ಎಸ್.ಎಂ ಕೃಷ್ಣರಿಂದ ಈ ಬಾರಿ ದಸರಾ ಉದ್ಘಾಟನೆ: ಬೊಮ್ಮಾಯಿ

Public TV
1 Min Read
SM Krishna Basavaraj Bommai 3

ಬೆಂಗಳೂರು: ದಸರಾ ಮಹೋತ್ಸವಕ್ಕೆ ಪೂಜೆ ಮಾಡಲು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಉದ್ಘಾಟಕರು. ಎಸ್.ಎಂ ಕೃಷ್ಣರಿಂದ ಈ ಬಾರಿ ದಸರಾ ಉದ್ಘಾಟನೆ ನಡೆಯಲಿದೆ. ಈ ಕುರಿತು ಇಂದಿನ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

SM Krishna Basavaraj Bommai

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಮೈಸೂರು ದಸರಾ ಆಚರಣೆ ಕುರಿತ ಸಭೆ ನಡೆಯಿತು. ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ದಸರಾ ಉನ್ನತ ಮಟ್ಟದ ಸಮಿತಿ ಸದಸ್ಯರು ಭಾಗಿಯಾಗಿದ್ದರು. ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಅನ್ನೋ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದನ್ನೂ ಓದಿ:  ಕಾಂಗ್ರೆಸ್ ಸೇರ್ಪಡೆಗೆ ಎಷ್ಟು ಜನ ಆಸಕ್ತರು ಎಂದು ಹೇಳಲ್ಲ: ಡಿಕೆಶಿ

sM Krishna Basavaraj Bommai 1

ಎಸ್.ಎಂ ಕೃಷ್ಣ ಕೇವಲ ಸಿಎಂ ಆಗಿದ್ದವರು ಮಾತ್ರ ಅಲ್ಲ, ಅವರ ಯೋಗದಾನ ಬಹಳ ಇದೆ. ಅವರು ಹಲವು ಉತ್ತಮ ಸೇವೆಗಳನ್ನು ಮಾಡಿದ್ದಾರೆ. ಎಸ್.ಎಂ ಕೃಷ್ಣ ಒಬ್ಬ ಮುತ್ಸದ್ಧಿ ರಾಜಕಾರಣಿಯಾಗಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಇದನ್ನೂ ಓದಿ:  ಜೆಡಿಎಸ್‍ನದ್ದು ಮಿಷನ್ 123, ಬಿಜೆಪಿ 150, ನಮ್ಮದು 224: ಡಿಕೆಶಿ

SM Krishna Basavaraj Bommai 2

ಬಿಪಿಎಲ್ ಕುಟುಂಬಗಳಿಗೆ 1 ಲಕ್ಷ ರೂ.  ಪರಿಹಾರ ಕೊಡಲು ನಿರ್ಧಾರ ಮಾಡಿದ್ದೆವು. ಆ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ, ಘೋಷಣೆ ಮಾಡಿದಂತೆ 1 ಲಕ್ಷ ರೂ ಪರಿಹಾರ ಕೊಡುತ್ತಿದ್ದೇವೆ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *