Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಎಲ್ಲರಿಗಿಂತ ಸೀನಿಯರ್, ಅರ್ಧ ಬೆಂಗಳೂರು ಉಸ್ತುವಾರಿ ಕೊಡಲಿ: ಸೋಮಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾನು ಎಲ್ಲರಿಗಿಂತ ಸೀನಿಯರ್, ಅರ್ಧ ಬೆಂಗಳೂರು ಉಸ್ತುವಾರಿ ಕೊಡಲಿ: ಸೋಮಣ್ಣ

Bengaluru City

ನಾನು ಎಲ್ಲರಿಗಿಂತ ಸೀನಿಯರ್, ಅರ್ಧ ಬೆಂಗಳೂರು ಉಸ್ತುವಾರಿ ಕೊಡಲಿ: ಸೋಮಣ್ಣ

Public TV
Last updated: October 9, 2021 2:00 pm
Public TV
Share
2 Min Read
somanna
SHARE

– ಇಬ್ಬರು ಸಚಿವರ ಮಧ್ಯೆ ಮುಸುಕಿನ ಗುದ್ದಾಟ
– ಅಶೋಕ್ ‘ಸಾಮ್ರಾಟ್’ ತರ ಆಡ್ತಾನೆ

ಬೆಂಗಳೂರು: ನಾನು ಎಲ್ಲರಿಗಿಂತ ಸೀನಿಯರ್, ಎಲ್ಲರಿಗಿಂತ ಜಾಸ್ತಿ ಅರ್ಹತೆ ಹೊಂದಿದ್ದೇನೆ. ಹಾಗಾಗಿ ನನ್ನನ್ನು ಬೆಂಗಳೂರು ಉಸ್ತುವಾರಿಯನ್ನಾಗಿ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಕೇಳಿದ್ದೇನೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

BOMMAI

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಈ ಮುನ್ನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಬೆಂಗಳೂರು ನಗರದ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು. ಈಗಲೂ ಅವರೇ ವಹಿಸಿಕೊಂಡರೂ ತೊಂದರೆ ಇಲ್ಲ. ಆದರೆ ಇದು ಮುಖ್ಯಮಂತ್ರಿಗಳ ಪರಮಾಧಿಕಾರ ಯಾರಿಗೆ ಎಷ್ಟು ವರ್ಷ ಅನುಭವವಿದೆ, ಯಾರನ್ನು ಉಸ್ತುವಾರಿ ಮಾಡಬೇಕು ಎಂದು ಅವರಿಗೆ ತಿಳಿದಿದೆ. ನಾನು ಈ ವಿಚಾರಕ್ಕೆ ಮೂಗು ತೂರಿಸುವ ಕೆಲಸ ಮಾಡುವುದಿಲ್ಲ. ಆದರೆ ನಾನು ಜೆ.ಹೆಚ್ ಪಾಟೇಲರ ಸರ್ಕಾರದ ಅವಧಿಯಲ್ಲಿ ಮಂತ್ರಿಯಾಗಿದ್ದವನು. ಎಲ್ಲರಿಗಿಂತ ಜಾಸ್ತಿ ಅರ್ಹತೆ ಹೊಂದಿದ್ದೇನೆ. ಹಾಗಾಗಿ ನನ್ನನ್ನು ಬೆಂಗಳೂರು ಉಸ್ತುವಾರಿಯನ್ನಾಗಿ ಮಾಡಿ ಎಂದು ಕೇಳಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ದಿವಂಗತ ಮನಗೂಳಿ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ: ಹೆಚ್‍ಡಿಕೆ

cm bsy

ನಾನು 40 ವರ್ಷ ರಾಜಕಾರಣದಲ್ಲಿ ಅನುಭವ ಹೊಂದಿದ್ದೇನೆ. ನನ್ನ ಇಲಾಖೆಯಲ್ಲಿ 1 ಲಕ್ಷ ಮನೆ ನೀಡುವ ಬಗ್ಗೆ ಯಾರದೋ ಸಲಹೆ ಪಡೆದು ಕೆಲಸ ಮಾಡುವ ಅವಶ್ಯಕತೆ ಇಲ್ಲ. ಬೆಂಗಳೂರು ಮಹಾನಗರದ ಬಡ ಜನರಿಗೆ ನಾವು ನೀಡುತ್ತಿರುವ ಕೆಲವು ಮನೆಗಳ ಕಾರ್ಯಕ್ರಮಕ್ಕೆ ನಾವು ಅಶೋಕ್‍ರನ್ನು ಕರೆದಿದ್ದೇವೆ. ಆದರೆ ಅವರು ಚಿಕ್ಕಮಗಳೂರಿನಲ್ಲಿದ್ದರು ಹಾಗಾಗಿ ಬರಲಿಲ್ಲ. ಅಶೋಕ್ ಎಂಎಲ್‍ಎ ಆಗಿದ್ದಾಗ ನಾನು ಮಂತ್ರಿಯಾಗಿದ್ದೆ. ಹಾಗಂತ ನನಗೆ ದುರಂಹಕಾರ ಇಲ್ಲ. ನನಗೆ ನನ್ನ ಪಕ್ಷ ಮುಖ್ಯ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಐಟಿ ದಾಳಿಗೂ, ರಾಜಕೀಯಕ್ಕೂ ಸಂಬಂಧ ಇಲ್ಲ: ಕೋಟಾ ಶ್ರೀವಾಸ ಪೂಜಾರಿ

R ASHOK

ನಮ್ಮ ಬೆಂಗಳೂರು ನಗರದಲ್ಲಿರುವವರು ಉಸ್ತುವಾರಿ ಸಚಿವರಾಗುವುದಕ್ಕೆ ಯಡಿಯೂರಪ್ಪ ಅವರು ಈ ಹಿಂದೆ ಹೊಸ ಪೀಠಿಕೆ ಹಾಕಿ ಇಟ್ಟುಕೊಂಡಿದ್ದರು. ಇವರಿಗೂ ನಾನು ಅದನ್ನೇ ಹೇಳಿದ್ದೇನೆ. ಇಲ್ಲ ಯಾರಿಗಾದರೂ ಕೊಟ್ಟರೂ ಯಾವುದೇ ತೊಂದರೆ ಇಲ್ಲ. ಆದರೆ ನಾನು ಎಲ್ಲರಿಗಿಂತ ಬೆಂಗಳೂರು ನಗರಕ್ಕೆ ಸೀನಿಯರ್ ಆಗಿದ್ದೇನೆ. ಅಂಡರ್ ಪಾಸ್, ಫ್ಲೈ ಓವರ್, ಮೆಟ್ರೋ ಯೋಜನೆ ಎಲ್ಲವೂ ನನ್ನ ಕಾಲದಲ್ಲಿಯೇ ಆಗಿದೆ. ಈಗ ನನಗೆ 70 ವರ್ಷ ಎಲ್ಲರಿಗಿಂತ ಸೀನಿಯರ್ ಆಗಿದ್ದು, ಎಲ್ಲವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇನೆ ಎಂದಿದ್ದಾರೆ.

SOMANNA 5

ಯಾವುದೇ ಮಿಂಟಿಂಗ್‍ಗೂ ಸೋಮಣ್ಣನವರು ಎಲ್ಲರನ್ನು ಕರೆಯುತ್ತಾರೆ ಆದರೆ ಅಶೋಕ್ ಅವರನ್ನು ಮಾತ್ರ ಕರೆಯುವುದಿಲ್ಲ ಎಂಬ ವಿಶ್ವನಾಥ್ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಶೋಕ್ ಎಂದು ಅವರ ತಂದೆ-ತಾಯಿ ಯಾಕೆ ಹೆಸರಿಟ್ಟರು ಗೊತ್ತಿಲ್ಲ. ಅಶೋಕ ಎಂದರೆ ಸಾಮ್ರಾಟ ಚಕ್ರವರ್ತಿ ಎಂದರ್ಥ. ಸಾಮ್ರಾಟ ಚಕ್ರವರ್ತಿ ಕೆಲಸನೇ ಬೇರೆ, ನನ್ನ ಕೆಲಸನೇ ಬೇರೆ. ವಿಶ್ವನಾಥ್ ಅವರು ಯಾಕೆ ಈ ರೀತಿ ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಬಯಸಿದರೆ ಪಾಕ್‌ ಕ್ರಿಕೆಟ್‌ ಕತೆ ಮುಗಿದಂತೆ: ರಮೀಝ್‌ ರಾಜಾ

Tumakuru R Ashoka3 medium

 

ಬೆಂಗಳೂರು ನಗರಕ್ಕೆ ಯಾರನ್ನು ಉಸ್ತುವಾರಿಯನ್ನಾಗಿ ಮಾಡಿಲ್ಲ. ಅಶೋಕ್ ಅವರನ್ನು ಸ್ವಾತಂತ್ರ್ಯ ದಿನಾಚರಣೆಯ ಸಮಯ ಹಾಗೂ ಕೋವಿಡ್ ನಿರ್ವಹಣೆಗಾಗಿ ಅಷ್ಟೇ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಸದ್ಯ ಇದೀಗ ಬೆಂಗಳೂರು ನಗರದ ಉಸ್ತುವಾರಿಯಾಗಿ ಅಶೋಕ್ ಅವರನ್ನು ಮಾಡುತ್ತಾರೋ ಅಥವಾ ಸೋಮಣ್ಣ ಅವರನ್ನು ಮಾಡುತ್ತಾರೋ, ಇಲ್ಲ ಬೇಕಿದ್ದರೆ ಇಬ್ಬರಿಗೂ ಬೆಂಗಳೂರು ಉಸ್ತುವಾರಿಯನ್ನು ವಹಿಸುತ್ತಾರೋ ಅವರಿಗೆ ಬಿಟ್ಟಿದೆ ಎಂದು ಹೇಳಿದ್ದಾರೆ.

TAGGED:ashokbengaluruCM BommaiPublic TVSomannaYediyurappaಅಶೋಕ್ಪಬ್ಲಿಕ್ ಟಿವಿಬೆಂಗಳೂರುಯಡಿಯೂರಪ್ಪಸಿಎಂ ಬೊಮ್ಮಾಯಿಸೋಮಣ್ಣ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

CRIME
Bengaluru City

ಹೆಂಡತಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ

Public TV
By Public TV
34 seconds ago
Team India 2
Cricket

T20 World Cup | ಟೀಂ ಇಂಡಿಯಾದ ‘ಸೂಪರ್-8’ ಸಂಗ್ರಾಮ – ಹೀಗಿದೆ ವೇಳಾಪಟ್ಟಿ

Public TV
By Public TV
18 minutes ago
HISTORIC After Lok Sabha Rajya Sabha Passes Womens Reservation Bill With Majority Votes
Latest

Rajya Sabha Elections: 10 ರಾಜ್ಯಗಳ 37 ಸ್ಥಾನಗಳಿಗೆ ಮಾ.16 ರಂದು ಮತದಾನ

Public TV
By Public TV
37 minutes ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಕಾಂಗ್ರೆಸ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
54 minutes ago
accident death
Bengaluru City

ಬೆಂಗಳೂರು| ಹುಟ್ಟುಹಬ್ಬದ ದಿನವೇ ಯುವಕ ಅಪಘಾತದಲ್ಲಿ ಸಾವು

Public TV
By Public TV
2 hours ago
hassan murder
Crime

ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಕೇಸ್ – 10 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?