ಬೆಂಗಳೂರು: ಆಪರೇಷನ್ ಕಮಲ ಆಡಿಯೋ ವಿಚಾರವಾಗಿ ರಾಜೀನಾಮೆಗೆ ಮುಂದಾಗಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರ ಮನವೊಲಿಸುವಲ್ಲಿ ಮೈತ್ರಿ ಸರ್ಕಾರದ ನಾಯಕರು ಸುಸ್ತಾಗಿದ್ದಾರಂತೆ.
ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಜಿ.ಪರಮೇಶ್ವರ್ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರು ರಮೇಶ್ ಕುಮಾರ್ ಅವರನ್ನು ಭೇಟಿಯಾಗಿ ಮನವೊಲಿಸಲು ಯತ್ನಿಸಿದ್ದಾರೆ. ನೀವು ರಾಜೀನಾಮೆ ನೀಡಿದರೆ ತಪ್ಪಾಗುತ್ತದೆ. ಆಪರೇಷನ್ ಕಮಲ ಆಡಿಯೋ ಪ್ರಕರಣದ ಕುರಿತು ವಿಚಾರಣೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇದನ್ನು ಓದು: 50 ಕೋಟಿಯ ಕಸದ ಬುಟ್ಟಿ ತಲೆ ಮೇಲೆ ಇಟ್ಕೊಂಡು ಹೊರಗೆ ಹೋಗೋಕ್ಕಾಗಲ್ಲ- ಸ್ಪೀಕರ್ ಬೇಸರ
ಆಪರೇಷನ್ ಕಮಲದ ಆಡಿಯೋ ಪ್ರಕರಣದಲ್ಲಿ ನನ್ನ ಹೆಸರು ಪ್ರಸ್ತಾಪ ಮಾಡಿದ್ದು ಬೇಸರ ತಂದಿದೆ. ಅಷ್ಟೇ ಅಲ್ಲದೆ 50 ಕೋಟಿ ರೂ. ನೀಡುವ ವಿಚಾರವನ್ನು ಹೇಳಿದ್ದಾರೆ. ಈ ಎಲ್ಲ ಬೆಳವಣಿಗೆಯಿಂದ ಮನಸ್ಸು ಭಾರವಾಗಿದೆ. 15 ದಿನ ನನ್ನನ್ನ ನನ್ನ ಪಾಡಿಗೆ ಬಿಟ್ಟುಬಿಡಿ. ಒಂದಿಷ್ಟು ಕಾಲ ವಿಶ್ರಾಂತಿ ಪಡೆಯುತ್ತೇನೆ. ಉಪಸಭಾಧ್ಯಕ್ಷರು ಸದನ ನಡೆಸಲಿ ಎಂದು ರಮೇಶ್ ಕುಮಾರ್ ಅವರು ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಇದನ್ನು ಓದು:
ರಮೇಶ್ ಕುಮಾರ್ ಅವರು ಇಂದು ವಿಧಾನಸಭಾ ಅಧಿವೇಶನದ ಆರಂಭದಲ್ಲೇ ಆಪರೇಷನ್ ಕಮಲದ ಆಡಿಯೋ ವಿಚಾರವಾಗಿ ಅಸಮಾಧಾನ ಹೊರಹಾಕಿದ್ದರು. ಅಷ್ಟೇ ಅಲ್ಲದೆ ಸ್ಪೀಕರ್ ಸ್ಥಾನದ ಮೌಲ್ಯವನ್ನು ಶಾಸಕರಿಗೆ ತಿಳಿಸಿಕೊಡುವ ಪ್ರಯತ್ನ ಮಾಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv