ಬೆಂಗಳೂರು: ಚಂದ್ರನ ದಕ್ಷಿಣ ಧ್ರುವಕ್ಕೆ ಲ್ಯಾಂಡರ್ ವಿಕ್ರಮ್ನ್ನು ಯಶಸ್ವಿಯಾಗಿ ಇಳಿಸಿದ ಇಸ್ರೋ (ISRO), ಇದೀಗ ಸೂರ್ಯನ ಅಧ್ಯಯನಕ್ಕೆ ಸಜ್ಜಾಗಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಸೋಲಾರ್ ಮಿಷನ್ ‘ಆದಿತ್ಯ’ (Solar Mission Aditya) ಇದೇ ಸೆಪ್ಟೆಂಬರ್ಗೆ ಲಾಂಚ್ ಆಗಲು ಸಿದ್ಧವಾಗುತ್ತಿದೆ ಎಂದು ತಿಳಿಸಿದ್ದಾರೆ.
ಚಂದ್ರಯಾನ-3 (Chandrayaan-3) ಯಶಸ್ವಿಯಾದ ಬಗ್ಗೆ ಅವರು ಮಾತನಾಡಿದ್ದಾರೆ. ಈ ವೇಳೆ, ಮಿಷನ್ ‘ಆದಿತ್ಯ’ ಕೆಲಸಗಳು ಪ್ರಗತಿಯಲ್ಲಿವೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಲಾಂಚ್ಗೆ ಸಿದ್ಧವಾಗಲಿದೆ. 2025 ರ ವೇಳೆಗೆ ಬಾಹ್ಯಾಕಾಶಕ್ಕೆ ಮಾನವಸಹಿತ ಮಿಷನ್ ಕೈಗೊಳ್ಳಲು ಯೋಜಿಸಿದ್ದು, ಕ್ರ್ಯೂ ಮಾಡ್ಯೂಲ್ (ಗಗನಯಾತ್ರಿಗಳಿರುವ ಘಟಕ) ಸಾಮರ್ಥ್ಯ ಪರೀಕ್ಷಾ ಕಾರ್ಯಾಚರಣೆಗಳನ್ನು ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್ ತಿಂಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಂದ್ರಯಾನ-3 ಸಕ್ಸಸ್ – ಇಸ್ರೋ ಅಧ್ಯಕ್ಷರಿಗೆ ಸೋನಿಯಾ ಗಾಂಧಿ ಪತ್ರ
- Advertisement 2
- Advertisement 3
ದಕ್ಷಿಣ ಧ್ರುವವು ಸೂರ್ಯನಿಂದ ಕಡಿಮೆ ಪ್ರಕಾಶಮಾನವನ್ನು ಪಡೆಯುತ್ತದೆ. ಈ ಬಗ್ಗೆ ಹೆಚ್ಚಿನ ಸಂಶೋಧನೆಗಾಗಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ವಿಜ್ಞಾನಿಗಳು ದಕ್ಷಿಣ ಧ್ರುವದ ಕುರಿತಾಗಿ ಆಸಕ್ತಿ ತೋರಿಸಿದ್ದಾರೆ. ಮನುಷ್ಯ ಚಂದ್ರನ ಮೇಲೆ ವಸಾಹತುಗಳನ್ನು ಸ್ಥಾಪಿಸುವುದು ಮತ್ತು ಅದರ ಆಚೆಗೆ ಬೆಳೆಯುವುದು ಅದರ ಉದ್ದೇಶವಾಗಿದೆ. ಚಂದ್ರಯಾನ-3 ಮಿಷನ್ನ ಯಶಸ್ಸಿಗೆ ಕಾರಣರಾದ ಎಲ್ಲಾ ವಿಜ್ಞಾನಿಗಳಿಗೆ ಇದು ಸಂತೋಷದ ವಿಚಾರವಾಗಿದೆ ಎಂದು ಅವರು ಹೇಳಿದ್ದಾರೆ.
- Advertisement 4
ಬುಧವಾರ ಚಂದ್ರಯಾನ ಯಶಸ್ವಿಯಾಗಿ ಲ್ಯಾಂಡ್ ಆದ ನಂತರ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಸೂರ್ಯ ಮತ್ತು ಶುಕ್ರ ಗ್ರಹದ ಮೇಲೆ ಭವಿಷ್ಯದ ಕಾರ್ಯಾಚರಣೆಗಳನ್ನು ಪ್ರಸ್ತಾಪಿಸಿದ್ದರು. ಇದನ್ನೂ ಓದಿ: ಚಂದ್ರನ ಮೇಲೆ ನಡೆದಾಡಿದ ಪ್ರಗ್ಯಾನ್ ರೋವರ್ – ವಿಕ್ರಮ್ ಲ್ಯಾಂಡರ್ನಿಂದ ಹೊರಬರಲು ತಡವಾಗಿದ್ಯಾಕೆ?
Web Stories