Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಕ್ಷಿಣ ಭಾರತದ ಕುಂಭಮೇಳ ಕೊಪ್ಪಳದ ಗವಿಮಠ ಜಾತ್ರೆಗೆ ಅದ್ದೂರಿ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದಕ್ಷಿಣ ಭಾರತದ ಕುಂಭಮೇಳ ಕೊಪ್ಪಳದ ಗವಿಮಠ ಜಾತ್ರೆಗೆ ಅದ್ದೂರಿ ಚಾಲನೆ

Districts

ದಕ್ಷಿಣ ಭಾರತದ ಕುಂಭಮೇಳ ಕೊಪ್ಪಳದ ಗವಿಮಠ ಜಾತ್ರೆಗೆ ಅದ್ದೂರಿ ಚಾಲನೆ

Public TV
Last updated: January 5, 2026 9:46 pm
Public TV
Share
4 Min Read
Koppal Gavi Mutt 1
SHARE

ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಅಂತ ಕರೆಯುವ ಕೊಪ್ಪಳದ (Koppal) ಗವಿಮಠದ (Gavi Mutt) ಜಾತ್ರೆ ಇಂದಿನಿಂದ ಆರಂಭವಾಗಿದ್ದು, ಅದ್ದೂರಿ ಚಾಲನೆ ದೊರೆತಿದೆ.

ಕೊಪ್ಪಳದ ಗವಿಮಠದ ಜಾತ್ರೆಗೆ ರಾಜ್ಯದಿಂದ, ನಾಡಿನ ವಿವಿಧ ಮೂಲೆಗಳಿಂದ ಲಕ್ಷ ಲಕ್ಷ ಭಕ್ತರು ಬರುತ್ತಾರೆ. ಇಂದು ಮಹಾರಥೋತ್ಸವ ಹಿನ್ನೆಲೆ ಮಠಕ್ಕೆ ಅಪಾರ ಜನಸ್ತೋಮವೇ ಹರಿದು ಬಂದಿತ್ತು. 210ನೇ ಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಮೇಘಾಲಯ ರಾಜ್ಯಪಾಲ ಚಂದ್ರಶೇಖರ ಎಚ್.ವಿಜಯಶಂಕರ ಅವರು ಚಾಲನೆ‌ ನೀಡಿದರು. ತಟಸ್ಥಲ ಧ್ವಜ ಏರುತ್ತಿದ್ದಂತೆಯೇ ರಥ ಮುಂದೆ ಸಾಗಿತು. ಬರೋಬ್ಬರಿ 5.45ಕ್ಕೆ ಆರಂಭವಾದ ಮಹಾರಥ ಭಕ್ತರ‌ ಸಾಗರದ ಜಯ ಘೋಷದ ನಡುವೆ ರಾಜ ಗಾಂಭೀರ್ಯದೊಂದಿಗೆ ಮುಂದೆ ಸಾಗಿತು.‌ ತೇರಿನ ಸುತ್ತಲೂ ನೆರೆದಿದ್ದ ಲಕ್ಷೋಪ ಲಕ್ಷ ಭಕ್ತರು ‘ಗವಿಸಿದ್ದೇಶ್ವರ ಮಹಾರಾಜಕೀ ಜೈ’ ಎಂದು ಘೋಷಣೆ ಕೂಗುವ ಮೂಲಕ ರಥ ಎಳೆದರು. ರಥದ ಸುತ್ತಲೂ ಸೇರಿದ್ದ ನಾಡಿನ ನಾನಾ ಭಾಗದಿಂದ ಬಂದಿದ್ದ ಭಕ್ತರು ರಥೋತ್ಸವಕ್ಕೆ ಕೈ ಮುಗಿದು ಭಕ್ತಿ-ಭಾವದಿಂದ ಕಣ್ತುಂಬಿಕೊಂಡರು. ಅನೇಕರು ರಥದ ಕಳಶಕ್ಕೆ ಉತ್ತತ್ತಿ ಎಸೆದು ಧನ್ಯತೆ ‌ಮೆರೆದರು.

ಸಂಪ್ರದಾಯದಂತೆ ಪಾದಗಟ್ಟೆ ಬಳಿ ಪೂಜೆ ನೆರವೇರಿಸಿ, ಮತ್ತೇ ಭಕ್ತರು ರಥ ಎಳೆದರು. ಬರೋಬ್ಬರಿ 6.05ಕ್ಕೆ ಸ್ವ‌ಸ್ಥಾನ ತಲುಪಿತು. ರಥ ಮೂಲ‌ ಸ್ಥಾನದಲ್ಲಿ‌ ನಿಲ್ಲುತ್ತಿದ್ದಂತೆಯೇ ಭಕ್ತರು ಜಯ‌ ಘೋಷ ಮೊಳಗಿಸಿ, ಚಪ್ಪಾಳೆ ‌ತಟ್ಟಿ ಹರ್ಷ ವ್ಯಕ್ತಪಡಿಸಿದರು. ಮಹಾರಥೋತ್ಸವದ ಮುಂದೆ ನಂದಿ ಕೋಲಿನ‌ ಕುಳಿತ ಸೇರಿ ಸಾಂಪ್ರದಾಯಿಕ ಕಲಾ ತಂಡಗಳು ಭಕ್ತರನ್ನು ಮಂತ್ರ‌ ಮುಗ್ಧರನ್ನಾಗಿ ಮಾಡಿದ್ದವು.

ಈ ಮೊದಲು ಗವಿಮಠದ ಗದ್ದುಗೆಯಿಂದ ಉತ್ಸವ ಮೂರ್ತಿಯನ್ನು ಭಕ್ತಗಣದ ನಡುವೆ ಮಹಾರಥೋತ್ಸವಕ್ಕೆ ತರಲಾಯಿತು. ನಂದಿ ಕೋಲು ಸೇರಿ ನಾನಾ ಸಾಂಪ್ರದಾಯಿಕ ಕಲಾ‌ ತಂಡಗಳು ಸಾಥ್‌ ನೀಡಿದ್ದವು. ನಂತರ ಗವಿಸಿದ್ದೇಶ್ವರ ‌ಮಹಾಸ್ವಾಮಿಗಳು ಭಾರಿ ಬಂದೋಬಸ್ತನಲ್ಲಿ ಮಹಾರಥೋತ್ಸವದ ಬಳಿಗೆ ತೆರಳಿ, ಪೂಜೆ ಸಲ್ಲಿಸಿ ವೇದಿಕೆಗೆ ಆಗಮಿಸಿದರು. ಕನಕಗುರು ಪೀಠ ಕಾಗಿನೆಲೆಯ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಹೆಬ್ಬಾಳಶ್ರೀ, ಹಿರೇಸಿಂದೋಗಿ ಕಪ್ಪತೇಶ್ವರ‌ ಮಠದ ಚಿದಾನಂದ ಸ್ವಾಮೀಜಿ ಸೇರಿ ನಾನಾ ಮಠಗಳ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದರು.

ಕೇಂದ್ರ ರಾಜ್ಯ ಖಾತೆ ರೈಲ್ವೇ ಮಂತ್ರಿ ವಿ.ಸೋಮಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಮಾಜಿ ಸಿಎಂಗಳಾದ ಜಗದೀಶ್‌ ಶೆಟ್ಟರ್‌, ಬಸವರಾಜ ಬೊಮ್ಮಾಯಿ, ಶಾಸಕರಾದ ರಾಘವೇಂದ್ರ ಹಿಟ್ನಾಳ,‌ ಜನಾರ್ದನ ರೆಡ್ಡಿ, ಹೇಮಲತಾ ನಾಯಕ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಮಾಜಿ ಸಂಸದರಾದ ಸಂಗಣ್ಣ ಕರಡಿ, ಕೆ.ವಿರೂಪಾಕ್ಷಪ್ಪ, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಡೆಸುಗೂರ, ಲೋಕಸಭೆ ಪರಾಜಿತ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್, ಮುಖಂಡರಾದ ದೊಡ್ಡ ಬಸವನಗೌಡ ಭಯ್ಯಾಪೂರ, ವಿರೇಶ ಮಹಾಂತಯ್ಯನಮಠ,ಡಿಸಿ‌ ಸುರೇಶ ಹಿಟ್ನಾಳ,‌ ಎಸ್ಪಿ ಡಾ.ರಾಮ್.ಎಲ್.ಅರಸಿದ್ದಿ, ಜಿಲ್ಲಾ ನ್ಯಾಯಾಧೀಶ ಚಂದ್ರಶೇಖರ ಸಿ ಸೇರಿ ಇತರರು ಇದ್ದರು.

ಇನ್ನೂ ಮಠದ ಜಾತ್ರೆ ಹೇಗೆ ಸುಪ್ರಸಿದ್ದವೋ, ಅದೇ ರೀತಿ ಮಠದ ಪ್ರಸಾದ ಕೂಡಾ ಅಷ್ಟೇ ಸುಪ್ರಸಿದ್ದ. ಕೊಪ್ಪಳ ಗವಿಮಠದ ದಾಸೋಹ, ಕೇವಲ ಪ್ರಸಾದವಾಗದೇ, ಅದು ಭಕ್ಷ್ಯ ಭೋಜನವಾಗಿರುತ್ತದೆ. ಇಂದು ಮಠದ ಜಾತ್ರೆಗೆ ಬಂದವರಿಗೆ ರೊಟ್ಟಿ, ಹೆಸರು ಕಾಳು ಪಲ್ಲೆ, ಬದನೆಕಾಯಿ ಪಲ್ಲೆ, ಕೆಂಪು ಚಟ್ನಿ, ಮಾದಲಿ, ಹಾಲು, ತುಪ್ಪ, ಮೈಸೂರು ಪಾಕ್, ಅನ್ನ ಸಾರು ಸೇರಿದಂತೆ ಅನೇಕ ಆಹಾರವನ್ನು ಬಡಿಸಲಾಯಿತು. ಇದನ್ನೂ ಓದಿ: KPCL ನೇಮಕಾತಿ: 8 ದಿನಗಳಲ್ಲಿ ತಾತ್ಕಾಲಿಕ ಫಲಿತಾಂಶ ಪ್ರಕಟ – ಕೆಇಎ

Koppal Gavi Mutt

ನೂರಾ ಐವತ್ತಕ್ಕೂ ಹೆಚ್ಚು ಬಾಣಸಿಗರು ನಸುಕಿನ ಜಾವದಿಂದಲೇ ಆಹಾರ ರೆಡಿ ಮಾಡುತ್ತಿದ್ದು, ಎಷ್ಟೇ ಭಕ್ತರು ಬಂದ್ರು ಕೂಡಾ ಅವರಿಗೆ ಊಟದ ಕೊರತೆಯಾಗದಂತೆ ಅಡುಗೆಯನ್ನು ಸಿದ್ಧಗೊಳಿಸಿ, ಭಕ್ತರಿಗೆ ನೀಡೋ ವ್ಯವಸ್ಥೆ ಮಾಡಲಾಗಿದೆ. ಊಟ ಬಡಿಸಲಿಕ್ಕೆಂದೆ ನೂರಾರು ಕೌಂಟರ್ ಆರಂಭಿಸಿದ್ದು, ಸರಿಸುಮಾರು ಸಾವಿರದ ಐನೂರಕ್ಕೂ ಹೆಚ್ಚು ಜನರು, ಅಡುಗೆ ಮಾಡುವುದು, ಅದನ್ನು ಅಚ್ಚುಕಟ್ಟಾಗಿ ಬಡಿಸೋ ಕೆಲಸವನ್ನು ಮಾಡುತ್ತಿದ್ದಾರೆ.

ಈ ವರ್ಷದ ಜಾತ್ರೆಯಲ್ಲಿ ಭಕ್ತಾದಿಗಳಿಗೆ ಸಿಹಿ ಉಣಬಡಿಸಲು ರಾಯಚೂರು ಜಿಲ್ಲೆಯ ಸಿಂಧನೂರು ಗೆಳೆಯರ ಬಳಗ ಮುಂದಾಗಿದೆ. ಕಳೆದ 10 ವರ್ಷಗಳಿಂದ ನಿರಂತರವಾಗಿ ಮಠದ ಸೇವೆಯಲ್ಲಿ ತೊಡಗಿರುವ ಈ ತಂಡ, ಈ ಬಾರಿ ಬರೋಬ್ಬರಿ 10 ಲಕ್ಷ ಮೈಸೂರು ಪಾಕ್ ತಯಾರಿಸುವ ಗುರಿ ಹೊಂದಿದೆ. ಇಂದಿನಿಂದ ಎರಡು ದಿನಗಳ ಕಾಲ ಅಹೋರಾತ್ರಿ ಈ ತಯಾರಿಕಾ ಕಾರ್ಯ ನಡೆಯುತ್ತಿದೆ. ಮಠದ ಆವರಣದಲ್ಲಿ ಮೈಸೂರು ಪಾಕ್‌ನ ಘಮಲು ಎಲ್ಲೆಡೆ ಹರಡಿದೆ.

ಇನ್ನು ಈ ಬೃಹತ್ ಪ್ರಮಾಣದ ಮೈಸೂರು ಪಾಕ್ ತಯಾರಿಗಾಗಿ ಬಳಕೆಯಾಗುತ್ತಿರುವ ಪದಾರ್ಥಗಳ ಪಟ್ಟಿ ನೋಡಿದರೆ ನೀವು ಬೆರಗಾಗೋದು ಗ್ಯಾರಂಟಿ. ಸುಮಾರು 60 ಕ್ವಿಂಟಾಲ್ ಸಕ್ಕರೆ, 40 ಕ್ವಿಂಟಾಲ್ ಕಡ್ಲೆ ಹಿಟ್ಟು, 5 ಸಾವಿರ ಲೀಟರ್ ಎಣ್ಣೆ, 3 ಕ್ವಿಂಟಾಲ್ ತುಪ್ಪ ಹಾಗೂ 50 ಕೆ.ಜಿ ಏಲಕ್ಕಿಯನ್ನು ಇಲ್ಲಿ ಬಳಸಲಾಗುತ್ತಿದೆ. ಸುಮಾರು 150ಕ್ಕೂ ಹೆಚ್ಚು ಅನುಭವಿ ಬಾಣಸಿಗರು ಶಿಸ್ತುಬದ್ಧವಾಗಿ ಈ ರುಚಿಕರ ಸಿಹಿಯನ್ನು ಸಿದ್ಧಪಡಿಸುತ್ತಿದ್ದಾರೆ. ಲಕ್ಷ ಲಕ್ಷ ಭಕ್ತರು ಗವಿಮಠ ಜಾತ್ರೆಯಲ್ಲಿ ಮಹಾಪ್ರಸಾದ ಸೇವಿಸುತ್ತಾರೆ.

ಕೊಪ್ಪಳ ಗವಿಮಠದ ಜಾತ್ರೆಯ ದಾಸೋಹ ಜನವರಿ 1ರಿಂದಲೇ ಆರಂಭವಾಗಿದ್ದು, ಜನವರಿ 18ರವರೆಗೆ ನಡೆಯಲಿದೆ. ಅದರಂತೆ ಜನವರಿ 1ರಂದು ಅಡುಗೆ ಮಾಡಲು ಹಚ್ಚಿರುವ ಬೆಂಕಿ, ಜನವರಿ 18ರವರೆಗೆ ಉರಿಯಲಿದೆ. ಈ ಜಾತ್ರೆಗೆ ಬರೋರು ಪ್ರಸಾದ ಸೇವಿಸಿ, ಜೈ ಗವಿಸಿದ್ದೇಶ್ವರ ಮಹರಾಜ್ ಕಿ ಜೈ ಅಂತ ಜೈಕಾರ ಹಾಕಿ ಸಂಭ್ರಮಿಸುತ್ತಾರೆ.ಇದನ್ನೂ ಓದಿ: ಹೆದರಬೇಡ ಅಪ್ಪಿ ಅಂತಿದ್ರು, ಆದ್ರೆ ಮಾಳು ಸ್ಟೇಟ್ಮೆಂಟ್‌ ಕೇಳಿ ಅಚ್ಚರಿ ಆಯ್ತು – ಸ್ಪಂದನಾ

TAGGED:Gavi MuttGavi SiddeshwarKoppalಕೊಪ್ಪಳಗವಿಮಠಗವಿಮಠ ಜಾತ್ರೆಗವಿಸಿದ್ದೇಶ್ವರ
Share This Article
Facebook Whatsapp Whatsapp Telegram

Cinema news

gautam srivatsa gave music to the hindi film azad bharat 1
ಹಿಂದಿಯ ಆಜಾದ್ ಭರತ್ ಚಿತ್ರಕ್ಕೆ ಜೀವ ತುಂಬಿದ ಗೌತಮ್ ಶ್ರೀವತ್ಸ
Cinema Latest Sandalwood
Vijay
ಅರಬ್ ರಾಷ್ಟ್ರಗಳಲ್ಲಿ ದಳಪತಿಯ ʻಜನನಾಯಗನ್ʼ ಬ್ಯಾನ್?
Cinema Latest South cinema Top Stories
Darshan 8
ಅಲೋಕ್‌ ಕುಮಾರ್‌ ಖಡಕ್‌ ನಡೆ – ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗೋದು ಅನುಮಾನ
Bengaluru City Cinema Karnataka Latest Main Post
gilli rashika
ಗಿಲ್ಲಿ ಜೊತೆ ಜಗಳಕ್ಕೆ ಬಿದ್ದ ರಾಶಿಕಾ; ಕಾರಣವೇನು ಗೊತ್ತಾ?
Cinema Latest Top Stories TV Shows

You Might Also Like

CK Ramamurthy
Bengaluru City

ಇನ್ಸ್ಟಾದಲ್ಲಿ ಯುವತಿಗೆ ಮೆಸೇಜ್ – ಇದು ಕಾಂಗ್ರೆಸ್ ಐಟಿ ಟೀಂ ಕೆಲಸ ಎಂದ ಬಿಜೆಪಿ ಶಾಸಕ

Public TV
By Public TV
3 minutes ago
CK Ramamurthy
Bengaluru City

ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಫೇಸ್‌ಬುಕ್, ಇನ್ಸ್ಟಾ ಹ್ಯಾಕ್ – ಯುವತಿಗೆ ಮೆಸೇಜ್

Public TV
By Public TV
31 minutes ago
BJP Congress
Latest

ಅಧಿಕಾರಕ್ಕಾಗಿ ಕಾಂಗ್ರೆಸ್‌ ಜೊತೆ ಮೈತ್ರಿ – ಬಿಜೆಪಿಗೆ ಮೇಯರ್‌ ಪಟ್ಟ

Public TV
By Public TV
42 minutes ago
Bangladesh Canal
Crime

ಕಳ್ಳ ಕಳ್ಳ ಅಂತ ಅಟ್ಟಾಡಿಸಿದ ಜನ – ಬಾಂಗ್ಲಾದಲ್ಲಿ ಕಾಲುವೆಗೆ ಹಾರಿ ಹಿಂದೂ ವ್ಯಕ್ತಿ ಸಾವು

Public TV
By Public TV
47 minutes ago
R Ashoka 1
Bengaluru City

ಸಿಎಂ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದೆ: ಅಶೋಕ್

Public TV
By Public TV
1 hour ago
IG Vartika katiyar
Bellary

ಬಳ್ಳಾರಿ ಬ್ಯಾನರ್‌ ಗಲಭೆ ಪ್ರಕರಣ – ಐಜಿ ವರ್ತಿಕಾ ಕಟಿಯಾರ್‌ ತಲೆದಂಡ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?