Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದೂಗಳನ್ನು ಒಂದು ಮಾಡಲು ಹೊರಟರೆ ದಕ್ಷಿಣ ಕರ್ನಾಟಕ ಬಿಜೆಪಿ ಪಾಲಿಗೆ ಬಂದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಿಂದೂಗಳನ್ನು ಒಂದು ಮಾಡಲು ಹೊರಟರೆ ದಕ್ಷಿಣ ಕರ್ನಾಟಕ ಬಿಜೆಪಿ ಪಾಲಿಗೆ ಬಂದ್

Districts

ಹಿಂದೂಗಳನ್ನು ಒಂದು ಮಾಡಲು ಹೊರಟರೆ ದಕ್ಷಿಣ ಕರ್ನಾಟಕ ಬಿಜೆಪಿ ಪಾಲಿಗೆ ಬಂದ್

Public TV
Last updated: April 11, 2022 7:10 pm
Public TV
Share
2 Min Read
KUMARASWAMY
SHARE

ರಾಮನಗರ: ಹಿಂದೂಗಳನ್ನು ಒಂದು ಮಾಡಲು ಹೊರಟರೆ ಬಿಜೆಪಿ ಪಾಲಿಗೆ ದಕ್ಷಿಣ ಕರ್ನಾಟಕ ಸಂಪೂರ್ಣ ಬಂದ್ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿ ಚುನಾವಣಾ ಪೂರ್ವ ಸಿದ್ಧತೆಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರಿಗೋಸ್ಕರ ತಲ್ವಾರ್ ತೋರಿಸುತ್ತಿದ್ದೀರಿ? ಕರ್ನಾಟಕವನ್ನು ಮತ್ತೊಂದು ಗುಜರಾತ್ ಮಾಡಲು ಹೊರಟಿದ್ದೀರಾ? ಕರ್ನಾಟಕದಲ್ಲಿ ಮತ್ತೊಂದು ಗೋಧ್ರಾ ಹತ್ಯಾಕಾಂಡಕ್ಕೆ ಯತ್ನಿಸುತ್ತಿದ್ದೀರಾ? ಹತ್ಯಾಕಾಂಡ ನಡೆಸಲು ಇದು ಉತ್ತರಪ್ರದೇಶ ಅಥವಾ ಗುಜರಾತ್ ಅಲ್ಲ. ರಾಜ್ಯ ಸರ್ಕಾರ ಇಂತಹ ಸಂಘಟನೆಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಅದಕ್ಕಾಗಿ ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ್ದೇನೆ. ಅಷ್ಟರಲ್ಲಿ ಇಂತಹ ಸಂಘಟನೆಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ಮಾತನಾಡಲ್ಲ, ನನ್ನ ಆಕ್ಷನ್ ಮಾತನಾಡುತ್ತದೆ: ವಿಪಕ್ಷಗಳಿಗೆ ಬೊಮ್ಮಾಯಿ ತಿರುಗೇಟು

GODHRA

ಬಿಜೆಪಿ ಹಾಗೂ ಅಂಗಪಕ್ಷಗಳು ಇದೇ ರೀತಿ ರಾಜ್ಯದಲ್ಲಿ ಹಿಂದೂಗಳನ್ನು ಒಂದು ಮಾಡುತ್ತೇವೆ ಎಂದು ಹೋಗುತ್ತಿದ್ದರೆ, ಕರ್ನಾಟಕದ ಜನತೆಯಿಂದಲೇ ಕರ್ನಾಟಕದ ಹೆಬ್ಬಾಗಿಲು ಆಗಿರುವ ದಕ್ಷಿಣ ಕರ್ನಾಟಕ ಭಾಗ ಬಿಜೆಪಿ ಪಾಲಿಗೆ ಸಂಪೂರ್ಣ ಬಂದ್ ಆಗುತ್ತದೆ ಎಂದು ಹೇಳಿದ್ದಾರೆ.

ಕಲ್ಲಂಗಡಿ ಒಡೆದಿದ್ದಕ್ಕೆ ಕನಿಕರ ತೋರುವವರು ಸುಮ್ಮನಿದ್ದರು. ತಲೆ ಒಡೆದಾಗ ಕನಿಕರ ತೋರಲಿಲ್ಲವೆಂಬ ಸಿ.ಟಿ.ರವಿ ಹೇಳಿಕೆಗೆ ತಿರುಗೇಟು ನೀಡಿದ ಹೆಚ್‌ಡಿಕೆ, ನೀವು ತಲೆ ಒಡೆಯುವ ಕೆಲಸ ಮಾಡುತ್ತೀರಿ. ರಾಜ್ಯದ ಶಾಂತಿ ಸುವ್ಯವಸ್ಥೆ ಹಾಳುಮಾಡುತ್ತೀರಿ. ನಿಮ್ಮಂಥವರ ಪ್ರಚೋದನಕಾರಿ ಹೇಳಿಕೆಯಿಂದ ಹೀಗಾಗುತ್ತಿದೆ. ಇಷ್ಟು ಅರ್ಥಮಾಡಿಕೊಳ್ಳದಿದ್ದರೆ ಯಾವ ದೇಶ ಕಟ್ಟುತ್ತೀರಿ ನೀವು? ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಬೆಳಗಾವಿ ಬಿಜೆಪಿಯಲ್ಲಿನ ಭಿನ್ನಮತ ಶಮನಕ್ಕೆ ಮುಂದಾದ ಅರುಣ್ ಸಿಂಗ್, ಬಿಎಸ್‍ವೈ

HDK

94 ನದಿಗಳ ನೀರು ಸಂಗ್ರಹಿಸಿ ಪೂಜೆ
2023ರ ಚುನಾವಣಾ ಪೂರ್ವ ಸಿದ್ಧತೆ ಪ್ರಾರಂಭಿಸಲು ಕರ್ನಾಟಕ ರಾಜ್ಯದ 94 ನದಿಗಳು, ಉಪ ನದಿಗಳಿಂದ ನೀರು ಸಂಗ್ರಹಿಸಿ ಪೂಜೆ ಸಲ್ಲಿಸಲು ನಿರ್ಧರಿಸಲಾಗಿದೆ. ನಾಳೆ ಬೆಳಿಗ್ಗೆ 10:30ಕ್ಕೆ ರಾಮನಗರದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ಜರುಗಲಿದೆ. 15 ವಾಹನಗಳಲ್ಲಿ ಜನತಾ ಜಲಧಾರೆಯ ಕಳಶ ಸ್ಥಾಪಿಸಲಾಗಿದೆ. ರಾಮನಗರದಲ್ಲಿ ಪೂಜೆ ನೆರವೇರಿದ ನಂತರ ನದಿ ನೀರು ಸಂಗ್ರಹಿಸಲು ವಾಹನಗಳು ತೆರಳಲಿವೆ. ನಾಳೆ 15 ಕ್ಷೇತ್ರಗಳಲ್ಲಿ ನದಿ ನೀರು ಸಂಗ್ರಹಿಸುವ ಗುರಿ ಹೊಂದಿದ್ದು, ಉಳಿದಂತೆ 94, ನದಿ, ಉಪನದಿಗಳಲ್ಲಿ ನೀರು ಸಂಗ್ರಹಿಸಿ, ಏಪ್ರಿಲ್ 4ರಂದು ಬೆಂಗಳೂರು ತಲುಪಲಿವೆ. ದೂರದ ಸ್ಥಳಗಳಿಗೆ ತೆರಳಿದ ವಾಹನಗಳು ಏಪ್ರಿಲ್ 8ರಂದು ಬೆಂಗಳೂರು ಸೇರಲಿವೆ ಎಂದು ಹೇಳಿದರು. ಇದನ್ನೂ ಓದಿ: ಲವ್ ಜಿಹಾದ್ ಬದಲಿಗೆ `ಲವ್ ಕೇಸರಿ’ ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ ಕರೆ

SHRIRAMASENE

ರಾಜ್ಯದ ನೀರಾವರಿ ಯೋಜನೆ ಜಾರಿಗೆ ಬಿಜೆಪಿ ಪ್ರಯತ್ನಿಸಿಲ್ಲ. ನೀರಾವರಿ ಯೋಜನೆ ಜಾರಿಗೆ ಬಿಜೆಪಿ ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಧಾರ್ಮಿಕ ಅಂಶಗಳನ್ನು ಮುಂದಿಟ್ಟು ಜನರ ದಾರಿ ತಪ್ಪಿಸುತ್ತಿದೆ. ಮೇಕೆದಾಟು, ಮಹದಾಯಿ, ಕೃಷ್ಣಾ, ಭದ್ರಾ ಮೇಲ್ದಂಡೆ ಯೋಜನೆ, ನೀರಾವರಿ ಯೋಜನೆ ಪೂರ್ಣಗೊಳಿಸಲು 5 ಲಕ್ಷ ಕೋಟಿ ಬೇಕು. ಜೆಡಿಎಸ್‌ಗೆ ಪೂರ್ಣಪ್ರಮಾಣದ ಅಧಿಕಾರ ನೀಡಿದರೆ ಯೋಜನೆ ಜಾರಿ ಮಾಡುತ್ತೇವೆ. ರಾಜ್ಯದ ನೀರಾವರಿ ಯೋಜನೆ ಜಾರಿಮಾಡದಿದ್ದರೆ ಪಕ್ಷವನ್ನೇ ವಿಸರ್ಜನೆ ಮಾಡುತ್ತೇವೆ ಎಂದು ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ.

TAGGED:GodhragujaratHDKumaraswamyjdsuttar pradeshಉತ್ತರಪ್ರದೇಶಗುಜರಾತ್ಗೋಧ್ರಾಹತ್ಯಾಕಾಂಡಜೆಡಿಎಸ್ಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories

You Might Also Like

4 Year Old Tied Up Thrashed By Ex Armyman For Plucking Guava From His Garden
Crime

ತೋಟದಲ್ಲಿ ಹಣ್ಣು ಕಿತ್ತ 4 ವರ್ಷದ ಮಗುವಿನ ಕೈಕಾಲು ಕಟ್ಟಿ ಥಳಿಸಿದ ಮಾಜಿ ಸೈನಿಕ – ವಿಡಿಯೋ ವೈರಲ್‌

Public TV
By Public TV
16 minutes ago
BOMB THREAT
Crime

ದೆಹಲಿ ವಿವಿಯ ಎರಡು ಕಾಲೇಜುಗಳಿಗೆ ಬಾಂಬ್ ಬೆದರಿಕೆ

Public TV
By Public TV
20 minutes ago
Majid Khademi
Latest

ಅಮೆರಿಕ – ಇಸ್ರೇಲಿ ದಾಳಿಯಲ್ಲಿ ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

Public TV
By Public TV
35 minutes ago
Hubbali Love Jihda
Crime

6 ತಿಂಗಳ ಹಿಂದೆ ಮಾಡ್ಕೊಂಡಿದ್ದ ವೀಡಿಯೋ ಈಗ ವೈರಲ್ ಮಾಡುತ್ತಿದ್ದಾರೆ: ಹುಬ್ಬಳ್ಳಿ ಲವ್ ಜಿಹಾದ್ ಸಂತ್ರಸ್ತೆ

Public TV
By Public TV
55 minutes ago
Pema Khandu
Court

ಅರುಣಾಚಲ ಸಿಎಂ ಪೆಮಾ ಖಂಡು ಕುಟುಂಬದ ವಿರುದ್ಧ ಸಿಬಿಐ ತನಿಖೆಗೆ ಸುಪ್ರೀಂ ಆದೇಶ

Public TV
By Public TV
1 hour ago
chalavadi narayanaswamy 1
Davanagere

ಸಿದ್ದರಾಮಯ್ಯ ಮತ್ತೆ ಸಿಎಂ ಆಗಿ ದಾವಣಗೆರೆಗೆ ಬರಲ್ಲ: ಭವಿಷ್ಯ ನುಡಿದ ಛಲವಾದಿ ನಾರಾಯಣಸ್ವಾಮಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?