ಮುಂಬೈ: ಬೇರೆ ಬೇರೆ ಕ್ಷೇತ್ರದಲ್ಲಿ ಸಧನೆ ಮಾಡಿದ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ. ಸೋನುಗೆ ಪದ್ಮಶ್ರೀ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಈ ವಿಚಾರವಾಗಿ ನಟ ಸೋನು ಸೂದ್ ಮಾತನಾಡಿದ್ದಾರೆ.
ಪ್ರಾಮಾಣಿಕವಾಗಿ ಹೇಳೋದಾದರೆ ಇದನ್ನು ನಾನು ನಿರೀಕ್ಷಿಸಿರಲಿಲ್ಲ. ನನಗೆ ಜನರ ಪ್ರೀತಿಯೇ ದೊಡ್ಡ ಪ್ರಶಸ್ತಿ. ನನ್ನ ಮನೆಯ ಕೆಳಗೆ ನನ್ನನ್ನು ಭೇಟಿಯಾಗಲು ಈಗಲೂ ಜನರು ಕಾಯುತ್ತಿದ್ದಾರೆ ಎಂದಿದ್ದಾರೆ. ಈ ಮೂಲಕ ಜನರ ಅಭಿಮಾನ ಹಾಗೂ ಪ್ರೀತಿಯೇ ದೊಡ್ಡದು ಎಂದು ರಿಯಲ್ ಹೀರೋ ಹೇಳಿದ್ದಾರೆ. ಇದನ್ನೂ ಓದಿ: ಕಂಗನಾಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯುವಂತೆ ನವಾಬ್ ಮಲ್ಲಿಕ್ ಒತ್ತಾಯ
ಮುಂದೆಯೂ ತಮ್ಮ ಕೆಲಸವನ್ನು ಮುಂದುವರಿಸಿಕೊಂಡು ಹೋಗುವ ಉದ್ದೇಶ ಇದೆ. ಈ ಬಗ್ಗೆ ಅವರು ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ. ಜನರು ಸಹಾಯಕ್ಕಾಗಿ ನನ್ನ ಬಳಿಗೆ ಬರುವವರೆಗೂ, ಅವರಿಗೆ ನನ್ನಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇನೆ. ನನ್ನ ಪ್ರಯತ್ನಗಳಿಗೆ ಮನ್ನಣೆ ಇದೆಯೋ ಇಲ್ಲವೋ ಎಂಬುದು ಮುಖ್ಯವಲ್ಲ. ಯಾರೋ ಗುರುತಿಸಬೇಕು ಎಂದು ನಾನು ಇದನ್ನು ಮಾಡುತ್ತಿಲ್ಲ. ನಾನು ಪ್ರತಿ ರಾತ್ರಿ ಚಿಂತೆ ಇಲ್ಲದೆ ಸುಖ ನಿದ್ರೆ ಪಡೆಯುತ್ತಿದ್ದೇನಲ್ಲ ಅದನ್ನು ಯಾರಿಂದಲೂ ವಿವರಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ನನ್ನ ತಪ್ಪು ಸಾಬೀತಾದರೆ ಪದ್ಮಶ್ರೀ ಹಿಂದಿರುಗಿಸುವೆ: ಕಂಗನಾ ರಣಾವತ್
ಸೋನು ಸೂದ್ ಅವರು ಕೊರೊನಾ ಸಂಕಷ್ಟ ಬಂದಾಗಿನಿಂದನೂ ಒಂದಲ್ಲಾ ಒಂದು ರೀತಿ ಜನರಿಗೆ ಸಹಾಯವನ್ನು ಮಾಡುತ್ತಾ ಜನರ ಬಾಕಿಗೆ ಬೆಳಕಾಗಿದ್ದಾರೆ. ಕೊರೊನಾ ಸಂಕಷ್ಟದಿಂದ ಕೆಲಸ ಕಳೆದುಕೊಂಡಿದ್ದ ಬಡ ಜನರಿಗೆ ಉದ್ಯೋಗ ಮಾಡಲು ತಮ್ಮ ಕೈಲಾದಷ್ಟು ಸಹಾಯವನ್ನು ಮಾಡುತ್ತಿದ್ದಾರೆ.