ಭಾನುವಾರ ಕೆಲವೊಮ್ಮೆ ಕರ್ತವ್ಯದ ದಿನವಾಗುತ್ತದೆ – ಸುರೇಶ್ ಕುಮಾರ್

Public TV
1 Min Read
Suresh Kumar

ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು 14 ಮಂದಿ ಶಾಸಕರನ್ನು ಅನರ್ಹಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಹಿರಿಯ ನಾಯಕ ಸುರೇಶ್ ಕುಮಾರ್ ತಮ್ಮದೇ ಶೈಲಿಯಲ್ಲಿ ಟ್ರೋಲ್ ಮಾಡಿದ್ದಾರೆ.

“ಭಾನುವಾರ” ಕೆಲವು ಸಲ (inconvenient ಆದರೆ) ರಜಾ ದಿನವಾಗುತ್ತದೆ ಮತ್ತು ಕೆಲವು ಸಲ (Convenient) Working Day  ಆಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಈ ಹಿಂದೆ ಅತೃಪ್ತ ಶಾಸಕರು ರಾಜೀನಾಮೆ ನೀಡಿದ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ರಮೇಶ್ ಕುಮಾರ್, ಶನಿವಾರ ಸ್ಪೀಕರ್ ಕಚೇರಿ ತೆರೆದಿರುವುದಿಲ್ಲ. ಭಾನುವಾರ ಸರ್ಕಾರಿ ರಜಾ ದಿನ ಹೀಗಾಗಿ ಸೋಮವಾರ ಪರಿಶೀಲಿಸುವುದಾಗಿ ತಿಳಿಸಿದ್ದರು.

ಇಂದು ತಮ್ಮ ನಿರ್ಧಾರ ಪ್ರಕಟಿಸುವಾಗ ರಮೇಶ್ ಕುಮಾರ್ ಸೋಮವಾರ ವಿಧಾನಸಭಾ ಕಲಾಪ ಆರಂಭವಾಗಲಿದೆ. ಹೀಗಾಗಿ ಇಂದು ನಾನು ತುರ್ತು ಸುದ್ದಿಗೋಷ್ಠಿ ನಡೆಸಿ ಅನರ್ಹತೆಗೊಳಿಸುವ ನಿರ್ಧಾರ ಪ್ರಕಟಿಸುತ್ತಿದ್ದೇನೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *