Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಿಮ್ಮನೆ ವಿರುದ್ಧ ಅಪಪ್ರಚಾರ – ಗೃಹ ಸಚಿವರನ್ನು ವಜಾಗೊಳಿಸಲು ರಮೇಶ್ ಬಾಬು ಆಗ್ರಹ

Public TV
Last updated: January 13, 2023 7:49 pm
Public TV
Share
4 Min Read
Ramesh Babu Araga Jnanendra
SHARE

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರು ಕಿಮ್ಮನೆ ರತ್ನಾಕರ್ (Kimmane Rathnakar) ಅವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರನ್ನು ಈ ಕೂಡಲೇ ಸಂಪುಟದಿಂದ ವಜಾ ಗೊಳಿಸಬೇಕು ಎಂದು ಕೆಪಿಸಿಸಿ (KPCC) ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು (Ramesh Babu) ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ಬಾಬು ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ 4 ಬಾರಿ ಸೋತಿದ್ದು, ಈಗ 4 ಬಾರಿ ಗೆಲುವು ಸಾಧಿಸಿದ್ದಾರೆ. ಸಂಘ ಪರಿವಾರದ ಹಿನ್ನೆಲೆಯಿಂದ ರಾಜಕೀಯಕ್ಕೆ ಬಂದ ಆರಗ ಜ್ಞಾನೇಂದ್ರ ಅವರು ತಾವು ಗಣೇಶ್ ಭಟ್ ಎಂಬವರಿಂದ ನೈತಿಕತೆ ಕಲಿತಿದ್ದೇನೆ, ನಾನು ಸಂಘ ಪರಿವಾರದ ನೈತಿಕತೆಯನ್ನು ಪಾಲನೆ ಮಾಡುತ್ತೇನೆ ಎಂದು ಆಗಾಗ್ಗೆ ಹೇಳುತ್ತಿರುತ್ತಾರೆ. ಅವರು ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದ ಕಿಮ್ಮನೆ ರತ್ನಾಕರ್ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ರಾಜ್ಯದಲ್ಲಿ ಸಜ್ಜನ ರಾಜಕಾರಣ ಮಾಡುವವರನ್ನು ಹುಡುಕಿದರೆ ನಮಗೆ ಸಿಗುವ ಕೆಲವೇ ಕೆಲವು ನಾಯಕರಲ್ಲಿ ಕಿಮ್ಮನೆ ರತ್ನಾಕರ್ ಕೂಡ ಒಬ್ಬರು. ಕಾಂಗ್ರೆಸ್ ಪಕ್ಷದ ಉದ್ದೇಶಗಳು ಹಾಗೂ ಕಿಮ್ಮನೆ ರತ್ನಾಕರ್ ಅವರನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದೇ ಇರುವುದರಿಂದ ಆರಗ ಜ್ಞಾನೇಂದ್ರ ಅವರು ರಾಜಕೀಯ ಸಿದ್ಧಾಂತ ರೂಪಿಸಲು ಮುಂದಾಗಿದ್ದಾರೆ ಎಂದು ಕಿಡಿ ಕಾರಿದರು.

araga jnanendra

ಪಿಎಸ್‌ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ದಿವ್ಯ ಹಾಗರಗಿ, ಸ್ಯಾಂಟ್ರೋ ರವಿ ಅವರ ಜೊತೆ ಸೇರಿ ವರ್ಗಾವಣೆ ದಂಧೆ ಮಾಡಿರುವ ಆರೋಪ ಹೊತ್ತಿರುವ ಆರಗ ಜ್ಞಾನೇಂದ್ರ ಅವರು ಈಗ ಕಿಮ್ಮನೆ ರತ್ನಾಕರ್ ಅವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ. ನಾನಿಂದು ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಅಗ್ರಹಿಸುವುದಿಲ್ಲ. ಅವರು ನೈತಿಕತೆ ಇಟ್ಟುಕೊಂಡು ರಾಜಕಾರಣ ಮಾಡಿದ್ದರೆ ಅವರು ರಾಜೀನಾಮೆ ನೀಡುತ್ತಿದ್ದರು. ಆದರೆ ಅವರು ನೈತಿಕತೆ ಕಳೆದುಕೊಂಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳಿಗೆ ಸ್ವಲ್ಪವಾದರೂ ನೈತಿಕತೆ, ಉಳಿದಿದ್ದರೆ ಅವರು ಕೂಡಲೇ ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿAದ ವಜಾಗೊಳಿಸಬೇಕು ಎಂದು ಕೇಳುತ್ತೇನೆ ಎಂದರು.

ಆರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನದಿಂದ ಇಲ್ಲಿಯವರೆಗೂ ಒಂದಲ್ಲಾ ಒಂದು ರೀತಿಯ ಹಗರಣಗಳನ್ನು ಮಾಡಿಕೊಂಡು ಬಂದಿದ್ದಾರೆ. ಆರಂಭದಲ್ಲಿ ಪೊಲೀಸರನ್ನು ನಿಂದಿಸಿ ಅವರ ನೈತಿಕ ಸ್ಥೈರ್ಯವನ್ನು ಕುಗ್ಗಿಸಿದರು. ಪಿಎಸ್‌ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ದಿವ್ಯ ಹಾಗರಗಿ ಅವರ ನಿವಾಸಕ್ಕೆ ಭೇಟಿ ನೀಡಿ ಈ ಅಕ್ರಮ ನಡೆಸಲು ಎಲ್ಲಾ ರೀತಿಯ ಸಹಕಾರವನ್ನು ನೀಡಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಇಂತಹ ಹಗರಣದಲ್ಲಿ ಸಿಲುಕಿ ಅಮಾನತುಗೊಂಡಿರುವುದು. ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಆರಗ ಜ್ಞಾನೇಂದ್ರ ಅವರೇ ಕಾರಣ ಎಂದು ಗುಡುಗಿದರು.

Kimmane Ratnakar

ಜೆಜಿ ನಗರದಲ್ಲಿ ನಡೆದ ಸಣ್ಣ ಗಲಭೆಗೆ ಕೋಮು ಗಲಭೆಯ ಬಣ್ಣವನ್ನು ನೀಡುವ ಪ್ರಯತ್ನ ಮಾಡಿದರು. ಆಗಿನ ಪೊಲೀಸ್ ಆಯುಕ್ತರು ಇದು ಸ್ಥಳೀಯವಾಗಿ ನಡೆದಿರುವ ಗಲಾಟೆ ಎಂದು ಸ್ಪಷ್ಟಪಡಿಸಿದ್ದರು. ಆದರೆ ಅವರಿಗಿಂತ ಮುಂಚಿತವಾಗಿ ಗೃಹ ಸಚಿವರು ಇದು ಸಮುದಾಯಗಳ ನಡುವಿನ ಕೋಮುಗಲಭೆ ಎಂದು ಹೇಳಿಕೆ ನೀಡಿದ್ದರು. ಇಷ್ಟೆಲ್ಲಾ ಆರೋಪ ಹೊತ್ತಿರುವ ಗೃಹ ಸಚಿವರು ಈಗ ಮಂಗಳೂರು ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ಕಿಮ್ಮನೆ ರತ್ನಾಕರ್ ಅವರ ಪಾತ್ರವಿದೆ, ಹೀಗಾಗಿ ಎನ್‌ಐಎ ಅಧಿಕಾರಿಗಳು ಕಿಮ್ಮನೆ ರತ್ನಾಕರ್ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ ಎಂಬ ಆರೋಪದ ಸುದ್ದಿಗಳನ್ನು ಹರಡುವ ಪ್ರಯತ್ನ ಮಾಡಿದ್ದಾರೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಸಿಟಿ ರವಿ ಮೇಲೆ ಕೇಸ್ ಹಾಕ್ತೀವಿ: ರಮೇಶ್ ಬಾಬು

ಸಂಘ ಪರಿವಾರದಿಂದ ಬಂದಿರುವ ಆರಗ ಜ್ಞಾನೇಂದ್ರ ಅವರು ಕೆಲವು ಮೌಲ್ಯಗಳನ್ನು ಪ್ರತಿಪಾದನೆ ಮಾಡುತ್ತಿದ್ದಾರೆ ಎಂದು ಅವರ ಮೇಲೆ ಗೌರವವನ್ನು ಇಟ್ಟುಕೊಂಡಿದ್ದೆ. ಆದರೆ ಅವರು ಇದಕ್ಕೆ ವಿರೋಧವಾಗಿ ರಾಜ್ಯದಲ್ಲಿ ಹಲವು ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಈ ರಾಜ್ಯದಲ್ಲಿ ಮಹಿಳೆಯರು, ದಲಿತರು, ಜನಸಾಮಾನ್ಯರ ಮೇಲಿನ ದೌರ್ಜನ್ಯ ಪ್ರತಿನಿತ್ಯ ಹೆಚ್ಚಾಗಿದ್ದು, ರಾಜ್ಯದಲ್ಲಿ ರೌಡಿಗಳು ಹಾಗೂ ಗೂಂಡಾಗಳು ವಿಜೃಂಭಿಸುತ್ತಿದ್ದಾರೆ. ಸಮಾಜದಲ್ಲಿ ಕೊಲೆಗಳು ಹೆಚ್ಚಾಗುತ್ತಿವೆ. ಹೀಗೆ ಗೃಹ ಸಚಿವರಾಗಿ ಆರಗ ಜ್ಞಾನೇಂದ್ರ ಅವರು ಸಂಪೂರ್ಣ ವೈಫಲ್ಯವನ್ನು ಅನುಭವಿಸಿದ್ದಾರೆ. ಅವರು ತಮ್ಮ ಈ ವೈಫಲ್ಯವನ್ನು ಒಪ್ಪಿಕೊಳ್ಳಬೇಕಾಗಿದೆ ಎಂದು ಆಗ್ರಹಿಸಿದರು.

RAMESH BABU

ಆರಗ ಜ್ಞಾನೇಂದ್ರ ಅವರು ತಮ್ಮ ಕ್ಷೇತ್ರದಲ್ಲೂ ಇಂತಹ ಅವಾಂತರಗಳಿಗೆ ಅವಕಾಶ ನೀಡಿದ್ದಾರೆ. 2018ರಲ್ಲಿ ಲಿಸ್ಟ್ ಮೂಲಕ ಕಾಂಗ್ರೆಸ್ ಪಕ್ಷ ಆ ಕಚೇರಿಯನ್ನು ಬಾಡಿಗೆ ಪಡೆದಿದ್ದು, ಅದು ಬಾಂಬ್ ಬ್ಲಾಸ್ಟ್ ಆರೋಪಿಯ ಕುಟುಂಬಕ್ಕೆ ಸೇರಿದ ಆಸ್ತಿ ಎಂಬ ನೆಪವನ್ನು ಇಟ್ಟುಕೊಂಡು ಕಿಮ್ಮನೆ ರತ್ನಾಕರ್ ಅವರ ಮನೆ ಮೇಲೆ ಎನ್‌ಐಎ ದಾಳಿ ನಡೆಸಿದೆ ಎಂಬ ರೀತಿಯಲ್ಲಿ ವ್ಯವಸ್ಥಿತವಾದ ಸುಳ್ಳು ಪ್ರಚಾರವನ್ನು ಮಾಡಿದ್ದಾರೆ. ಮುಖ್ಯಮಂತ್ರಿಗಳು ಆರಗ ಅವರನ್ನು ಸಂಪುಟದಿಂದ ಕೈ ಬಿಡದಿದ್ದರೆ ತೀರ್ಥಹಳ್ಳಿಯಿಂದಲೇ ಇವರ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಸ್ಯಾಂಟ್ರೋ ರವಿ ಅರೆಸ್ಟ್‌ – ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ..

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Araga JnanendracongressKimmane RathnakarKPCCramesh babuಆರಗ ಜ್ಞಾನೇಂದ್ರಕಾಂಗ್ರೆಸ್ಕಿಮ್ಮನೆ ರತ್ನಾಕರ್ಕೆಪಿಸಿಸಿರಮೇಶ್ ಬಾಬು
Share This Article
Facebook Whatsapp Whatsapp Telegram

Cinema Updates

Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
3 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
5 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
6 hours ago
akhil akkineni
ಜೂನ್‌ನಲ್ಲಿ ಝೈನಾಬ್ ಜೊತೆ ಅಖಿಲ್ ಅಕ್ಕಿನೇನಿ ಮದುವೆ?
7 hours ago

You Might Also Like

Uttar Pradesh Operation Langda
Latest

ಯುಪಿಯಲ್ಲಿ ರೇಪಿಸ್ಟ್, ಕೊಲೆಗಾರರ ವಿರುದ್ಧ ‘ಆಪರೇಷನ್ ಲಂಗ್ಡಾ’ – 11 ಕ್ರಿಮಿನಲ್ಸ್ ಕಾಲಿಗೆ ಗುಂಡೇಟು

Public TV
By Public TV
8 minutes ago
Hassan Student Heart Attack
Crime

Hassan | ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
23 minutes ago
Thawar Chand Gehlot
Bengaluru City

ಮುಸ್ಲಿಮರಿಗೆ 4%ರಷ್ಟು ಗುತ್ತಿಗೆ ಮೀಸಲಿಗೆ ಒಪ್ಪದ ಗವರ್ನರ್ – ರಾಷ್ಟ್ರಪತಿಗಳ ಅಂಗಳಕ್ಕೆ ರವಾನೆ?

Public TV
By Public TV
2 hours ago
Madhabi Puri Buch
Latest

ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ಗೆ ಲೋಕಪಾಲ್ ಕ್ಲೀನ್ ಚಿಟ್

Public TV
By Public TV
3 hours ago
Shashi Tharoor 1
Latest

ಶಶಿ ತರೂರ್ ಬಿಜೆಪಿಯ ಸೂಪರ್ ವಕ್ತಾರ ಆಗಿದ್ದಾರೆ: ಕಾಂಗ್ರೆಸ್ ಕಿಡಿ

Public TV
By Public TV
3 hours ago
Rishabh Pant 4
Cricket

RCB ವಿರುದ್ಧದ ಪಂದ್ಯದಲ್ಲಿ ನಾನಾ ಅವತಾರ – ಪಂತ್‌ ಸೇರಿ ಎಲ್‌ಎಸ್‌ಜಿಗೆ ಬಿತ್ತು ಭಾರಿ ದಂಡ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?