ಕೆಟ್ಟು ಹೋದ ಸರ್ವರ್‌ಗೆ ಪಿಂಡ ಇಟ್ಟ ಹೋರಾಟಗಾರ

Public TV
2 Min Read
kolar Server pinda pradana

ಕೋಲಾರ: ಜಿಲ್ಲೆಯ ಬಹುತೇಕ ಸರ್ಕಾರಿ ಕಛೇರಿಗಳಲ್ಲಿ (Government Office) ಸರ್ವರ್ ಸಮಸ್ಯೆ (Server Down) ಎದುರಾಗಿ ಸಾರ್ವಜನಿಕರು ಇನ್ನಿಲ್ಲದ ಕಷ್ಟಪಡುತ್ತಿರುವುದನ್ನು ಗಮನಿಸಿದ ಹೋರಾಟಗಾರರೊಬ್ಬರು ಪಿಂಡ ಪ್ರದಾನ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಇಂದು ಪಿತೃಪಕ್ಷವಾದ ಹಿನ್ನೆಲೆ ನೊಂದ ಹೋರಾಟಗಾರ ಸರ್ವರ್‌ಗಳಿಗೆ ಪಿಂಡ ಪ್ರದಾನ ಮಾಡಿ ಗಮನ ಸೆಳೆದಿದ್ದಾರೆ. ಪಿತೃಪಕ್ಷದ ಹಿನ್ನೆಲೆ ಸರ್ಕಾರಿ ಮಾಲೀಕತ್ವದ ಸರ್ವರ್‌ಗಳಿಗೆ ಪಿಂಡ ಪ್ರದಾನ ಮಾಡಿದ ಸಾಮಾಜಿಕ ಹೋರಾಟಗಾರನ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

kolar Server pinda pradana 1

ಕೋಲಾರದ (Kolar) ಬಂಗಾರಪೇಟೆ ತಾಲೂಕಿನ ಕರಪನಹಳ್ಳಿ ನಿವಾಸಿ ಪ್ರಸನ್ನ ಕುಮಾರ್ ಹೀಗೆ ಪಡಿತರ, ಆಧಾರ್, ಪಹಣಿ, ಮುಟೇಷನ್, ಬ್ಯಾಂಕ್ ಕಾರ್ಯಗಳಿಗೆ ಅಡ್ಡಿಯಾಗಿರುವ ಸರ್ವರ್‌ಗೆ ಪಿಂಡ ಬಿಟ್ಟು, ವಿನೂತನ ಪ್ರತಿಭಟನೆ ಮಾಡಿ ಗಮನ ಸೆಳೆದಿದ್ದಾರೆ. ಅಂತರ್ಜಾಲ ಮತ್ತು ಸರ್ವರ್‌ಗಳಿಗೆ ಎಡೆ ಇಟ್ಟು ಶ್ಲೋಕಗಳನ್ನು ಹೇಳಿ ಪಿತೃಪಕ್ಷ ಮಾಡಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಸರ್ವರ್‌ಗಳು ಸತ್ತು ಹೋಗಿವೆ, ಅದಕ್ಕಾಗಿ ಇಂದು ಪಿತೃಪಕ್ಷದ ಹಿನ್ನೆಲೆ, ಪಿಂಡ ಪ್ರದಾನ ಮಾಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಹುಡುಗಿಯನ್ನು ದಪ್ಪ, ಪುಷ್ಠಿಯಾಗಿ ಕಾಣುವಂತೆ ಮಾಡಿ ಮದುವೆ ಫಿಕ್ಸ್ ಮಾಡು – ದೇವರಿಗೆ ಪತ್ರ ಬರೆದ ಭಕ್ತ

ನನ್ನ ಬಳಿ ರೇಷನ್ ಕಾರ್ಡ್ ಇದೆ, ಆದ್ರೆ ಸರ್ವರ್ ಸತ್ತು ಹೋಗಿದೆ. ಮೊಬೈಲ್‌ಗೆ ಆಧಾರ್ ಲಿಂಕ್ ಮಾಡಬೇಕು, ಸರ್ವರ್ ಸತ್ತು ಹೋಗಿದೆ. ನಮ್ಮ ತಾತ ಮುತ್ತಾತ ತಂದೆಯವರ ಸಂಪಾದನೆಯ ಆಸ್ತಿ ಮ್ಯೂಟೇಷನ್ ತೆಗೋಬೇಕು, ಸರ್ವರ್ ಸತ್ತು ಹೋಗಿದೆ. ಹೀಗೆ ಯಾವುದೇ ದಾಖಲೆ ಪಡೆಯಲಾಗದೇ ಸಾರ್ವಜನಿಕರು ಪರದಾಡುವಂತಾಗಿದೆ. ಅದಕ್ಕಾಗಿ ಸತ್ತು ಹೋದ ಸರ್ವರ್‌ಗೆ ಪಿಂಡ ಪ್ರದಾನ ಮಾಡುತ್ತಿದ್ದೇನೆ ಎಂದು ಹೇಳಿ ವಿಭಿನ್ನವಾಗಿ ಸರ್ವರ್ ಸಮಸ್ಯೆ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ನಾನು Law ಓದಿದ್ದೀನಿ, ಬೊಮ್ಮಾಯಿ ಲಾ ಓದಿಲ್ಲ – ಕಾನೂನು ಕ್ರಮ ತಗೊಂಡ್ರೆ ನಾವ್ ಸುಮ್ನೆ ಇರ್ತೀವಾ?: ಸಿದ್ದರಾಮಯ್ಯ

ಹಿಂದೆ ಕಿತ್ತುಹೋಗಿದ್ದ ಡಾಂಬರ್ ರಸ್ತೆಗೆ ಎಳ್ಳು ನೀರು ಬಿಟ್ಟು ಪ್ರತಿಭಟಿಸಿದ್ದ ಕನ್ನಡಪರ ಹೋರಾಟಗಾರರೂ ಆಗಿರುವ ಪ್ರಸನ್ನ ಕುಮಾರ್ ಅವರ ಹೋರಾಟ ಹಾಗೂ ಪಿಂಡ ಪ್ರದಾನ ಜಿಲ್ಲೆಯಲ್ಲಿ ಸಖತ್ ಸದ್ದು ಮಾಡುತ್ತಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *