ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದಲ್ಲಿ ಮರಿ ನಾಗರಹಾವೊಂದು ನಾಲ್ಕು ಮೊಟ್ಟೆಗಳನ್ನು ನುಂಗಿ ಅಸ್ವಸ್ಥಗೊಂಡಿದೆ.
ನಾಗರಹಾವಿನ ಮರಿಯೊಂದು ನಾಲ್ಕು ಮೊಟ್ಟೆ ನುಂಗಿ ಅಸ್ವಸ್ಥಗೊಂಡು ಓಡಾಡಲು ಸಾಧ್ಯವಾಗದೇ ಮನೆಯ ಪಕ್ಕದಲ್ಲಿ ಬಿದ್ದಿದೆ. ಇದನ್ನು ಗಮನಿಸಿದ ಸ್ಥಳೀಯರು ಉರಗ ತಜ್ಞರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಉರಗ ತಜ್ಞ ಆರೀಫ್ ಬಂದು ಹಾವಿನ ಮರಿಗೆ ಚಿಕಿತ್ಸೆ ನೀಡಿದ್ದು, ನಾಗರಹಾವನ್ನ ರಕ್ಷಣೆ ಮಾಡಿದ್ದಾರೆ. ಚಿಕಿತ್ಸೆ ನೀಡುತ್ತಿದ್ದಂತೆ ನಾಗರ ಹಾವು ನುಂಗಿದ್ದ ನಾಲ್ಕು ಮೊಟ್ಟೆಗಳನ್ನು ಒಂದೊಂದಾಗಿ ಹೊರ ಹಾಕಿದೆ. ಹಾವಿನ ಮರಿ ಮೊಟ್ಟೆಗಳನ್ನು ಹೊರಹಾಕುತ್ತಿದ್ದುದ್ದನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದಾರೆ.
https://www.youtube.com/watch?v=pzbiBqotuWY
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv