Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಹದ ಮೇಲೆ ತರಕಾರಿ ಬಿದ್ದಿತ್ತು, 1 ಗಂಟೆ ನಂತ್ರ ಜನ ಇರೋದು ಗೊತ್ತಾಯ್ತು- 9 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ರು: ಎಸ್‌ಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ದೇಹದ ಮೇಲೆ ತರಕಾರಿ ಬಿದ್ದಿತ್ತು, 1 ಗಂಟೆ ನಂತ್ರ ಜನ ಇರೋದು ಗೊತ್ತಾಯ್ತು- 9 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ರು: ಎಸ್‌ಪಿ

Crime

ದೇಹದ ಮೇಲೆ ತರಕಾರಿ ಬಿದ್ದಿತ್ತು, 1 ಗಂಟೆ ನಂತ್ರ ಜನ ಇರೋದು ಗೊತ್ತಾಯ್ತು- 9 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ರು: ಎಸ್‌ಪಿ

Public TV
Last updated: January 22, 2025 12:20 pm
Public TV
Share
2 Min Read
Karwar 1
SHARE

ಕಾರವಾರ: 28 ಜನ ಪ್ರಯಾಣಿಸುತ್ತಿದ್ದ ಲಾರಿಯಲ್ಲಿ ಹಣ್ಣು, ತರಕಾರಿ ತುಂಬಿತ್ತು. ಅಪಘಾತ ಸಂಭವಿಸಿದಾಗ ಹಣ್ಣು, ತರಕಾರಿ ದೇಹದ ಮೇಲೆ ಬಿದ್ದಿತ್ತು. 1 ಗಂಟೆ ಬಳಿಕ ಕ್ರೇನ್ ತಂದು ಲಾರಿ ಮೇಲೆತ್ತಿದಾಗ ಜನ ಇರೋದು ಗೊತ್ತಾಯ್ತು. ಅಷ್ಟರಲ್ಲಾಗಲೇ 9 ಮಂದಿ ಉಸಿರುಗಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದರು ಎಂದು ಉತ್ತರಕನ್ನಡ (Uttara Kannada) ಜಿಲ್ಲೆಯ ಎಸ್ಪಿ ನಾರಾಯಣ್‌ ಯಲ್ಲಾಪುರ ಅಪಘಾತದ (Yellapur Accident) ಕುರಿತು ಮಾಹಿತಿ ನೀಡಿದ್ದಾರೆ.

ಘಟನೆ ಬಳಿಕ ಯಲ್ಲಾಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಟ್ಟ ಮಂಜು ಇದ್ದ ಕಾರಣ ಅಪಘಾತ ಸಂಭವಿಸಿದೆ. ಮಂಜು ಮುಸುಕಿದ್ದರಿಂದ ಎದುರಿಗೆ ಬರುತಿದ್ದ ವಾಹನಕ್ಕೆ ಸೈಡ್ ಕೊಡಲು ಹೋಗಿ ವಿದ್ಯುತ್ ಕಂಬಕ್ಕೆ‌ ಡಿಕ್ಕಿ ಹೊಡೆದಿದೆ. ಇದರಿಂದ ಲಾರಿ ಪಲ್ಟಿಯಾಗಿದೆ. ವಾಹನದಲ್ಲಿ ಹಣ್ಣು, ತರಕಾರಿಗಳಿತ್ತು, 28 ಜನ ಪ್ರಯಾಣಿಸುತಿದ್ದರು. ಲಾರಿ ಪಲ್ಟಿಯಾದ ಕಾರಣ ಜನರ ಮೇಲೆ ತರಕಾರಿ ಬಿದ್ದು ಉಸಿರುಗಟ್ಟಿ 9 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಲಾರಿ ಅಪಘಾತವಾಗಿ 1 ಗಂಟೆ ನಂತರ ಮಾಹಿತಿ ದೊರೆತಿದೆ. ಅಲ್ಲಿಯವರೆಗೂ ಲಾರಿಯಲ್ಲಿ ಜನರಿರುವ ಬಗ್ಗೆ ಮಾಹಿತಿಯೇ ಇರಲಿಲ್ಲ. ಕ್ರೇನ್ ತಂದು ಲಾರಿ ಮೇಲೆತ್ತಿದಾಗ ಜನರಿರುವುದು ಗೊತ್ತಾಯ್ತು. ಆಗಲೇ 9 ಜನ ಸ್ಥಳದಲ್ಲೇ ಸಾವು ಕಂಡಿದ್ದರು. ತಕ್ಷಣ ಉಳಿದವರನ್ನ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಗಂಭೀರ ಗಾಯವಾದವರನ್ನ ಹುಬ್ಬಳ್ಳಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಒಟ್ಟು 10 ಜನ ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆಂದು ಎಸ್ಪಿ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿ ಚುನಾವಣೆ ದಿನದಂದೇ ಮಹಾ ಕುಂಭಮೇಳದಲ್ಲಿ ಮೋದಿ ಪುಣ್ಯಸ್ನಾನ

ಆಸ್ಪತ್ರೆಗೆ ಶಿವರಾಮ್‌ ಹೆಬ್ಬಾರ್‌ ಭೇಟಿ:
ಇನ್ನೂ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಗೆ ಸ್ಥಳೀಯ ಶಾಸಕ ಶಿವರಾಮ್‌ ಹೆಬ್ಬಾರ್‌ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಘಟನೆಯಲ್ಲಿ ಮೃತದೇಹಳನ್ನ ಆದಷ್ಟು ಶೀಘ್ರವೇ ಮೃತರ ಕುಟುಂಬಗಳಿಗೆ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಯಲ್ಲಾಪುರ ಅಪಘಾತ| ಸಾವಿನ ಸಂಖ್ಯೆ 10ಕ್ಕೆ ಏರಿಕೆ – ಮೃತರು ಯಾರು? ವಯಸ್ಸು ಎಷ್ಟು?

ಏನಿದು ಕೇಸ್‌?
ಹಣ್ಣು, ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 10 ಜನರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಭಾಗದಲ್ಲಿ ಬೆಳಗಿನ ಜಾವ ನಡೆದಿದೆ. ಹಾವೇರಿಯಿಂದ ಕುಮಟಾದ ಕಡೆ ಹಣ್ಣು-ತರಕಾರಿ ತುಂಬಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಭಾಗಕ್ಕೆ ಬರುತಿದ್ದಂತೆ ಚಾಲಕನ ನಿರ್ಲಕ್ಷ್ಯದಿಂದ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಸ್ಥಳದಲ್ಲೇ 9 ಜನರ ಸಾವಾಗಿದ್ದು 16 ಜನ ಗಂಭೀರ ಗಾಯಗೊಂಡಿದ್ದಾರೆ. ಬಳಿಕ ಮತ್ತೋರ್ವ ನಂತರ ಸಾವನ್ನಪ್ಪಿದ್ದಾರೆ.

ಫಯಾಜ್ ಜಮಖಂಡಿ (45), ವಾಸೀಂ ಮುಡಗೇರಿ (35), ಇಜಾಜ್ ಮುಲ್ಲಾ (20), ಸಾದೀಕ್ ಭಾಷ್ (30), ಗುಲಾಮ್ ಹುಸೇನ್ ಜವಳಿ (40), ಇಮ್ತಿಯಾಜ್ ಮುಳಕೇರಿ (36), ಅಲ್ಪಾಜ್ ಜಾಫರ್ ಮಂಡಕ್ಕಿ (25), ಜೀಲಾನಿ ಅಬ್ದುಲ್ ಜಖಾತಿ (25), ಅಸ್ಲಂ ಬಾಬುಲಿ ಬೆಣ್ಣಿ (24), ಜಲಾಲ್ ತಾರಾ (30) ಮೃತರು. ಇದನ್ನೂ ಓದಿ: ಟರ್ಕಿ ರೆಸಾರ್ಟ್‌ನಲ್ಲಿ ಅಗ್ನಿ ದುರಂತ – ಸಾವಿನ ಸಂಖ್ಯೆ 76ಕ್ಕೆ ಏರಿಕೆ

ಗಾಯಗೊಂಡವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಶವಗಳನ್ನು ಯಲ್ಲಾಪುರ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಗಾಯಗೊಂಡವರು ಹಾಗೂ ಮೃತರಾದವರು ಹಾವೇರಿಯ ಸವಣೂರು ಮೂಲದವರಾಗಿದ್ದು, ಕುಮಟಾದಲ್ಲಿ ನಡೆಯುವ ಸಂತೆಗೆ ಹಣ್ಣು, ತರಕಾರಿ ಒಯ್ಯುತಿದ್ದರು. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:karwarRoad Accidentuttar kannadaYellapur Policeಉತ್ತರ ಕನ್ನಡಕಾರವಾರಯಲ್ಲಾಪುರ ಪೊಲೀಸ್‌ರಸ್ತೆ ಅಪಘಾತ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
18 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
38 minutes ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
1 hour ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
1 hour ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?