ಬೆಂಗಳೂರು: ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ (Vijaya Raghavendra) ಅವರು ಧರ್ಮಪತ್ನಿ ಸ್ಪಂದನಾ (Spandana Vijay) ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K Shivakumar) ಸಂತಾಪ ಸೂಚಿಸಿದ್ದಾರೆ.
ಕನ್ನಡದ ಖ್ಯಾತ ನಟ ಶ್ರೀ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಶ್ರೀಮತಿ ಸ್ಪಂದನಾ ರಾಘವೇಂದ್ರ ಅವರು ಬ್ಯಾಂಕಾಕ್ ನಲ್ಲಿ ದಿಢೀರ್ ಸಾವಿಗೀಡಾಗಿರುವ ಸಂಗತಿ ತಿಳಿದು ಅಪಾರ ನೋವುಂಟಾಯಿತು. ಇತ್ತೀಚೆಗಷ್ಟೇ ಅವರು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗದವರು… pic.twitter.com/V75n6YPcGK
— DK Shivakumar (@DKShivakumar) August 7, 2023
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನಾ ರಾಘವೇಂದ್ರ ಅವರು ಬ್ಯಾಂಕಾಕ್ನಲ್ಲಿ ದಿಢೀರ್ ಸಾವಿಗೀಡಾಗಿರುವ ಸಂಗತಿ ತಿಳಿದು ಅಪಾರ ನೋವುಂಟಾಯಿತು ಎಂದು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಅವರು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗದವರು ಹಾಗೂ ಸ್ನೇಹಿತ ವರ್ಗಕ್ಕೆ ನನ್ನ ಸಾಂತ್ವನಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ನಿಧನ
ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ತನ್ನ ಕಾಲೇಜು ಸ್ನೇಹಿತರೊಂದಿಗೆ ಥಾಯ್ ಲ್ಯಾಂಡ್ಗೆ ಪ್ರವಾಸ ಹೋಗಿದ್ದರು. ಭಾನುವಾರ ಸಂಜೆ ಶಾಫಿಂಗ್ ಮುಗಿಸಿ ಹೋಟೇಲ್ ನತ್ತ ಹೋಗಬೇಕಾದರೆ ಸ್ಪಂದನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸ್ಪಂದನಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇತ್ತ ವಿಷಯ ತಿಳಿಯುತ್ತಿದ್ದಂತೆ ವಿಜಯ ರಾಘವೇಂದ್ರ ಬ್ಯಾಂಕಾಕ್ ಗೆ ಪ್ರಯಾಣ ಬೆಳೆಸಿದ್ದಾರೆ.
Web Stories