ಬೆಂಗಳೂರು: ಚಂದ್ರನ ದಕ್ಷಿಣ ಧ್ರುವಕ್ಕೆ ಲ್ಯಾಂಡರ್ ವಿಕ್ರಮ್ನ್ನು ಯಶಸ್ವಿಯಾಗಿ ಇಳಿಸಿದ ಇಸ್ರೋ (ISRO), ಇದೀಗ ಸೂರ್ಯನ ಅಧ್ಯಯನಕ್ಕೆ ಸಜ್ಜಾಗಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಸೋಲಾರ್ ಮಿಷನ್ ‘ಆದಿತ್ಯ’ (Solar Mission Aditya) ಇದೇ ಸೆಪ್ಟೆಂಬರ್ಗೆ ಲಾಂಚ್ ಆಗಲು ಸಿದ್ಧವಾಗುತ್ತಿದೆ ಎಂದು ತಿಳಿಸಿದ್ದಾರೆ.
ಚಂದ್ರಯಾನ-3 (Chandrayaan-3) ಯಶಸ್ವಿಯಾದ ಬಗ್ಗೆ ಅವರು ಮಾತನಾಡಿದ್ದಾರೆ. ಈ ವೇಳೆ, ಮಿಷನ್ ‘ಆದಿತ್ಯ’ ಕೆಲಸಗಳು ಪ್ರಗತಿಯಲ್ಲಿವೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಲಾಂಚ್ಗೆ ಸಿದ್ಧವಾಗಲಿದೆ. 2025 ರ ವೇಳೆಗೆ ಬಾಹ್ಯಾಕಾಶಕ್ಕೆ ಮಾನವಸಹಿತ ಮಿಷನ್ ಕೈಗೊಳ್ಳಲು ಯೋಜಿಸಿದ್ದು, ಕ್ರ್ಯೂ ಮಾಡ್ಯೂಲ್ (ಗಗನಯಾತ್ರಿಗಳಿರುವ ಘಟಕ) ಸಾಮರ್ಥ್ಯ ಪರೀಕ್ಷಾ ಕಾರ್ಯಾಚರಣೆಗಳನ್ನು ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್ ತಿಂಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಂದ್ರಯಾನ-3 ಸಕ್ಸಸ್ – ಇಸ್ರೋ ಅಧ್ಯಕ್ಷರಿಗೆ ಸೋನಿಯಾ ಗಾಂಧಿ ಪತ್ರ
ದಕ್ಷಿಣ ಧ್ರುವವು ಸೂರ್ಯನಿಂದ ಕಡಿಮೆ ಪ್ರಕಾಶಮಾನವನ್ನು ಪಡೆಯುತ್ತದೆ. ಈ ಬಗ್ಗೆ ಹೆಚ್ಚಿನ ಸಂಶೋಧನೆಗಾಗಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ವಿಜ್ಞಾನಿಗಳು ದಕ್ಷಿಣ ಧ್ರುವದ ಕುರಿತಾಗಿ ಆಸಕ್ತಿ ತೋರಿಸಿದ್ದಾರೆ. ಮನುಷ್ಯ ಚಂದ್ರನ ಮೇಲೆ ವಸಾಹತುಗಳನ್ನು ಸ್ಥಾಪಿಸುವುದು ಮತ್ತು ಅದರ ಆಚೆಗೆ ಬೆಳೆಯುವುದು ಅದರ ಉದ್ದೇಶವಾಗಿದೆ. ಚಂದ್ರಯಾನ-3 ಮಿಷನ್ನ ಯಶಸ್ಸಿಗೆ ಕಾರಣರಾದ ಎಲ್ಲಾ ವಿಜ್ಞಾನಿಗಳಿಗೆ ಇದು ಸಂತೋಷದ ವಿಚಾರವಾಗಿದೆ ಎಂದು ಅವರು ಹೇಳಿದ್ದಾರೆ.
ಬುಧವಾರ ಚಂದ್ರಯಾನ ಯಶಸ್ವಿಯಾಗಿ ಲ್ಯಾಂಡ್ ಆದ ನಂತರ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಸೂರ್ಯ ಮತ್ತು ಶುಕ್ರ ಗ್ರಹದ ಮೇಲೆ ಭವಿಷ್ಯದ ಕಾರ್ಯಾಚರಣೆಗಳನ್ನು ಪ್ರಸ್ತಾಪಿಸಿದ್ದರು. ಇದನ್ನೂ ಓದಿ: ಚಂದ್ರನ ಮೇಲೆ ನಡೆದಾಡಿದ ಪ್ರಗ್ಯಾನ್ ರೋವರ್ – ವಿಕ್ರಮ್ ಲ್ಯಾಂಡರ್ನಿಂದ ಹೊರಬರಲು ತಡವಾಗಿದ್ಯಾಕೆ?
Web Stories