ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ (Spandana) ಮೃತದೇಹ ಕೆಲವೇ ಗಂಟೆಗಳಲ್ಲಿ ಬೆಂಗಳೂರಿಗೆ (Bangalore) ಬರಲಿದೆ. ಮೃತದೇಹ ಹೊತ್ತ ವಿಮಾನ ಈಗಾಗಲೇ ಬ್ಯಾಂಕಾಕ್ (Bangkok) ನಿಂದ ಹೊರಟಿದ್ದು, ರಾತ್ರಿ 11.30ರ ಹೊತ್ತಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅದು ಬಂದು ತಲುಪಲಿದೆ. ಈಗಾಗಲೇ ಸ್ಪಂದನಾ ಚಿಕ್ಕಪ್ಪ ಬಿ.ಕೆ.ಹರಿಪ್ರಸಾದ್, ಮಾವ ಚಿನ್ನೇಗೌಡ ಸೇರಿದಂತೆ ಹಲವರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಇತ್ತ ಸ್ಪಂದನಾ ಅವರ ಅಂತಿಮ ದರ್ಶನಕ್ಕೆ ಮಲ್ಲೇಶ್ವರಂ (Malleswaram) ಸ್ಪಂದನಾ ನಿವಾಸದ ಮುಂಭಾಗ ಸಿದ್ದತೆ ಮಾಡಿಕೊಳ್ಳಲಾಗಿದೆ. ಸ್ಪಂದನಾ ಸಹೋದರ ರಕ್ಷಿತ್ ಶಿವರಾಂ, ಮಾವ ಚಿನ್ನೇಗೌಡ ನೇತೃತ್ವದಲ್ಲಿ ಅಂತಿಮ ದರ್ಶನಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ವಿಜಯ ರಾಘವೇಂದ್ರ ಕುಟುಂಬ ಕೂಡ ಸ್ಪಂದನಾ ಅವರ ತವರು ಮನೆಗೆ ಆಗಮಿಸಿದೆ. ಇದನ್ನೂ ಓದಿ:ಸ್ಪಂದನಾ ನಿಧನ: ಮಲ್ಲೇಶ್ವರಂನಲ್ಲಿ ದರ್ಶನ, ಹರಿಶ್ಚಂದ್ರ ಘಾಟ್ ನಲ್ಲಿ ಅಂತಿಮ ಸಂಸ್ಕಾರ
ಸ್ಪಂದನಾ ಅವರ ತಂದೆಯ ಮನೆಗೆ ಬಹುತೇಕರು ಆಗಮಿಸುತ್ತಿದ್ದು, ಬಿ.ಕೆ ಶಿವರಾಂ ಮನೆಯಲ್ಲಿ ಕುಟುಂಬಸ್ಥರನ್ನ ಸಮಾಧಾನಿಸುವ ದೃಶ್ಯ ಎಂಥವರನ್ನೂ ಭಾವುಕರನ್ನಾಗಿಸುತ್ತಿದೆ. ಇತ್ತ ಸೊಸೆ ಸ್ಪಂದನಾ ನೆನೆದು ಮಾವ ಚಿನ್ನೇಗೌಡ ಕೂಡ ಭಾವುಕರಾಗಿದ್ದಾರೆ.
ಇಂದು ರಾತ್ರಿಯಿಂದ ನಾಳೆ ಮಧ್ಯಾಹ್ನ 1 ಗಂಟೆಯವರೆಗೂ ಸ್ಪಂದನಾ ಅವರ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಟ್ಟು, ನಂತರ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಅಂತಿಮ ಸಂಸ್ಕಾರ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈಡಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದೆ ಎಂದು ಹೇಳಲಾಗಿದೆ.
Web Stories