ಬೆಂಗಳೂರು: ಆಗಸ್ಟ್ 20 ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025 (Special Revision Of Voters’ List) ಆರಂಭವಾಗಲಿದೆ ಚುನಾವಣಾ ಆಯೋಗ (Election Commission) ತಿಳಿಸಿದೆ.
ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳಂತೆ 18 ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ವಿಶೇಷ ಅಭಿಯಾನ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಸಾರ್ವಜನಿಕರು ವಿಶೇಷ ಅಭಿಯಾನಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಹಾಗೂ ಅವಶ್ಯವಿರುವ ತಿದ್ದುಪಡಿ, ಸೇರ್ಪಡೆ ಹಾಗೂ ತೆಗೆದುಹಾಕುವಿಕೆಗಳಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಮುಖ್ಯ ಚುನಾವಣಾಧಿಕಾರಿಗಳು ಮತದಾರರಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಹಗರಣದ ವಿರುದ್ಧ ಸರಿಯಾದ ಹೋರಾಟ ನಡೆದರೆ ಸಿಎಂ ಕುರ್ಚಿ ಅಲ್ಲಾಡುತ್ತೆ: ಪ್ರತಾಪ್ ಸಿಂಹ
- Advertisement
- Advertisement
ಸಾರ್ವಜನಿಕರು ಅರ್ಜಿ ನಮೂನೆ 6 ಮತ್ತು8 ಗಳನ್ನು ಸಲ್ಲಿಸುವಾಗ ಸ್ವಯಂಪ್ರೇರಿತವಾಗಿ ಆಧಾರ್ ಸಂಖ್ಯೆಗಳನ್ನು ಒದಗಿಸಬಹುದಾಗಿದೆ. ಇದನ್ನೂ ಓದಿ: ನಾನು ಭ್ರಷ್ಟಾಚಾರ ಎಸಗಿಲ್ಲ – ಮಾರಿಗುಡಿಯಲ್ಲಿ ಹರೀಶ್ ಪೂಂಜಾ ಪ್ರಮಾಣ
ಎಲ್ಲಾ ರೀತಿಯ ಚುನಾವಣಾ ಸಂಬಂಧಿತ ಸೇವೆಗಳಿಗಾಗಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ Voter Helpline application ಮೂಲಕ ನೇರವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆಗಸ್ಟ್ 20 ರಿಂದ ಅಕ್ಟೋಬರ್ 18ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆ ಭೇಟಿ ಮತ್ತು ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ/ಮರು ಹೊಂದಾಣಿಕೆ ಸೇರಿದಂತೆ ಮತದಾರರ ಪಟ್ಟಿ/ಮತದಾರರ ಗುರುತಿನ ಚೀಟಿಗಳಲ್ಲಿನ ಲೋಪದೋಷಗಳನ್ನು ತೆಗೆದುಹಾಕುವುದು. ಅಗತ್ಯವಿರುವ ಕಡೆ ಮತದಾರರ ಪಟ್ಟಿಯಲ್ಲಿನ ಗುಣಮಟ್ಟವಿಲ್ಲದ ಭಾವಚಿತ್ರಗಳನ್ನು ಬದಲಾಯಿಸಿ ಉತ್ತಮ ಗುಣಮಟ್ಟದ ಭಾವಚಿತ್ರಗಳನ್ನು ಖಾತ್ರಿಪಡಿಸುವುದು. ವಿಭಾಗ/ಭಾಗಗಳ ಮರುಹೊಂದಾಣಿಕೆ ಹಾಗೂ ಪ್ರಸ್ತಾಪಿತ ವಿಭಾಗ/ಭಾಗಗಳ ಮತಗಟ್ಟೆಗಳ ಸ್ಥಳವನ್ನು ಅಂತಿಮಗೊಳಿಸುವಿಕೆ ಮತ್ತು ಮತಗಟ್ಟೆಗಳ ಪಟ್ಟಿಗಳಿಗೆ ಅನುಮೋದನೆ ಪಡೆದುಕೊಳ್ಳಲಾಗುತ್ತದೆ.
ಅಕ್ಟೋಬರ್ 19 ರಿಂದ ಅಕ್ಟೋಬರ್ 28 ವರೆಗೆ ನಮೂನೆ 1 ರಿಂದ 8 ರ ತಯಾರಿ ನಡೆದು ಅ.29 ರಂದು ಸಮಗ್ರ ಕರಡು ಮತದಾರರ ಪಟ್ಟಿಯ ಪ್ರಕಟಿಸಲಾಗುತ್ತದೆ. ಸಾರ್ವಜನಿಕರು ತಮ್ಮ ಲೋಪದೋಷಗಳ ಕುರಿತಾಗಿ ಅ.29 ರಿಂದ ನವೆಂಬರ್ 28 ರವರೆಗೆ ಆಕ್ಷೇಪಣೆ ಸಲ್ಲಿಸಬಹುದು. ಆಕ್ಷೇಪಣೆಗಳ ವಿಲೇವಾರಿಯನ್ನು ಡಿ.24ರ ಒಳಗಡೆ ಮುಗಿಸಲಾಗುತ್ತದೆ. ಅಂತಿಮವಾಗಿ ಎಲ್ಲಾ ದತ್ತಾಂಶವನ್ನು ಕ್ರೋಢಿಕರಿಸಿ 2025ರ ಜನವರಿ 6 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಣೆ ಮಾಡಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.