ಹೈದರಾಬಾದ್: ನನ್ನನ್ನು ಪ್ಯಾಕೇಜ್ ಸ್ಟಾರ್ (Package Star) ಎಂದು ಅಣುಕಿಸುವವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದು ಜನಸೇನಾ (Jana Sena) ಮುಖ್ಯಸ್ಥ, ನಟ ಪವನ್ ಕಲ್ಯಾಣ್ (Pavan Kalyan) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಂಧ್ರಪ್ರದೇಶದಲ್ಲಿ (Andra Pradesh) ತೆಲುಗು ದೇಶಂ ಪಕ್ಷದೊಂದಿಗೆ ಪವನ್ ಕಲ್ಯಾಣ್ ಕೈಜೋಡಿಸಿ ಕೆಲಸ ಮಾಡುತ್ತಿದ್ದಾರೆ ಎಂದು ಜಗನ್ ರೆಡ್ಡಿ (Jagan Reddy) ಅವರು ಆರೋಪಿಸಿದ್ದರು. ಈ ಬಗ್ಗೆ ಪವನ್ ಕಲ್ಯಾಣ್ ಅವರನ್ನು ಸಿಕ್ಕಾಪಟ್ಟೆ ಟ್ರೋಲ್ ಮಾಡಲಾಗುತ್ತಿದೆ. ಇದನ್ನೂ ಓದಿ: ಆಂಧ್ರ ಸಚಿವೆ ರೋಜಾ ಕಾರಿನ ಮೇಲೆ ಪವನ್ ಕಲ್ಯಾಣ್ ಬೆಂಬಲಿಗರಿಂದ ದಾಳಿ
- Advertisement 2
- Advertisement 3
ಇಂದು ಇದೇ ವಿಚಾರವಾಗಿ ಗುಂಟೂರಿನ (Guntur) ಮಂಗಳಗಿರಿಯಲ್ಲಿ (Mangalagiri) ನಡೆದ ಸಭೆಯಲ್ಲಿ ವೇದಿಕೆ ಮೇಲೆ ಮಾತನಾಡಿದ ಪವನ್ ಕಲ್ಯಾಣ್ ಅವರು, “ನನ್ನನ್ನು ‘ಪ್ಯಾಕೇಜ್ ಸ್ಟಾರ್’ ಎಂದು ಕರೆಯುವವರಿಗೆ ನನ್ನ ಲೆಫ್ಟ್ ಹ್ಯಾಂಡ್ ರೈಟ್ ಚಪ್ಪಲಿಯಿಂದ ಬಾರಿಸುತ್ತೇನೆ. ಇನ್ನೊಮ್ಮೆ ‘ಪ್ಯಾಕೇಜ್ ಸ್ಟಾರ್’ ಅಂತ ಕರೆಯಿರಿ, ಇದೇ ಚಪ್ಪಲಿಯಿಂದ ನಿಮ್ಮನ್ನು ಹೊಡೆಯುತ್ತೇನೆ ಎಂದು ಚಪ್ಪಲಿಯನ್ನು ಕೈಯಲ್ಲಿ ಎತ್ತಿ ಹಿಡಿದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಿಂದ ಶ್ರೀಲಂಕಾಗೆ ಶ್ರೀರಾಮ ನಡೆದದ್ದಕ್ಕಿಂತ ಹೆಚ್ಚು ರಾಹುಲ್ ಗಾಂಧಿ ಪಾದಯಾತ್ರೆ ಮಾಡ್ತಿದ್ದಾರೆ – ಕಾಂಗ್ರೆಸ್ ನಾಯಕ
- Advertisement 4
ಶನಿವಾರ ಸಂಜೆ ಸ್ಥಳೀಯ ವಿಮಾನ ನಿಲ್ದಾಣದ ಆವರಣದಲ್ಲಿ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿ) ನಾಯಕಿ ಆರ್.ಕೆ. ರೋಜಾ ಅವರ ಕಾರಿನ ಮೇಲೆ ಪವನ್ ಕಲ್ಯಾಣ್ ಅವರ ಬೆಂಬಲಿಗರು ದಾಳಿ ನಡೆಸಿದ್ದರು. ಈ ಸಂಬಂಧ ಇದೀಗ ವಿಶಾಖಪಟ್ಟಣಂ ಪೊಲೀಸರು ಪವನ್ ಕಲ್ಯಾಣ್ ಅವರಿಗೆ ನೋಟಿಸ್ ನೀಡಿದ್ದಾರೆ.