– ಇದೆಲ್ಲವೂ ಮೇಘಾಲಯ ಪೊಲೀಸರ ಕಟ್ಟು ಕಥೆ
– ಇಡೀ ಠಾಣೆ ಪೊಲೀಸರನ್ನೇ ಜೈಲಿಗೆ ಕಳಿಸ್ತೀನಿ; ಶಪಥ
ಶಿಲ್ಲಾಂಗ್: ನನ್ನ ಮಗಳು ಏಕೆ ಗಂಡನನ್ನ ಕೊಲ್ಲುವ ಕೆಲಸ ಮಾಡ್ತಾಳೆ. ಅವಳು 100% ಮುಗ್ಧೆ, ಈ ಪ್ರಕರಣವನ್ನ ಸಿಬಿಐ ತನಿಖೆಗೆ (CBI Investigation) ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಮನವಿ ಮಾಡುತ್ತೇನೆ ಎಂದು ಕೊಲೆ ಆರೋಪಿ ಸೋನಮ್ ತಂದೆ ದೇವಿ ಸಿಂಗ್ ಹೇಳಿದ್ದಾರೆ.
ಹನಿಮೂನ್ (Honeymoon Murder Case) ವೇಳೆ ಸುಪಾರಿ ಕೊಟ್ಟು ಗಂಡನನ್ನೇ ಕೊಲೆ ಮಾಡಿದ ಆರೋಪದ ಮೇಲೆ ಬಂಧಿತಳಾಗಿರುವ ಸೋನಮ್ ರಘುವಂಶಿಯ (Sonam Raghuvanshi) ತಂದೆ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೇಘಾಲಯ ಪೊಲೀಸರು ಆರಂಭದಿಂದಲೂ ಸುಳ್ಳು ಹೇಳುತ್ತಲೇ ಬರ್ತಿದ್ದಾರೆ. ನನ್ನ ಮಗಳಿಗೆ ರಾಜ್ ಕುಶ್ವಾಹನೊಂದಿಗೆ ಸಂಬಂಧವಿತ್ತು ಎಂದು ಹೇಳ್ತಿದ್ದಾರೆ. ಆ ರಾಜ್ ಎಂಬ ಹುಡುಗನನ್ನು ನಾನು ನೋಡಿದ್ದೇನೆ, ನನ್ನೊಟ್ಟಿಗೆ ಕೆಲಸ ಮಾಡ್ತಿದ್ದ. ಆದ್ರೆ ಅವನೇ ಇವನು ಅಂತ ಹೇಳೋಕಾಗಲ್ಲ ಅಂತ ಹೇಳಿದ್ದಾರೆ. ಇದನ್ನೂ ಓದಿ: Indore Couple | ಹನಿಮೂನ್ ಮರ್ಡರ್: ‘ರಾಜಾ’ಗೆ ‘ರಾಜ್’ ಮುಹೂರ್ತ!
ನನ್ನ ಮಗಳು ನಿರಪರಾಧಿ
ಮುಂದುವರಿದು… ನನ್ನ ಮಗಳು ಈ ರೀತಿ ಎಲ್ಲ ಮಾಡೋಕೆ ಸಾಧ್ಯವೇ ಇಲ್ಲ, ಆದರೂ ಅವಳನ್ನ ಬಂಧಿಸಿದ್ದಾರೆ. ನೈಜ ಘಟನೆಯಿಂದ ಬೇರೆಡೆಗೆ ಗಮನ ಸೆಳೆಯಲು ಮೇಘಾಲಯ ಪೊಲೀಸರು ಕಥೆ ಕಟ್ಟಿದ್ದಾರೆ. ಆದ್ರೆ ವಾಸ್ತವಾಂಶ ಇದಕ್ಕೆ ಭಿನ್ನವಾಗಿದೆ. ಸಿಬಿಐ ತನಿಖೆ ನಡೆಸಿದ್ರೆ ಸತ್ಯ ಹೊರಬರುತ್ತೆ, ಇಡೀ ಠಾಣೆಯ ಪೊಲೀಸರೆಲ್ಲರೂ (Meghalaya Police) ಜೈಲಿಗೆ ಹೋಗ್ತಾರೆ. ಹಾಗಾಗಿ ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುವಂತೆ ನಾನು ಅಮಿತ್ ಶಾ ಅವರಿಗೆ ಮನವಿ ಮಾಡ್ತೇನೆ ಅಂತ ಹೇಳಿದ್ದಾರೆ. ಇದನ್ನೂ ಓದಿ: ಹನಿಮೂನ್ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್ – ಪತ್ನಿ ಅರೆಸ್ಟ್
ನಾನು ಜೀವಂತವಾಗಿರುವವರೆಗೂ ಈ ಪ್ರಕರಣವನ್ನ ಇಲ್ಲಿಗೇ ಬಿಡಲ್ಲ, ಇಡೀ ಪೊಲೀಸ್ ಠಾಣೆ ಅಧಿಕಾರಿಗಳನ್ನ ಜೈಲಿಗಟ್ಟುವವರೆಗೂ ವಿಶ್ರಾಂತಿ ತೆಗೆದುಕೊಳ್ಳಲ್ಲ. ನನ್ನ ಮಗಳು 100% ಮುಗ್ಧೆ ಅವಳ ಮೇಲೆ ನಂಬಿಕೆ ಇದೆ. ಅವಳು ಆ ರೀತಿ ಮಾಡಲ್ಲ. ಇದು ಪೊಲೀಸರ ಕಟ್ಟು ಕಥೆ, ತನಿಖೆ ನಿಜವಾಗಿದ್ದರೆ, ಮುಂಚಿತವಾಗಿಯೇ ಮಾಧ್ಯಮಗಳಿಗೆ ಮಾಹಿತಿ ಹೇಗೆ ಸೋರಿಕೆಯಾಗ್ತಿತ್ತು ಅಂತಲೂ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಹನಿಮೂನ್ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್ – ಮೂವರು ಪುರುಷರೊಟ್ಟಿಗೆ ದಂಪತಿ ನೋಡಿದ್ದೆ: ಸ್ಫೋಟಕ ಸಂಗತಿ ಬಿಚ್ಚಿಟ್ಟ ಗೈಡ್
ಹನಿಮೂನ್ನಲ್ಲೇ ಹತ್ಯೆ – ಏನಿದು ದ್ವೇಷ?
ಇಂದೋರ್ ಮೂಲದ ರಾಜಾ ರಘುವಂಶಿ ಮತ್ತು ಸೋನಮ್ ಕಳೆದ ಮೇ 11ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ನವದಂಪತಿ ಮೇ 20ರಂದು ಹನಿಮೂನ್ಗೆಂದು ಮೇಘಾಲಯಕ್ಕೆ ತೆರಳಿದ್ದರು. ಶಿಲ್ಲಾಂಗ್ನ ಬಾಲಾಜಿ ಅತಿಥಿಗೃಹದಲ್ಲಿ ಉಳಿದುಕೊಂಡಿದ್ದ ಅವರು ಮೇ 22ರ ಬೆಳಗ್ಗೆ ದ್ವಿಚಕ್ರ ವಾಹನವೊಂದನ್ನು ಬಾಡಿಗೆ ಪಡೆದು ಅತಿಥಿ ಗೃಹದಿಂದ ಜನಪ್ರಿಯ ಪ್ರವಾಸಿ ತಾಣ ಸೊಹ್ರಾಕ್ಕೆ ತೆರಳಿದ್ದರು. ಈ ವೇಳೆ ಅವರು 2 ಲಗೇಜ್ ಬ್ಯಾಗ್ ತಮ್ಮೊಂದಿಗೆ ತೆಗೆದುಕೊಂಡಿದ್ದರು. ಮೇ 25ರೊಳಗೆ ಹಿಂತಿರುಗುವುದಾಗಿ ಅತಿಥಿ ಗೃಹದ ವ್ಯವಸ್ಥಾಪಕರಿಗೆ ತಿಳಿಸಿದ್ದರು. ಮೇ 23ರಂದು ಮೌಲಾಖಿಯಾತ್ ಗ್ರಾಮ ತಲುಪಿದ ದಂಪತಿ, ನೊಂಗ್ರಿಯಾಟ್ನ ಶಿಪಾರಾ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಆ ಬಳಿಕ ದಂಪತಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಇದಾದ 1 ದಿನದ ಬಳಿಕ ಅವರು ಬಾಡಿಗೆಗೆ ಪಡೆದಿದ್ದ ಸ್ಕೂಟಿ ಸೊಹ್ರಾರಿಮ್ ಬಳಿ ಪತ್ತೆಯಾಗಿತ್ತು. 11 ದಿನಗಳ ಹುಟುಕಾಟದ ಬಳಿಕ ಶಿಲ್ಲಾಂಗ್ ಪೊಲೀಸರು ಆಳವಾದ ಕಂದಕವೊಂದರಲ್ಲಿ ರಾಜಾ ರಘುವಂಶಿ ಅವರ ಮೃತದೇಹವನ್ನು ಪತ್ತೆ ಹಚ್ಚಿದ್ದರು. ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ದೃಢಪಡಿಸಿದ್ದರು.
ಪತ್ನಿಗೆ ಚಟ್ಟಕಟ್ಟಿದ್ದೇಕೆ?
ಸೋನಮ್ಗೆ ಘಾಜಿಪುರದ ನಂದಗಂಜ್ನಲ್ಲಿ ರಾಜ್ ಕುಶ್ವಾಹ ಎಂಬ ಯುವಕನೊಂದಿಗೆ ಅಕ್ರಮ ಸಂಬಂಧವಿತ್ತು. ಇದೇ ಕಾರಣಕ್ಕೆ ಆಕೆ ಪತಿಯ ಕೊಲೆಗೆ ಸಂಚು ರೂಪಿಸಿದ್ದಳು. ಮೇಘಾಲಯದಲ್ಲಿ ಹನಿಮೂನ್ಗೆ ತೆರಳಿದ ವೇಳೆ ಸೊಹ್ರಾ ಪ್ರದೇಶದಲ್ಲಿ ಪತಿಯನ್ನ ಕೊಲೆ ಮಾಡಲು ಆಕೆ ಮಧ್ಯಪ್ರದೇಶ ಮೂಲದ ಬಾಡಿಗೆ ಕೊಲೆಗಾರರನ್ನು ನೇಮಿಸಿದ್ದಳು. ಇದನ್ನೂ ಓದಿ: ಮೈತೇಯಿ ಸಮುದಾಯದ ನಾಯಕ ಬಂಧನ – ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಯುವಕರ ಬೆದರಿಕೆ