ವಿಜಯನಗರ: ಹಕ್ಕು ಪತ್ರ ನೀಡುವುದರಲ್ಲಿ ಕರ್ನಾಟಕ (Karnataka) ದೇಶದ ಮೊದಲ ರಾಜ್ಯವಾಗಬೇಕು. ಹಕ್ಕು ಪತ್ರ ನೀಡುವ ಮೂಲಕ ಆರನೇ ಗ್ಯಾರಂಟಿ ಜಾರಿ ಮಾಡಿದ್ದೇವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ (Sadhana Samavesha) ಮಾತನಾಡಿದ ಅವರು, ನಾವು ಐದು ಗ್ಯಾರಂಟಿಗಳ ಜೊತೆಗೆ ಬಡ ಜನರಿಗೆ ಹಕ್ಕು ಪತ್ರ ಕೊಡಬೇಕು ಎಂದುಕೊಂಡಿದ್ದೆವೆ. ಇಲ್ಲಿ ಎಲ್ಲಾ ಜಾತಿ ಧರ್ಮದವರಿದ್ದಾರೆ. ಇವರಿಗೆ ಹತ್ತಾರು ವರ್ಷದಿಂದ ಆಸ್ತಿಗಳ ಪತ್ರ ಇರಲಿಲ್ಲ. ಈ ವಿಷಯದ ಬಗ್ಗೆ ನಮ್ಮ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿದೆ. ಇಂದು ಅತ್ಯಂತ ಸಂತಸದಿಂದ ಹೇಳುತ್ತಿದ್ದೇನೆ. ಇವತ್ತು ನಾವು ಅವರಿಗೆ ಹಕ್ಕು ಪತ್ರ ಕೊಟ್ಟಿದ್ದೇವೆ. ಒಂದು ಲಕ್ಷ ಕುಟುಂಬಕ್ಕೆ ನಾವು ಅವರ ಆಸ್ತಿಗಳ ಹಕ್ಕು ವರ್ಗಾವಣೆ ಮಾಡಿದ್ದೇವೆ. ಇಂದಿರಾಗಾಂಧಿ ಅವರು ಕನಸು ಕೂಡಾ ಇದಾಗಿತ್ತು. ಅದನ್ನ ಇವತ್ತು ನನಸು ಮಾಡಿದ್ದೇವೆ ಎಂದು ಹೇಳಿದರು.
ಇನ್ನಷ್ಟು ಪ್ರದೇಶಗಳನ್ನು ಕಂದಾಯ ಗ್ರಾಮ ಮಾಡುವ ಉದ್ದೇಶವಿದೆ. ಯಾರೊಬ್ಬರೂ ಹಕ್ಕು ಪತ್ರ ಇಲ್ಲದೇ ಇರಬಾರದು. ಗ್ಯಾರಂಟಿ ಸಮಿತಿಗಳು ಹಕ್ಕು ಪತ್ರ ಪರಿಶೀಲಿಸುವ ಕೆಲಸ ಮಾಡಬೇಕು. ನಾವು ಕೊಟ್ಟ ಯೋಜನೆ, ಹಣ ಬಡ ಜನರಿಗೆ ಅನುಕೂಲ ಆಗುತ್ತಿದೆ ಎಂದರು. ಇದನ್ನೂ ಓದಿ: ಲಿಫ್ಟ್ನಲ್ಲಿ ಹಠ ಹಿಡಿದು ದರ್ಶನ್ ನಂಬರ್ ಪಡೆದ ಪವಿತ್ರಾಗೌಡ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ಪೂರ್ಣವಾಗಿದೆ. ನಾವು ಚುನಾವಣೆ ಸಮಯದಲ್ಲಿ ಕೆಲವೊಂದು ಆಶ್ವಾಸನೆ ನೀಡಿದ್ದೆವು. ನಾವು ಕೊಟ್ಟ ಗ್ಯಾರಂಟಿಯನ್ನು (Congress Guarantee) ಪುರ್ಣ ಮಾಡುವುದಿಲ್ಲ ಎಂದು ಬಿಜೆಪಿ ಜರಿದಿತ್ತು. ಪ್ರಧಾನಿ ಕೂಡಾ ಟೀಕಿಸಿದ್ದರು. ಆದರೆ ನಮ್ಮ ಸರ್ಕಾರ ಗ್ಯಾರಂಟಿಯನ್ನು ಈಡೇರಿಸಿದೆ ಎಂದು ತಿಳಿಸಿದರು.
ಗೃಹಲಕ್ಷ್ಮಿ ಮೂಲಕ ಪ್ರತೀ ಮಹಿಳೆಗೆ ಎರಡು ಸಾವಿರ ರೂ. ನೀಡಲಾಗುತ್ತದೆ. ಗೃಹ ಜ್ಯೋತಿ ಅಡಿ ಕೋಟ್ಯಂತರ ಬಡ ಕುಟುಂಬಕ್ಕೆ ವಿದ್ಯುತ್ ಕೊಟ್ಟಿದ್ದೇವೆ. ಅನ್ನ ಭಾಗ್ಯ ಯೋಜನೆ ಅಡಿ ನಾಲ್ಕು ಕೋಟಿ ಜನಕ್ಕೆ ಅಕ್ಕಿ ಕೊಟ್ಟಿದ್ದೇವೆ. ಶಕ್ತಿ ಯೋಜನೆ ಮೂಲಕ ಮಹಿಳೆಯರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾರೆ. ಯುವ ನಿಧಿ ಮೂರು ಕೋಟಿ ಯುವಕರಿಗೆ ಪ್ರತೀ ತಿಂಗಳು ಮೂರು ಸಾವಿರ ಕೊಡುತ್ತಿದ್ದೇವೆ ಎಂದು ಹೇಳುವ ಮೂಲಕ ಗ್ಯಾರಂಟಿ ಯೋಜನೆಯ ಗುಣಗಾನ ಮಾಡಿದರು. ಇದನ್ನೂ ಓದಿ: 7 ತಿಂಗಳಲ್ಲಿ 25 ಮದುವೆ; ಅಮಾಯಕರಿಗೆ ಲಕ್ಷಾಂತರ ಹಣ ವಂಚಿಸಿದ್ದ ಖತರ್ನಾಕ್ ಲೇಡಿ ಅರೆಸ್ಟ್
ನೀವು ಕೊಟ್ಟ ತೆರಿಗೆಯನ್ನು ನಿಮಗೆ ಮರಳಿಸುತ್ತಿದ್ದೇವೆ. ಈ ದೇಶದ ಕೆಲವೇ ಕುಟುಂಬಕ್ಕೆ ಆದಾಯ ಹೋಗಬೇಕು ಎನ್ನುವುದು ಬಿಜೆಪಿ ಉದ್ದೇಶ. ಬಡ ಜನರಿಗೆ ಹಣ ಹೋಗಬೇಕು ಎನ್ನುವುದು ನಮ್ಮ ಉದ್ದೇಶ ಎಂದು ಹೇಳಿದರು.