ಕಾರವಾರ: ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ನೀರುಪಾಲಾದ ಘಟನೆ ದಾಂಡೇಲಿ (Dandeli) ತಾಲೂಕಿನ ಅಕ್ವಾಡ ಗ್ರಾಮದ ಕಾಳಿ ನದಿಯಲ್ಲಿ (Kali River) ನಡೆದಿದೆ.
ಹುಬ್ಬಳ್ಳಿಯ (Hubballi) ಈಶ್ವರ ನಗರದ ನಿವಾಸಿಗಳಾದ ನಜೀರ್ ಅಹ್ಮದ್ (40),ಅಲ್ಛೀಯಾ ಅಹ್ಮದ್ (10),ಮೋಹಿನ್ ಅಹ್ಮದ್ (6),ರೇಷಾ ಉನ್ನಿಸಾ (38),ಇಫ್ರಾಅಹ್ಮದ್ (15),ಅಬೀದ್ ಅಹ್ಮದ್ (12) ಮೃತಪಟ್ಟಿದ್ದು ದಡದಲ್ಲಿದ್ದ ಇಬ್ಬರು ಸುರಕ್ಷಿತರಾಗಿದ್ದಾರೆ. ಇದನ್ನೂ ಓದಿ: ಈ ದೇಶಕ್ಕೆ ಹಿಡಿದಿರುವ ಶನಿ ಅಂದ್ರೆ ಅದು ಮೋದಿ: ರಮೇಶ್ ಕುಮಾರ್ ಆಕ್ಷೇಪಾರ್ಹ ಹೇಳಿಕೆ
ಮೃತರು ಒಂದೇ ಕುಟುಂಬದವರಾಗಿದ್ದು ಎಂಟು ಜನರು ವಾಹನ ಮಾಡಿಕೊಂಡು ದಾಂಡೇಲಿ ಭಾಗಕ್ಕೆ ಪ್ರವಾಸ ಬಂದಿದ್ದರು. ಈಜುವ ವೇಳೆ ಮುಳುಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ಅನಾರೋಗ್ಯ – ಇಂಡಿಯಾ ಒಕ್ಕೂಟದ ರ್ಯಾಲಿಗೆ ಗೈರು
ದಾಂಡೇಲಿ ಪೊಲೀಸರು ಆರು ಜನರ ದೇಹಗಳನ್ನು ಹೊರತೆಗೆದಿದ್ದಾರೆ. ಮೃತ ದೇಹಗಳನ್ನು ದಾಂಡೇಲಿ ಆಸ್ಪತ್ರೆಗೆ ರವಾನಿಸಿದ್ದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.