ಚೆನ್ನೈ: ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು (Road Accident) ಮತ್ತು ಅವುಗಳಿಂದ ಉಂಟಾಗುವ ಸಾವಿನ ಸಂಖ್ಯೆಗಳು ಹೆಚ್ಚುತ್ತಲೇ ಇವೆ. ಕೆಲ ದಿನಗಳ ಹಿಂದಷ್ಟೇ ಕರ್ನೂಲ್ ಬಳಿ ಸಂಭವಿಸಿದ ಬಸ್ ಬೆಂಕಿ ದುರಂತಕ್ಕೆ 20 ಮಂದಿ ಬಲಿಯಾಗಿದ್ದರು. ಇದಾದ ಬೆನ್ನಲ್ಲೇ ಜಲ್ಲಿಕಲ್ಲು ತುಂಬಿದ ಟ್ರಕ್ನ ಚಾಲಕ ಗುಂಡಿ ತಪ್ಪಿಸಲು ಹೋಗಿ ಬಸ್ಗೆ ಡಿಕ್ಕಿ (Bus Collide) ಹೊಡೆದ. ಪರಿಣಾಮ ಜಲ್ಲಿಕಲ್ಲು ಬಸ್ ಮೇಲೆ ಹರಡಿ ಪ್ರಯಾಣಿಕರು ಮೃತಪಟ್ಟರು. ಮತ್ತೊಂದೆಡೆ, ಜೈಪುರದಲ್ಲಿ ಅತಿವೇಗದಲ್ಲಿ ಚಲಿಸಿದ ಡಂಪರ್ ಟ್ರಕ್ 12ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದು 14 ಜನರು ಸಾವನ್ನಪ್ಪಿದರು. ಇಂತಹ ಒಂದಿಲ್ಲೊಂದು ಅಪಘಾತಗಳು ನಡೆಯುತ್ತಲೇ ಇವೆ.
தனியார் பேருந்துகள் நேருக்கு நேர் மோதி விபத்து
தென்காசி மாவட்டம் இடைகால் அருகே 2 தனியார் பேருந்துகள் நேருக்கு நேர் மோதிய விபத்தில் 6 பேர் உயிரிழப்பு
காயமடைந்தவர்கள் மீட்கப்பட்டு மருத்துவமனையில் சிகிச்சைக்காக அனுமதி. #Tenkasi #Accident #Bus pic.twitter.com/3zXZV0sEFJ
— M.M.NEWS உடனடி செய்திகள் (@rajtweets10) November 24, 2025
ಇದರ ನಡುವೆ ತಮಿಳುನಾಡಿನಲ್ಲಿ (Tamil Nadu) ಮತ್ತೊಂದು ಭೀಕರ ಅಪಘಾತ ನಡೆದಿದೆ. ಎರಡೂ ಖಾಸಗಿ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 6 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಇದನ್ನೂ ಓದಿ: Hassan | ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲು
ತಮಿಳುನಾಡಿನ ತೆಂಕಾಸಿ ಜಿಲ್ಲೆಯ ಇಡಕಲ್ ಬಳಿ ಘಟನೆ ನಡೆದಿದ್ದು, ಸುಮಾರು 28 ಮಂದಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದ ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಬೆಂಗಳೂರು – ಚೆನ್ನೈ ಎಕ್ಸ್ಪ್ರೆಸ್ವೇಯಲ್ಲಿ ಬ್ರಿಡ್ಜ್ನಿಂದ ಕೆಳಗುರುಳಿದ ಕಾರು; ನಾಲ್ವರು ಸಾವು

