Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬುರ್ಖಾ ಧರಿಸಿ ಇಂದೋರ್ ಸೇರಿದ್ದಳು ಹನಿಮೂನ್ ಹಂತಕಿ – ಮದುವೆಗೆ 11 ದಿನ ಮುನ್ನವೇ ಕೊಲೆಗೆ ಪ್ಲ್ಯಾನ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬುರ್ಖಾ ಧರಿಸಿ ಇಂದೋರ್ ಸೇರಿದ್ದಳು ಹನಿಮೂನ್ ಹಂತಕಿ – ಮದುವೆಗೆ 11 ದಿನ ಮುನ್ನವೇ ಕೊಲೆಗೆ ಪ್ಲ್ಯಾನ್‌!

Crime

ಬುರ್ಖಾ ಧರಿಸಿ ಇಂದೋರ್ ಸೇರಿದ್ದಳು ಹನಿಮೂನ್ ಹಂತಕಿ – ಮದುವೆಗೆ 11 ದಿನ ಮುನ್ನವೇ ಕೊಲೆಗೆ ಪ್ಲ್ಯಾನ್‌!

Public TV
Last updated: June 16, 2025 9:21 pm
Public TV
Share
2 Min Read
Meghalaya Honeymoon 4
SHARE

ಶಿಲ್ಲಾಂಗ್‌: ಮೇಘಾಲಯಕ್ಕೆ (Meghalaya) ಹನಿಮೂನ್‌ಗೆ (Honeymoon) ತೆರಳಿದ್ದಾಗ ಪತಿಯನ್ನು ಹತ್ಯೆಗೈದು ಪೊಲೀಸರ ಅತಿಥಿ ಆಗಿರುವ ಸೋನಮ್‌ (Sonam Raghuvanshi), ಬುರ್ಖಾ ಧರಿಸಿ ಇಂದೋರ್‌ ತಲುಪಿದ್ದಳು ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದೇ ವಿಚಾರಗಳು ಬಯಲಾಗುತ್ತಿದ್ದು, ರಾಜಾ ರಘುವಂಶಿ ಹತ್ಯೆ ಬಳಿಕ ಸೋನಮ್ ರಹಸ್ಯವಾಗಿ ಇಂದೋರ್‌ನ (Indore) ಫ್ಲ್ಯಾಟ್‌ವೊಂದರಲ್ಲಿ ವಾಸವಾಗಿದ್ದಳು. ಕೊಲೆಯ ರಹಸ್ಯ ಯಾರಿಗೂ ತಿಳಿಬಾರದು ಎಂದು, ಯಾರಿಗೂ ಗೊತ್ತಾಗದಂತೆ ಬುರ್ಖಾ ಧರಿಸಿ ಮೇಘಾಲಯದಿಂದ ಇಲ್ಲಿಗೆ ಬಂದಿದ್ದಳು. ಅಲ್ಲದೇ ಮದುವೆಗೆ 11 ದಿನ ಇರುವಾಗಲೇ ಕೊಲೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎಂಬುದನ್ನು ತನಿಖೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಇದನ್ನೂ ಓದಿ: ಪತಿ ಕೊಲೆ ಬಳಿಕ ಇಂದೋರ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದ ಹನಿಮೂನ್ ಹಂತಕಿ

Meghalaya Honeymoon 3

ಇಲ್ಲಿಯವರೆಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಲಾಗಿತ್ತು ಎಂದು ಹೇಳಲಾಗುತ್ತಿತ್ತು. ಆದರೆ ಉಳಿದ ಆರೋಪಿಗಳು ಸೋನಮ್‌ ಪ್ರಿಯಕರ ರಾಜ್ ಕುಶ್ವಾಹನ ಸ್ನೇಹಿತರೇ ಆಗಿದ್ದು, ಆತನಿಗೆ ಕೊಲೆಗೆ ಸಹಾಯ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ರಾಜಾ ರಘುವಂಶಿ ಹತ್ಯೆ ಪ್ರಕರಣದ ಐವರು ಆರೋಪಿಗಳಾದ ಸೋನಮ್ ರಘುವಂಶಿ, ಆಕೆಯ ಪ್ರಿಯಕರ ಕುಶ್ವಾಹ, ಆತನ ಸ್ನೇಹಿತರಾದ ಆಕಾಶ್ ರಜಪೂತ್, ವಿಶಾಲ್ ಸಿಂಗ್ ಚೌಹಾಣ್ ಮತ್ತು ಆನಂದ್ ಕುರ್ಮಿ ​​ಕೃತ್ಯ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

ಮೇ 23ರಂದು ಪತಿ ರಾಜಾ ರಘುವಂಶಿಯ ಕೊಲೆ ಮಾಡಿದ ಬಳಿಕ ಸೋನಮ್ ಗುಪ್ತವಾಗಿ ಇಂದೋರ್ ಸೇರಿಕೊಂಡಿದ್ದಳು. ಬಳಿಕ ಪ್ರಕರಣ 4 ಆರೋಪಿಗಳ ಪೈಕಿ ಒಬ್ಬನಾದ ವಿಶಾಲ್ ಸಿಂಗ್ ಚೌಹಾನ್ ಮೇ 30ರಂದು ಬಾಡಿಗೆ ಪಡೆದಿದ್ದ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದಳು. ಜೊತೆಗೆ ಸೋನಮ್‌ಗಾಗಿ ಆಕೆಯ ಪ್ರಿಯಕರ ರಾಜ್ 5,000 ರೂ. ಮೌಲ್ಯದ ರೇಷನ್‌ನ್ನು ಆನ್‌ಲೈನ್ ಮೂಲಕ ತರಿಸಿಟ್ಟಿದ್ದ ಎಂದು ಮೂಲಗಳು ತಿಳಿಸಿವೆ.

ಏನಿದು ಪ್ರಕರಣ?
ಇಂದೋರ್ ಮೂಲದ ರಾಜಾ ರಘುವಂಶಿ ಮತ್ತು ಸೋನಮ್ ಕಳೆದ ಮೇ 11ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ನವದಂಪತಿ ಮೇ 20ರಂದು ಹನಿಮೂನ್‌ಗೆಂದು ಮೇಘಾಲಯಕ್ಕೆ ತೆರಳಿದ್ದರು. ಶಿಲ್ಲಾಂಗ್‌ನ ಬಾಲಾಜಿ ಅತಿಥಿಗೃಹದಲ್ಲಿ ಉಳಿದುಕೊಂಡಿದ್ದ ಅವರು ಮೇ 22ರ ಬೆಳಗ್ಗೆ ದ್ವಿಚಕ್ರ ವಾಹನವೊಂದನ್ನು ಬಾಡಿಗೆ ಪಡೆದು ಅತಿಥಿ ಗೃಹದಿಂದ ಜನಪ್ರಿಯ ಪ್ರವಾಸಿ ತಾಣ ಸೊಹ್ರಾಕ್ಕೆ ತೆರಳಿದ್ದರು. ಈ ವೇಳೆ ಅವರು 2 ಲಗೇಜ್ ಬ್ಯಾಗ್ ತಮ್ಮೊಂದಿಗೆ ತೆಗೆದುಕೊಂಡಿದ್ದರು. ಮೇ 25ರೊಳಗೆ ಹಿಂತಿರುಗುವುದಾಗಿ ಅತಿಥಿ ಗೃಹದ ವ್ಯವಸ್ಥಾಪಕರಿಗೆ ತಿಳಿಸಿದ್ದರು. ಮೇ 23ರಂದು ಮೌಲಾಖಿಯಾತ್ ಗ್ರಾಮ ತಲುಪಿದ ದಂಪತಿ, ನೊಂಗ್ರಿಯಾಟ್‌ನ ಶಿಪಾರಾ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಆ ಬಳಿಕ ದಂಪತಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಇದಾದ 1 ದಿನದ ಬಳಿಕ ಅವರು ಬಾಡಿಗೆಗೆ ಪಡೆದಿದ್ದ ಸ್ಕೂಟಿ ಸೊಹ್ರಾರಿಮ್ ಬಳಿ ಪತ್ತೆಯಾಗಿತ್ತು. 11 ದಿನಗಳ ಹುಡುಕಾಟದ ಬಳಿಕ ಶಿಲ್ಲಾಂಗ್ ಪೊಲೀಸರು ಆಳವಾದ ಕಂದಕವೊಂದರಲ್ಲಿ ರಾಜಾ ರಘುವಂಶಿ ಅವರ ಮೃತದೇಹವನ್ನು ಪತ್ತೆ ಹಚ್ಚಿದ್ದರು. ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ದೃಢಪಡಿಸಿದ್ದರು.

ರಾಜಾ ರಘುವಂಶಿಯ ಕೊಲೆ ನಂತರ ಇನ್ನೊಬ್ಬ ಮಹಿಳೆಯನ್ನು ಕೊಂದು ಶವವನ್ನು ಸುಟ್ಟು, ಆಕೆಯನ್ನೇ ಸೋನಮ್ ಎಂದು ನಂಬಿಸಬೇಕೆಂದು ಕೊಂಡಿದ್ದರು. ಸತ್ಯ ಬಯಲಾಗುವವರೆಗೂ ಸೋನಮ್‌ನ್ನು ಎಲ್ಲಿಯಾದರೂ ಅಡಗಿಸಿಡುವ ಯೋಜನೆ ಹಾಕಿಕೊಂಡಿದ್ದರು ಎಂದು ತನಿಖೆಯಲ್ಲಿ ಬಯಲಾಗಿದೆ.

ಜೂ.11ರಂದು ಮೇಘಾಲಯ ಪೊಲೀಸರು ಸೋನಮ್ ಹಾಗೂ ಇನ್ನುಳಿದ ಆರೋಪಿಗಳನ್ನು ಶಿಲ್ಲಾಂಗ್ ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ವೇಳೆ ಕೋರ್ಟ್ ಐದು ಆರೋಪಿಗಳನ್ನು 8 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿತ್ತು. ಇದನ್ನೂ ಓದಿ: Honeymoon Murder | ಬೇರೊಂದು ಮಹಿಳೆ ಹತ್ಯೆಗೈದು ಸೋನಮ್ ಶವವೆಂದು ನಂಬಿಸೋಕೆ ಮುಂದಾಗಿದ್ದ ಹಂತಕರು

TAGGED:crimeHoneymoonMeghalayaSonam Raghuvanshi
Share This Article
Facebook Whatsapp Whatsapp Telegram

Cinema news

indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows
Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories

You Might Also Like

HD Kumaraswamy
Districts

ಗೋ ಬ್ಯಾಕ್ ಗವರ್ನರ್ ಅನ್ನೋದು ರಾಜಕೀಯ ನಾಟಕ – ಹೆಚ್‌ಡಿಕೆ ಕಿಡಿ

Public TV
By Public TV
11 seconds ago
Karnataka Vidhanasabha Session
Bengaluru City

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಜಟಾಪಟಿ; ಆಡಳಿತ ವಿಪಕ್ಷ ಸದಸ್ಯರ ನಡುವೆ ಜಂಗೀ ಕುಸ್ತಿ

Public TV
By Public TV
2 hours ago
chinese girl marries chikkamagaluru lover
Chikkamagaluru

ಕಾಫಿನಾಡಲ್ಲೊಂದು ಕಡಲಾಚೆಯ ಪ್ರೇಮಕಥೆ – ಚಿಕ್ಕಮಗಳೂರಿನ ಯುವಕನಿಗೆ ಜೋಡಿಯಾದ ಚೀನಾ ಚೆಲುವೆ!

Public TV
By Public TV
2 hours ago
Chikkaballapura Congress Leader Threat To Municipal Commissioner
Bengaluru City

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ – ಕೆಪಿಸಿಸಿಯಿಂದ ರಾಜೀವ್ ಗೌಡ ಅಮಾನತು

Public TV
By Public TV
2 hours ago
elon musk
Latest

ಕೆಲ ವರ್ಷಗಳಲ್ಲಿ ಸೌರಶಕ್ತಿ ಚಾಲಿತ ಎಐ ಉಪಗ್ರಹ ಉಡಾವಣೆ: ಮಸ್ಕ್‌ ಘೋಷಣೆ

Public TV
By Public TV
2 hours ago
Pune Car Rams over 5 year old boy
Crime

ಅಪಾರ್ಟ್‌ಮೆಂಟ್ ಆವರಣದಲ್ಲಿ ಸೈಕಲ್ ಆಟವಾಡುತ್ತಿದ್ದಾಗ ಕಾರು ಡಿಕ್ಕಿ – ಬಾಲಕ ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?