ಮಹದಾಯಿ ಹೋರಾಟಗಾರರಿಂದ ಮೋದಿ ಫೋಟೋಗೆ ವಿಶೇಷ ಪೂಜೆ

Public TV
1 Min Read
MODI PHOTO

ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ಹಿನ್ನೆಲೆಯಲ್ಲಿ ಇಂದು ಪ್ರಧಾನಿಯವರು ಬೆಂಗಳೂರಿನ ಅರಮನೆ ಮೈದಾನಕ್ಕೆ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಮಹದಾಯಿ ಹೋರಾಟಗಾರರು ಮೋದಿ ವಿರುದ್ಧ ಪ್ರತಿಭಟನೆ ಡನೆಸುತ್ತಿದ್ದಾರೆ.

ಮಹದಾಯಿ ವಿಚಾರದಲ್ಲಿ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಹೋರಾಟ ನಡೆಸುತ್ತಿದ್ದಾರೆ. ಅಲ್ಲದೇ ಇದೇ ವೇಳೆ ಫ್ರೀಡಂಪಾರ್ಕ್ ನಲ್ಲಿ ಮೋದಿ ಭಾವಚಿತ್ರ ಕ್ಕೆ ಹೂವು ಹಾಕಿದ್ದಾರೆ. `ಮೋದಿ ಜಿ ಗೆಟ್ ವೆಲ್ ಸೂನ್ ಫಾರ್ ಮಹದಾಯಿ’ ಅಂತಾ ಭಾವಚಿತ್ರ ದ ಮೇಲೆ ಬರೆದಿದ್ದಾರೆ.

MODI FARMER 2

ಸಮಾವೇಶದಲ್ಲಿ ಮಾತನಾಡುವ ಪ್ರಧಾನಿ ಅವರು ಮಹದಾಯಿ ವಿಚಾರವನ್ನು ಪ್ರಸ್ತಾಪ ಮಾಡಬೇಕೆಂದು ಕನ್ನಡ ಪರ ಸಂಘಟನೆಗಳು ಒತ್ತಾಯ ಮಾಡಿದ್ದವು. ಆದರೆ ಸಮಾವೇಶದಲ್ಲಿ ಚುನಾವಣಾ ಭಾಷಣ ಮಾತ್ರ ಮೋದಿ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಭಾಷಣದ ವೇಳೆ ಕೇಂದ್ರದಿಂದ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುತ್ತಾರಾ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

MODI FARMER 1

ಕೇಂದ್ರ ಬಜೆಟ್ ಬಳಿಕ ಮೊದಲ ಸಾರ್ವಜನಿಕ ಭಾಷಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮ ಹೆಚ್ಚಿನ ಮಹತ್ವ ಪಡೆದುಕೊಂಡಿದ್ದು, ವಿದೇಶಗಳಲ್ಲಿರುವ ಎನ್‍ಆರ್‍ಐಗಳಿಗೆ ಮೋದಿ ಭಾಷಣ ತಲುಪಿಸಲು ಬಿಜೆಪಿ ವ್ಯವಸ್ಥೆ ಮಾಡಿಕೊಂಡಿದೆ. ಬಿಜೆಪಿ ಕರ್ನಾಟಕ, ಬಿಜೆಪಿ ಇಂಡಿಯಾ, ಬಿಜೆಪಿ ಟ್ವಿಟ್ಟರ್ ಸಾಮಾಜಿಕ ಜಾಲತಾಣಗಳ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಭಾಷಣ ಪ್ರಸಾರ ಮಾಡಲು ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಇಷ್ಟೇ ಅಲ್ಲದೆ 200 ಸೋಶಿಯಲ್ ಮೀಡಿಯಾ ಕಾರ್ಯಕರ್ತರಿಂದ ಫೇಸ್ ಬುಕ್ ಮೂಲಕ ಲೈವ್ ನೀಡಲು ತೀರ್ಮಾನ ತೆಗೆದುಕೊಂಡಿದ್ದು, ಮೋದಿ ಭಾಷಣ ಲೈವ್ ಪ್ರಸಾರ ಮಾಡಲೆಂದೇ ಆಯ್ದ ಕಾರ್ಯಕರ್ತರಿಗೆ ಸೂಕ್ತ ತರಬೇತಿ ನೀಡಲಾಗಿದೆ.

MODI FARMER 4

MODI FARMER 5

Share This Article
Leave a Comment

Leave a Reply

Your email address will not be published. Required fields are marked *