38 minutes ago
Bandipur Tiger Reserve
Chamarajanagar

ಪರ-ವಿರೋಧದ ನಡುವೆ ಸಫಾರಿ ಪುನಾರಂಭ – ಸರ್ಕಾರದ ಗೈಡ್‌ಲೈನ್ಸ್ ಪ್ರಕಾರ ಸಮಯ ನಿಗದಿ

Public TV
By Public TV
39 minutes ago
canara bank robbery attempt
Bengaluru City

ಶೇಷಾದ್ರಿಪುರಂನಲ್ಲಿ ಕೆನರಾ ಬ್ಯಾಂಕ್ ಕನ್ನ ಯತ್ನ ವಿಫಲ – ಗ್ರಿಲ್ ಕೊರೆದು ನುಗ್ಗಿದ ಕಳ್ಳರು

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?