ಹೈದರಾಬಾದ್: ವಿಶಾಖಪಟ್ಟಣಂ-ದೆಹಲಿ ಆಂಧ್ರಪ್ರದೇಶ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಇಂದು ಬೆಳಗ್ಗೆ ಹೊಗೆ ಕಾಣಿಸಿಕೊಂಡಿದ್ದು ಪ್ರಯಾಣಿಕರು ಭಯಭೀತರಾಗಿದ್ದರು.
ವಿಶಾಖಪಟ್ಟಣಂ-ದೆಹಲಿ ಆಂಧ್ರಪ್ರದೇಶ ಎಕ್ಸ್ಪ್ರೆಸ್ನ ಎಸ್6 ಕೋಚ್ನಡಿಯಲ್ಲಿ ಹೊಗೆ ಆವರಿಸಿತ್ತು. ಘಟನೆಯ ಬಗ್ಗೆ ಮಾಹಿತಿ ನೀಡಿದ ನಂತರ ಲೋಕೋ ಚಾಲಕನು ವಾರಂಗಲ್ನ ನೆಕ್ಕೊಂಡಾ ರೈಲು ನಿಲ್ದಾಣದ ಬಳಿ ರೈಲನ್ನು ನಿಲ್ಲಿಸಿದರು. ಇದನ್ನೂ ಓದಿ: ಪ್ರಿಯತಮೆ ತಾಯಿಗಾಗಿ ಕಿಡ್ನಿ ಕೊಟ್ಟ- ಒಂದೇ ಕಿಡ್ನಿಯವ ಬೇಡವೆಂದು ಬೇರೆಯವ್ರ ಕೈ ಹಿಡಿದ್ಳು!
ಹೊಗೆ ನೋಡಿ ಎಚ್ಚೆತ್ತ ಲೋಕೋ ಚಾಲಕರು ರೈಲನ್ನು ನಿಲ್ಲಿಸಿ ನೋಡಿದಾಗ ಬ್ರೇಕ್ಗಳ ಜಾಮ್ನಿಂದಾಗಿ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದರಿಂದಾಗಿ ಸುಮಾರು ಒಂದು ಗಂಟೆ ಕಾಲ ರೈಲನ್ನು ನಿಲ್ಲಿಸಲಾಯಿತು ಎನ್ನಲಾಗಿದೆ. ಇದನ್ನೂ ಓದಿ: ಉದ್ದೇಶಪೂರ್ವಕವಾಗಿಯೇ ಕೋವಿಡ್ ಸೋಂಕು ತಗುಲಿಸಿಕೊಂಡು ಗಾಯಕಿ ನಿಧನ