ಬೆಂಗಳೂರು: ಬಿಜೆಪಿಯ ಮೊದಲ ವಿಕೆಟ್ ಪತನಗೊಂಡಿದ್ದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ (BJP MLC Puttanna) ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.
ಕೆಪಿಸಿಸಿ (KPCC) ಕಚೇರಿಯಲ್ಲಿ ಗುರುವಾರ ಸಂಜೆ ಸುರ್ಜೇವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಪುಟ್ಟಣ್ಣ ಕಾಂಗ್ರೆಸ್ (Congress) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ದಶಪಥ ರಸ್ತೆ ಜೆಡಿಎಸ್ ಸರ್ಕಾರದ ಕೊಡುಗೆ – ಶಾಸಕ ಪುಟ್ಟರಾಜು
ಜಂಟಿ ಮಾಧ್ಯಮಗೋಷ್ಠಿ, ಕೆಪಿಸಿಸಿ ಕಚೇರಿ. https://t.co/S6h1wGe1bu
— Karnataka Congress (@INCKarnataka) March 9, 2023
ಇಂದು ಮಧ್ಯಾಹ್ನ ಪರಿಷತ್ ಸ್ಥಾನಕ್ಕೆ ಪುಟ್ಟಣ್ಣ ರಾಜೀನಾಮೆ ನೀಡಿದ್ದಾರೆ. ಸೇರ್ಪಡೆ ಸ್ಥಳಕ್ಕೆ ಬರುವ ವಿಚಾರದಲ್ಲಿ ಪುಟ್ಟಣ್ಣ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
ಪಕ್ಷವನ್ನು ಅಧಿಕಾರಕ್ಕೆ ತರಲು ತಮ್ಮನ್ನು ಚೆನ್ನಾಗಿ ಬಳಸಿಕೊಂಡಿದ್ದರು. ಬಳಿಕ ನನ್ನನ್ನು ಬಿಜೆಪಿ ನಾಯಕರು ನಿರ್ಲಕ್ಷಿಸಿದ್ದಾರೆ ಎಂದು ಪುಟ್ಟಣ್ಣ ಆಪ್ತರ ಬಳಿ ನೋವು ತೋಡಿಕೊಂಡಿದ್ದರು. ಪುಟ್ಟಣ್ಣ ಅವರು 2019ರಲ್ಲಿ ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದು, ಪರಿಷತ್ತಿಗೆ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದರು.