– ಕೇಂದ್ರ ಸಚಿವ ಜೋಶಿ ಅವರಿಂದ ಪ್ರೇಮಾ ಕೃಷ್ಣ ಅವರಿಗೆ ಪ್ರಧಾನಿ ಶೋಕ ಸಂದೇಶ ಹಸ್ತಾಂತರ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್.ಎಂ ಕೃಷ್ಣ (SM Krishna) ಅವರ ನಿಧನಕ್ಕೆ ಸಂತಾಪ ಸೂಚಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ರಾತ್ರಿ ಶೋಕ ಸಂದೇಶ ಕಳಿಸಿದ್ದಾರೆ.
ಕೇಂದ್ರ ಸರ್ಕಾರದ ಪರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರ ಮೂಲಕ ಪ್ರಧಾನಿ ಮೋದಿ ಅವರು ಶೋಕ ಸಂದೇಶವುಳ್ಳ ಪತ್ರ ಕಳಿಸಿದ್ದು, ಸಚಿವ ಜೋಶಿ ಮತ್ತು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಜೊತೆಗೂಡಿ ಪ್ರಧಾನಿಯವರ ಸಂತಾಪ ಸೂಚಕ ಪತ್ರವನ್ನು ಎಸ್.ಎಂ.ಕೃಷ್ಣ ಅವರ ಪತ್ನಿ ಪ್ರೇಮಾ ಕೃಷ್ಣ ಅವರಿಗೆ ಹಸ್ತಾಂತರಿಸಿದರು. ಇದನ್ನೂ ಓದಿ: ಇಂದು ಸಂಜೆ ಹುಟ್ಟೂರಿನಲ್ಲಿ ಎಸ್ಎಂಕೆ ಅಂತ್ಯಕ್ರಿಯೆ – ಏನೇನು ಸಿದ್ಧತೆ ನಡೆದಿದೆ?
ಸಚಿವ ಪ್ರಹ್ಲಾದ್ ಜೋಶಿ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಆಗಮಿಸಿ ಎಸ್.ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು, ಪುಷ್ಪ ಹಾರ ಅರ್ಪಿಸಿ ನಮನ ಸಲ್ಲಿಸಿದರು. ಇದನ್ನೂ ಓದಿ: ತಿಮ್ಮಪ್ಪನ ಹುಂಡಿಗೆ ವಾಚ್ ಹಾಕಿ ಬಂದ ಮೇಲೆ ಕೇಂದ್ರಮಂತ್ರಿಯಾಗಿದ್ದ ಎಸ್ಎಂಕೆ!