ಚಿಕ್ಕೋಡಿ: ಪಂಜಾಬ್ನ ಪಠಾಣ್ಕೋಟ್ ರೈಲು ನಿಲ್ದಾಣದಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯೋಧರೊಬ್ಬರು ಸಾವನ್ನಪ್ಪಿದ್ದಾರೆ.
ಭೋಜ ಗ್ರಾಮದ ವಿನಯ್ ಬಾಬಾಸಾಹೇಬ ಭೋಜೆ (37) ಮೃತಪಟ್ಟ ಯೋಧ. ವಿನಯ್ ಭೋಜೆ ಸಾವಿನ ಸುದ್ದಿ ಕೇಳಿ ಭೋಜ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ವಿನಯ್ ಭೋಜೆ ಹದಿನೇಳು ವರ್ಷಗಳ ಹಿಂದೆ ಭಾರತೀಯ ಸೇನೆಗೆ ಸೇರ್ಪಡೆಗೊಂಡಿದ್ದರು. ಕಳೆದ ಹತ್ತು ವರ್ಷಗಳಿಂದ ಅವರು ಮಹಾರಾಷ್ಟ್ರದ ಹಾತಕಣಗಲೆ ತಾಲೂಕಿನ ತಿಲವಾಣಿ ಗ್ರಾಮದಲ್ಲಿ ನೆಲೆಸಿದ್ದರು. ಇದನ್ನೂ ಓದಿ: ಕಸದ ತೊಟ್ಟಿಯಲ್ಲಿ ಹೆಣ್ಣು ಮಗು ಪತ್ತೆ – ಸ್ಥಳೀಯರಿಂದ ರಕ್ಷಣೆ
ಕಳೆದ ವಾರ ರಜೆಗೆಂದು ತಿಲವಾಣಿಗೆ ಬಂದಿದ್ದರು. ರಜೆ ಮುಗಿಸಿ ಪಠಾಣ್ಕೋಟ್ ಗೆ ವಾಪಸಾಗಿದ್ದರು. ರೈಲು ನಿಲ್ದಾಣದಲ್ಲಿ ಇಳಿಯುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿನಯ್ ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.