ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಅಂತಾರಾಷ್ಟ್ರೀಯ ಗಡಿಯ ಬಳಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಸಿಬ್ಬಂದಿಯು ನಡೆಸಿದ ಎನ್ಕೌಂಟರ್ನಲ್ಲಿ ಕಳ್ಳಸಾಗಣೆದಾರನೊಬ್ಬನನ್ನು ಹತ್ಯೆಗೈಯಲಾಗಿದೆ.
ಮೃತ ಕಳ್ಳಸಾಗಾಣಿಕೆದಾರನನ್ನು ಮುರ್ಷಿದಾಬಾದ್ ನಿವಾಸಿ ಭಾರತೀಯ ಪ್ರಜೆ ರೋಹಿಲ್ ಮಂಡಲ್ ಎಂದು ಗುರುತಿಸಲಾಗಿದೆ. ಈ ಕುರಿತು ಬಿಎಸ್ಎಫ್ ಅಧಿಕಾರಿಯೊಬ್ಬರು ಮಾತನಾಡಿ, ಕಳ್ಳಸಾಗಣೆದಾರರ ಗುಂಪೋಂದು ನಮ್ಮ ಸಿಬ್ಬಂದಿಯೊಬ್ಬರ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ಪ್ರತೀಕಾರವಾಗಿ ಪಡೆಗಳು ಓರ್ವ ಕಳ್ಳಸಾಗಣೆದಾರನೊಬ್ಬನನ್ನು ಹತ್ಯೆಗೈದಿದ್ದಾರೆ. 141 ಬೆಟಾಲಿಯನ್ನ ಬಾರ್ಡರ್ ಔಟ್ ಪೋಸ್ಟ್ ಸಾಗರಪಾರಾ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಬಿಎಸ್ಎಫ್ನ ಗುಪ್ತಚರ ಇಲಾಖೆಯಿಂದ ವಿಶ್ವಾಸಾರ್ಹ ಮಾಹಿತಿ ಪಡೆದ ನಂತರ ಗಸ್ತು ತಿರುಗುತ್ತಿದ್ದ ಸಿಬ್ಬಂದಿ ಅಲರ್ಟ್ ಆಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಟೋಲ್ ಪ್ಲಾಜಾ ನೌಕರರ ಮೇಲೆ ಬಿಜೆಪಿ ಮುಖಂಡನ ಗೂಂಡಾ ವರ್ತನೆ
ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಪ್ರದೇಶದಲ್ಲಿ 10-15 ಕಳ್ಳಸಾಗಾಣಿಕೆದಾರರ ಚಲನವಲನವನ್ನು ಗಮನಿಸಿದ ಪಡೆಗಳು ಗಸ್ತು ತಿರುಗುತ್ತಿದ್ದವರಿಗೆ ಮಾಹಿತಿ ನೀಡಿವೆ. ಸ್ವಲ್ಪ ಸಮಯದ ನಂತರ, ಕಳ್ಳಸಾಗಣೆದಾರರು ಕಲ್ಲುಗಳು ಮತ್ತು ಚೂಪಾದ ಆಯುಧಗಳನ್ನು ಬಳಸಿ ಜವಾನರ ಮೇಲೆ ದಾಳಿ ಮಾಡಿದರು. ಬಳಿಕ ಯೋಧರೂ ಪ್ರತಿದಾಳಿ ಆರಂಭಿಸಿದ್ದಾರೆ. ಇದನ್ನೂ ಓದಿ: ಸಂಬಂಧದ ವಿಚಾರ ಗೊತ್ತಾಗಿ ನೋವಿನಿಂದ ಗಲಾಟೆ ಮಾಡಿದ್ದು ನಿಜ, ಆದ್ರೆ ಕೊಲೆ ಮಾಡಿಲ್ಲ: ಅನಂತರಾಜು ಪತ್ನಿ
ಬಿಎಸ್ಎಫ್ ಸಿಬ್ಬಂದಿ ಮೊದಲು ಕಳ್ಳಸಾಗಣೆದಾರರನ್ನು ಓಡಿಸಲು ಪ್ರಯತ್ನಿಸಿದರು. ಬಳಿಕ, ಆತ್ಮರಕ್ಷಣೆಗಾಗಿ ತಮ್ಮ ಕೈಯಲ್ಲಿದ್ದ ಆಯುಧವನ್ನು ಬಳಸಲು ಮುಂದಾಗಿದ್ದಾರೆ ಎಂದು ಬಿಎಸ್ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತರ ಕಳ್ಳಸಾಗಣೆದಾರರು ಓಡಿಹೋಗಿದ್ದು, ಸ್ಥಳದಿಂದ 532 ಬಾಟಲ್ ಫೆನ್ಸೆಡಿಲ್ ಅನ್ನು ಯೋಧರು ವಶಪಡಿಸಿಕೊಂಡಿದ್ದಾರೆ.