Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

Naga Panchami 2023: ಬಾಯಲ್ಲಿ ನೀರೂರಿಸುವ ಅಳ್ಳಿಟ್ಟು, ಅರಿಶಿನ ಎಲೆ ಕಡುಬು ಮಾಡಿ ನೋಡಿ

Public TV
Last updated: August 20, 2023 9:00 am
Public TV
Share
4 Min Read
Naga 1
SHARE

ನಮ್ಮಲ್ಲಿ ಸರ್ಪಗಳು ಧಾರ್ಮಿಕ ನಂಬಿಕೆಗೆ ಹೆಸರುವಾಸಿ ಮತ್ತು ಅವುಗಳನ್ನು ವಿವಿಧ ದಿನಾಂಕಗಳು ಮತ್ತು ಹಬ್ಬಗಳಲ್ಲಿ ಪೂಜಿಸಲಾಗುತ್ತದೆ. ಪ್ರತಿ ವರ್ಷ ನಾಗರ ಪಂಚಮಿಯಂದು (Naga Panchami) ಹಾವಿಗೆ ಪೂಜೆ ಸಲ್ಲಿಸುವ ವೇಳೆ ಹಾಲೆರೆಯಲಾಗುತ್ತದೆ. ಇದರಿಂದ ನಾಗ ದೇವತೆಯ ಕೃಪೆಯು ನಮ್ಮೆಲ್ಲರ ಮೇಲೆ ಉಳಿಯುತ್ತದೆ ಮತ್ತು ನಮ್ಮ ಕುಟುಂಬವನ್ನು ಹಾವು ಕಡಿತದಿಂದ ರಕ್ಷಿಸಬಹುದು ಎಂಬ ನಂಬಿಕೆ. ಹಾಗೆಯೇ ನಾಗರಪಂಚಮಿ ಹಬ್ಬಕ್ಕೆ ವಿಶೇಷ ತಿನಿಸುಗಳನ್ನ (Special Food) ಮಾಡಿ ಮನೆಮಂದಿಗೆಲ್ಲಾ ನೀಡಿ ನಾಗರ ಪಂಚಮಿಗೊಂದು ಅರ್ಥಕೊಡುತ್ತಾರೆ. ಹಾಗಾದ್ರೆ ಏನೇನು ವಿಶೇಷ ತಿನಿಸುಗಳನ್ನ ಮಾಡುತ್ತಾರೆ ಅನ್ನೋದನ್ನೊಮ್ಮೆ ನೋಡೋಣ…

ಅಳ್ಳಿಟ್ಟು
ನಾಗರಪಂಚಮಿ ಹಬ್ಬಕ್ಕೆ ಅಳ್ಳಿಟ್ಟು ಬಹಳ ಫೇಮಸ್‌. ಅದರಲ್ಲೂ ಉತ್ತರ ಕರ್ನಾಟಕದ ಮಂದಿಗೆ ಅಳ್ಳಿಟ್ಟು ಇಲ್ಲದ ನಾಗರಪಂಚಮಿಯನ್ನ ಊಹಿಸೋದೂ ಸಾಧ್ಯವಿಲ್ಲ.

Kadubu 3

ಬೇಕಾಗುವ ಸಾಮಗ್ರಿಗಳು
ಜೋಳದ ಅರಳು – 1 ಕಪ್‌, ಗೋದಿ ಹಿಟ್ಟು – 1 ಕಪ್‌, ಬೆಲ್ಲದ ಪುಡಿ – 1 ಕಪ್‌, ತುಪ್ಪ – 2 ರಿಂದ 3 ಚಮಚ, ಅಕ್ಕಿ – 1 ಚಮಚ, ಗಸಗಸೆ – 1/4 ಸ್ಪೂನ್‌, ಏಲಕ್ಕಿ, ಲವಂಗ, ಚಿಟಿಕೆ ಜಾಯಿಕಾಯಿ ಪುಡಿ, ನೀರು 2 ಕಪ್‌.

ಮಾಡುವ ವಿಧಾನ
ಮೊದಲು ಒಂದು ಚಮಚದಷ್ಟು ಅಕ್ಕಿಯನ್ನ ಹುರಿಯಿರಿ. ಹದವಾಗಿ ಹುರಿದ ಬಳಿಕ ತೆಗೆದು ಪಕ್ಕಕ್ಕಿಡಿ. ಅದು ತಣ್ಣಗಾಗಲಿ. ಈಗ ಜೋಳದ ಅರಳು, ಹುರಿದಿಟ್ಟ ಅಕ್ಕಿ ಸೇರಿಸಿ ಮಿಕ್ಸರ್‌ನಲ್ಲಿ ಪುಡಿ ಮಾಡಿ ಇಟ್ಟುಕೊಳ್ಳಿ. ಇದಕ್ಕೆ ಮತ್ತೆ ಗೋಧಿ ಹಿಟ್ಟು, ತುಪ್ಪ ಸೇರಿಸಿ ಚೆನ್ನಾಗಿ ಹುರಿಯಿರಿ. ಚೆನ್ನಾಗಿ ಘಮಲು ಬರುತ್ತೆ. ಈಗ ಸ್ವಲ್ಪ ನೀರು ಕಾಯಿಸಿ, ಆ ನೀರಿಗೆ ಬೆಲ್ಲದ ಪುಡಿ ಹಾಕಿ ಬೆಲ್ಲ ಕರಗಿಸಿ. ಹುರಿದ ಅರಳು ಮತ್ತು ಅಕ್ಕಿ ಹಿಟ್ಟಿನ ಮಿಶ್ರಣ ಹಾಕಿ ಚೆನ್ನಾಗಿ ತಿರುವಿ.

Kadubu 2

ಸ್ವಲ್ಪ ಗಟ್ಟಿಯಾಗುತ್ತಾ ಬಂದ ಹಾಗೆ ಇದು ತಳಬಿಟ್ಟು ಮೇಲಕ್ಕೆ ಏಳತೊಡಗುತ್ತದೆ. ಆಗ ಸ್ಟೌ ಆಫ್‌ ಮಾಡಿ. ಇನ್ನೊಂದು ಕಡೆ ಏಲಕ್ಕಿ, ಲವಂಗ ಮತ್ತು ಗಸಗಸೆ, ಜಾಯಿಕಾಯಿ ಎಲ್ಲ ಸೇರಿಸಿ ಪುಡಿ ಮಾಡಿ ಹಾಕಿ. ಇದನ್ನ ರೆಡಿ ಆಗಿರುವ ಹಿಟ್ಟಿಗೆ ಸೇರಿಸಿ, ಇನ್ನೊಮ್ಮೆ ಬೆರೆಸಿ. ಈಗ ಕೈಗೆ ತುಪ್ಪ ಹಚ್ಚಿ ಬಟ್ಟಲಿನ ಆಕಾರ ಕೊಟ್ಟು ಅಳ್ಳಿಟ್ಟು ಮಾಡಿ. ತಿನ್ನಲು ಬಹಳ ರುಚಿ. ನಾಗರ ಪಂಚಮಿ ಹಬ್ಬದ ದಿನ ಅಳ್ಳಿಟ್ಟು ಸೇವೆ ಬಹಳ ವಿಶೇಷ. ಈ ಅಳ್ಳಿಟ್ಟು ಬಿಸಿ ಬಿಸಿ ತಿನ್ನೋದಕ್ಕೆ ಬಹಳ ರುಚಿ.

ಅರಿಶಿನ ಎಲೆ ಕಡುಬು
ಇದು ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಬಹಳ ಜನಪ್ರಿಯವಾದ ಅಡುಗೆ. ಅದರಲ್ಲೂ ನಾಗರಪಂಚಮಿ ಹಬ್ಬದಂದು ವಿಶೇಷವಾಗಿ ಈ ಖಾದ್ಯಗಳನ್ನ ಮಾಡೇ ಮಾಡುತ್ತಾರೆ. ಅರಶಿನದ ಘಮದೊಂದಿಗೆ ಬಾಯಿಗೆ ಸಖತ್‌ ರುಚಿ ಅನಿಸೋ ಈ ತಿಂಡಿಯನ್ನು ಬೆಳಗಿನ ಉಪಹಾರಕ್ಕೆ, ಸಂಜೆಯ ತಿಂಡಿಗೆ, ಕೆಲವೊಮ್ಮೆ ರಾತ್ರಿಯ ಊಟದ ಬದಲಿಗೆ ಬಳಸೋದೂ ಇದೆ. ಅರಿಶಿನ ಎಲೆಯ ಸತ್ವವನ್ನು ಹೀರಿಕೊಂಡು ತಯಾರಾಗುವ ಈ ಕಡುಬು ಆರೋಗ್ಯಕ್ಕೂ ಬಹಳ ಒಳ್ಳೆಯದು. ತಯಾರಿಕೆ ಸ್ವಲ್ಪ ಹೆಚ್ಚು ಹೊತ್ತು ತೆಗೆದುಕೊಂಡರೂ, ಆರೋಗ್ಯಕರವಾದ ಸಾಂಪ್ರದಾಯಿಕ ಅಡುಗೆಯೊಂದನ್ನು ಮಾಡಿ ತಿನ್ನುವ ಮಜವೇ ಬೇರೆ.

Kadubu

ಮಾಡುವ ವಿಧಾನ
ಕಪ್ ಅಕ್ಕಿ ಹಿಟ್ಟು, 1.5 – 2 ಕಪ್ ನೀರು (ಅಕ್ಕಿ ಹಿಟ್ಟಿನ ಗುಣಮಟ್ಟವನ್ನು ಅವಲಂಬಿಸಿರುತ್ತದೆ), 1 ಕಪ್ ತುರಿದ ತೆಂಗಿನಕಾಯಿ, 1/2 ಕಪ್ ಪುಡಿ ಮಾಡಿದ ಬೆಲ್ಲ, 2 ಚಮಚ ತುಪ್ಪ, ಒಂದು ದೊಡ್ಡ ಚಿಟಿಕೆ ಏಲಕ್ಕಿ, 1 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿಗೆ ತಕ್ಕಂತೆ), 12 ಅರಿಶಿನ ಎಲೆಗಳು.

ಮಾಡುವ ವಿಧಾನ
ಎಲೆ ಕಡುಬು ಮಾಡಲು ಮೊದಲು ಅಕ್ಕಿ ನೆನೆಸಬೇಕು. ಹಿಂದಿನ ದಿನ ರಾತ್ರಿಯೇ ಅಕ್ಕಿ ನೆನೆಹಾಕಿದರೆ ಒಳ್ಳೆಯದು. ದೋಸೆ ಅಕ್ಕಿಯಾದರೆ ಮೂರು ಗಂಟೆ ನೆನೆದರೂ ಸಾಕು. ಆದರೆ ಮಂಗಳೂರು ರೈಸ್‌ನಲ್ಲಿ ಈ ತಿಂಡಿ ತಯಾರಿಸೋದಾದರೆ ಹಿಂದಿನ ರಾತ್ರಿ ನೆನೆಸಿಡೋದು ಕಡ್ಡಾಯ. ನೆನೆಸಿಟ್ಟ ಅಕ್ಕಿಯನ್ನು ಗಟ್ಟಿಯಾಗಿ ರುಬ್ಬಿಕೊಳ್ಳಬೇಕು. ಕೊನೆಯಲ್ಲಿ ಉಪ್ಪು ಹಾಕಿ ಮತ್ತೊಮ್ಮೆ ರುಬ್ಬಿ. ಇದಕ್ಕೆ ಹೆಚ್ಚು ನೀರು ಹಾಕಬಾರದು. ಆದರೆ ನುಣ್ಣಗೆ ರುಬ್ಬಬೇಕು. ಈಗ ಬೌಲ್‌ನಲ್ಲಿ ತೆಗೆದಿಟ್ಟ ಬೆಲ್ಲವನ್ನು ಹಾಕಿ. ಬೆಲ್ಲದ ಪುಡಿ ಇದ್ದರೆ ಒಳ್ಳೆಯದು. ಇಲ್ಲವಾದರೆ ಬೆಲ್ಲ ತುರಿದು ಹಾಕಿದರೂ ನಡೆಯುತ್ತೆ. ಹೀಗೆ ತುರಿದ ಬೆಲ್ಲಕ್ಕೆ ಅದಕ್ಕೆ 1 ಕಪ್ ಕಾಯಿತುರಿ ಸೇರಿಸಿ ಮಿಕ್ಸ್ ಮಾಡಬೇಕು.

Kadubu 4

ಈ ಮಿಶ್ರಣಕ್ಕೆ ಹುರಿದ ಕಪ್ಪು ಎಳ್ಳು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಂಡ ನಂತರ ಅರಶಿನ ಎಲೆ ತೆಗೆದುಕೊಂಡು ಅದಕ್ಕೆ ಅಕ್ಕಿ ಹಿಟ್ಟನ್ನು ಸವರಿ, ತೆಳ್ಳಗೆ ಹಾಕಬೇಕು. ಇದರ ಮೇಲೆ ಬೆಲ್ಲ, ಕಾಯಿತುರಿಯ ಮಿಶ್ರಣ ಹಾಕಿ ಎಲೆಯನ್ನ ಮಡಚಿ. ನಂತರ ಇದನ್ನು ಇಡ್ಲಿ ಪಾತ್ರೆಯಲ್ಲಿಟ್ಟು 10-15 ನಿಮಿಷ ಕಾಲ ಹಬೆಯಲ್ಲಿ ಬೇಯಿಸಿದರೆ ಬಾಯಲ್ಲಿ ನೀರೂರುವ ರುಚಿಯಾದ ಅರಶಿನ ಎಲೆ ಕಡುಬು ರೆಡಿ. ಅಷ್ಟೇ ಅಲ್ಲದೇ ತಂಬಿಟ್ಟು ಉಂಡೆ, ರವೆ ಉಂಡೆ ಇನ್ನಿತರ ತಿನಿಸುಗಳನ್ನ ಮಾಡುವುದು ನಾಗರ ಪಂಚಮಿಯ ವಿಶೇಷ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:Fast FoodFood RecipesNaga PanchamiNaga Panchami Special Foodನಾಗರ ಪಂಚಮಿನಾಗರಪಂಚಮಿವಿಶೇಷ ಖಾದ್ಯ
Share This Article
Facebook Whatsapp Whatsapp Telegram

Cinema Updates

radhika pandit
Mother’s Day 2025: ಅಮ್ಮನ ಬಗ್ಗೆ ಹೃದಯಸ್ಪರ್ಶಿ ಪೋಸ್ಟ್ ಹಂಚಿಕೊಂಡ ರಾಧಿಕಾ ಪಂಡಿತ್
1 minute ago
aishwarya rajesh
‘ಯುದ್ಧ ಬೇಡ’ ಎಂದು ಮನವಿ ಮಾಡಿದ ಐಶ್ವರ್ಯಾ ರಾಜೇಶ್- ನೆಟ್ಟಿಗರಿಂದ ತರಾಟೆ
17 minutes ago
sreeleela
ಜಾನ್ವಿ ಕಪೂರ್‌ಗೆ ಗೇಟ್ ಪಾಸ್ – ಶ್ರೀಲೀಲಾಗೆ ಬಿಗ್ ಚಾನ್ಸ್
2 hours ago
Rima Kallingal Padmapriya
ಮೂವತ್ತೇ ಸೆಕೆಂಡುಗಳಲ್ಲಿ ಕಲಾ ಲೋಕ ಸೃಷ್ಟಿಸಿದ ನಟಿ ರಿಮಾ ಕಲ್ಲಿಂಗಲ್, ಪದ್ಮಪ್ರಿಯಾ!
3 hours ago

You Might Also Like

Yogi Adityanath 1
Latest

300 ಕೋಟಿ ವೆಚ್ಚದ ʻಬ್ರಹ್ಮೋಸ್ʼ ಕ್ಷಿಪಣಿ ಉತ್ಪಾದನಾ ಘಟಕ ಉದ್ಘಾಟನೆ; ವಾರ್ಷಿಕ 100 ಮಿಸೈಲ್‌ ಉತ್ಪಾದನೆ ಗುರಿ

Public TV
By Public TV
11 minutes ago
Basavaraj Horatti
Belgaum

ಯಾರದ್ದೋ ಮಾತು ಕೇಳಿ ಪಾಕ್ ವಿರುದ್ಧ ಸಂಘರ್ಷ ನಿಲ್ಲಿಸಬಾರದಿತ್ತು: ಹೊರಟ್ಟಿ ಅಸಮಾಧಾನ

Public TV
By Public TV
25 minutes ago
Hafiz Saeed Mosque 1
Latest

ಆಪರೇಷನ್ ಸಿಂಧೂರ | ಲಷ್ಕರ್ ಮುಖ್ಯಸ್ಥ ಸೇರಿ 140 ಉಗ್ರರು ಉಡೀಸ್

Public TV
By Public TV
28 minutes ago
Ramanagara Car Accident
Crime

Ramanagara | ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಓರ್ವ ಸ್ಥಳದಲ್ಲೇ ಸಾವು

Public TV
By Public TV
1 hour ago
Bidar Army Basava Kiran Biradar
Bidar

ತಂಗಿ ಮದುವೆಗೆ ಬಂದಿದ್ದ ಅಣ್ಣನಿಗೆ ಸೇನೆಯಿಂದ ತುರ್ತು ಕರೆ – ಕರ್ತವ್ಯಕ್ಕೆ ಮರಳಿದ ಯೋಧ

Public TV
By Public TV
2 hours ago
White and Yellow India Travel Vlog YouTube Thumbnail
Latest

ಆಪರೇಷನ್‌ ಸಿಂಧೂರ ಮುಂದುವರಿಯುತ್ತದೆ – ಭಾರತೀಯ ವಾಯುಸೇನೆ ಅಧಿಕೃತ ಘೋಷಣೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?