ರಾಯಚೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಸರ್ಕಾರಿ ಶಾಲೆ ಮಕ್ಕಳೊಂದಿಗೆ ಬಿಸಿಯೂಟ ಸವಿದು ಮಕ್ಕಳೊಂದಿಗೆ ಶಾಲೆಯ ಬಗ್ಗೆ ಚರ್ಚೆ ಮಾಡುತ್ತಾ ತಮ್ಮ ಶಿಕ್ಷಣ ಪ್ರೇಮವನ್ನು ಮೆರೆದಿದ್ದಾರೆ.
ನಗರದ ತಾಲೂಕಿನ ಕೊರ್ವಿಹಾಳ ಗ್ರಾಮಕ್ಕೆ ಭೇಟಿ ನೀಡಿದ್ದ ಎಸ್ಪಿ ನಿಖಿಲ್ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಗ್ರಾಮಸ್ಥರೊಡನೆ ಚರ್ಚೆ ನಡೆಸಿ ಬಳಿಕ ಸರ್ಕಾರಿ ಶಾಲೆಗೆ ಭೇಟಿ ನೀಡಿ, ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದ್ದಾರೆ. ನಂತರ ಮಕ್ಕಳೊಡನೆ ಬಿಸಿ ಊಟ ಸವಿದಿದ್ದಾರೆ. ಎಸ್ಪಿ ನಿಖಿಲ್ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತವನ್ನು ಹೊಗಳಿದ ಇಮ್ರಾನ್ ಖಾನ್ಗೆ ಪಾಕ್ ಬಿಟ್ಟು ತೊರೆಯಿರಿ ಎಂದ ಷರೀಫ್ ಪುತ್ರಿ
ಈ ಹಿಂದೆ ಪ್ರೊಬೆಷನರಿ ಅಧಿಕಾರಿಯಾಗಿದ್ದಾಗಲೂ ಅವರು ಜಿಲ್ಲೆಯಲ್ಲಿ ಶಾಲೆಗಳಿಗೆ ಭೇಟಿ ನೀಡುತ್ತಿದ್ದರು. ಮಕ್ಕಳೊಂದಿಗೆ ಬಿಸಿಯೂಟ ಸವಿದು ಶಾಲೆಯ ಪರಸ್ಥಿತಿ ವಿಚಾರಣೆಗಳ ವಿಚಾರಣೆ ಮಾಡುತ್ತಿದ್ದರು. ಇದನ್ನೂ ಓದಿ: ಮುಸ್ಲಿಮರನ್ನ ಮದುವೆಯಾದ್ರೆ SSK ಸಮಾಜದಿಂದ ಬಹಿಷ್ಕರಿಸಿ: ನಾಗೇಶ್