ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕಾರ ಮಾಡಲು ವಿಳಂಬ ನೀತಿ ಮಾಡುತ್ತಿದ್ದಾರೆ ಎಂಬ ಸ್ಪೀಕರ್ ಮೇಲಿನ ಆರೋಪಕ್ಕೆ ರಮೇಶ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಗಾಂಧೀಜಿ ಅವರನ್ನೇ ಗುಂಡಿಕ್ಕಿ ಕೊಲ್ಲಲಿಲ್ಲವೇ. ಹಾಗೆಯೇ ನನ್ನ ಬಗ್ಗೆ ಏನೂ ಬಿಡಿ ಎಂದು ಹೇಳಿದ್ದಾರೆ.
ಸ್ಪೀಕರ್ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಸಂವಿಧಾನವಷ್ಟೇ ಮುಖ್ಯ. ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಎಲ್ಲಿಂದ ಒತ್ತಡ ಬಂದರೂ ಮಣಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶದ ಬಗ್ಗೆ ಪ್ರತಿಕ್ರಿಯೆ ನೀಡಿ, ದೇಶದ ಉಳಿವಿಗಾಗಿ ನ್ಯಾಯಾಂಗ ಮತ್ತು ಶಾಸಕಾಂಗ ಕಾರ್ಯ ನಿರ್ವಹಿಸುತ್ತಿದೆ. ನಿಯಮಗಳ ಅನ್ವಯವೇ ನಾನು ಕೂಡ ನ್ಯಾಯಾಲಯಕ್ಕೆ ಪ್ರತಿಕ್ರಿಯೆ ನೀಡಿದ್ದೇನೆ ಎಂದರು.
ಇದೇ ವೇಳೆ ವಿರೋಧ ಪಕ್ಷಗಳು ಸ್ಪೀಕರ್ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಗಾಂಧಿಜೀ ಅವರನ್ನು ಉದಾಹರಣೆ ಕೊಟ್ಟರು. ಗಾಂಧೀಜಿ ಅವರನ್ನೇ ಗುಂಡಿಕ್ಕಿ ಕೊಲ್ಲಲಿಲ್ಲವೇ? ಹಾಗೆಯೇ ನನ್ನ ಬಗ್ಗೆ ಏನೂ ಬಿಡಿಯೆಂದು ಮಾರ್ಮಿಕವಾಗಿ ಅಸಮಾಧಾನ ವ್ಯಕ್ತಪಡಿಸಿದರು.