ಮನೆಗೆ ತೆರಳಿದ್ದ ಯೋಧನ ಕಿಡ್ನ್ಯಾಪ್ – ಸೇನೆಯಿಂದ ತೀವ್ರ ಹುಡುಕಾಟ

Public TV
1 Min Read
Soldier

ಶ್ರೀನಗರ: ರಜೆಯ ಮೇಲೆ ಮನೆಗೆ ಬಂದಿದ್ದ ಯೋಧನನ್ನು (Soldier) ದುಷ್ಕರ್ಮಿಗಳು ಅಪಹರಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ  (Jammu and Kashmir) ಕುಲ್ಗಾಮ್‍ನಲ್ಲಿ ನಡೆದಿದೆ.

ಜಾವೇದ್ ಅಹ್ಮದ್ ವಾನಿ (25) ಅಪರಹರಣಕ್ಕೊಳಗಾದ ಯೋಧ ಎಂದು ತಿಳಿದು ಬಂದಿದೆ. ಜಾವೇದ್ ಶನಿವಾರ ಸಂಜೆ ಮನೆಯಿಂದ ಅಂಗಡಿಯೊಂದಕ್ಕೆ ತೆರಳುವುದಾಗಿ ಹೇಳಿ ಕಾರಿನಲ್ಲಿ ಹೋಗಿದ್ದರು. ಆದರೆ ತುಂಬಾ ಸಮಯದವರೆಗೂ ಅವರು ವಾಪಸ್ ಆಗದೇ ಇರುವುದರಿಂದ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದಾರೆ. ಈ ವೇಳೆ ಅವರ ಕಾರು ಪರಂಹಾಲ್ ಎಂಬ ಗ್ರಾಮದಲ್ಲಿ ಪತ್ತೆಯಾಗಿದೆ. ಕಾರಿನ ಡೋರ್‌ಗಳು ತೆರೆದಿದ್ದು ಕಾರಿನಲ್ಲಿ ಅವರ ಚಪ್ಪಲಿ ಹಾಗೂ ರಕ್ತದ ಕಲೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾವೇದ್ ಅವರನ್ನು ಲೇಹ್ (Ladakh) ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅಪಹರಣಕ್ಕೊಳಗಾದ ಯೋಧನ ಪತ್ತೆಗೆ ಭಾರತೀಯ ಸೇನೆ ಮತ್ತು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ನಾಪತ್ತೆಯಾಗಿರುವ ಮಗನನ್ನು ಹುಡುಕಿಕೊಡುವಂತೆ ಯೋಧನ ತಂದೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

Web Stories

Share This Article