Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 100 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಸಮುಚ್ಚಯ ನಿರ್ಮಾಣ: ಪ್ರಹ್ಲಾದ್ ಜೋಶಿ ಭರವಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | 100 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಸಮುಚ್ಚಯ ನಿರ್ಮಾಣ: ಪ್ರಹ್ಲಾದ್ ಜೋಶಿ ಭರವಸೆ

Dharwad

100 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಸಮುಚ್ಚಯ ನಿರ್ಮಾಣ: ಪ್ರಹ್ಲಾದ್ ಜೋಶಿ ಭರವಸೆ

Public TV
Last updated: January 6, 2020 12:15 am
Public TV
Share
3 Min Read
hbl joshi
SHARE

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆ ಅಡಿ ಹುಬ್ಬಳ್ಳಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಸಮುಚ್ಚಯ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಭರವಸೆ ನೀಡಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆಯ ಅನುದಾನದಲ್ಲಿ ಮಹಾನಗರ ಪಾಲಿಕೆಯ ಈಜುಗೊಳ, ಸ್ಮಾರ್ಟ್ ಹೆಲ್ತ್, ಸ್ಮಾರ್ಟ್ ಸ್ಕೂಲ್‍ಗಳ ಉದ್ಘಾಟನೆ ಹಾಗೂ ನೂತನ ಯೋಜನೆಗಳಾದ ಬೆಂಗೇರಿ ಮತ್ತು ಉಣಕಲ್ ಮಾರುಕಟ್ಟೆ ನಿರ್ಮಾಣ, ಬಹುವಾಹನ ನಿಲುಗಡೆ, ಸ್ಮಾರ್ಟ್ ರಸ್ತೆ ಕಾಮಗಾರಿ ಪ್ಯಾಕೇಜ್ 5&6, ಪುಟಾಣಿ ರೈಲು ಯೋಜನೆಗಳಿಗೆ ಪ್ರಹ್ಲಾದ್ ಜೋಶಿ ಶಂಕುಸ್ಥಾಪನೆ ನೆರವೇರಿಸಿದರು.

WhatsApp Image 2020 01 05 at 8.34.33 PM e1578249729390

ಬಳಿಕ ಮಾತನಾಡಿದ ಅವರು, ದೇಶದ ಜನರ ಆರೋಗ್ಯ ಗುಣಮಟ್ಟದ ಮೇಲೆ ದೇಶದ ಪ್ರಗತಿ ಅಳೆಯಲಾಗುತ್ತದೆ. ಉತ್ತಮ ಆರೋಗ್ಯ ಹೊಂದಿರುವ ಪ್ರಜೆಗಳು ದೇಶದ ಆರ್ಥಿಕತೆಗೆ ಕೊಡುಗೆ ನೀಡಬಲ್ಲರು. ಸ್ಮಾರ್ಟ್ ಸಿಟಿ ಯೋಜನೆ ಅಡಿ ಹಳೆಯ ಈಜುಗೊಳವನ್ನು ನವೀಕರಿಸಲಾಗಿದೆ. ಚಿಟುಗುಪ್ಪಿ ಆಸ್ಪತ್ರೆಯಲ್ಲಿ ಸ್ಮಾರ್ಟ್ ಹೆಲ್ತ್ ಆರಂಭಿಸಲಾಗಿದ್ದು, ಜನರ ಆರೋಗ್ಯ ತಪಾಸಣೆ ಹಾಗೂ ವರದಿಗಳನ್ನು ಕಂಪ್ಯೂಟರ್ ಆಧಾರಿತ ಕೃತಕ ಬುದ್ಧಿಮತ್ತೆಯಿಂದ ತ್ವರಿತವಾಗಿ ಮಾಡಲಾಗುವುದು ಎಂದು ತಿಳಿಸಿದರು.

ಕಂಪನಿಗಳ ಸಾರ್ವಜನಿಕ ಹೊಣೆಗಾರಿಕೆ ನಿಧಿ ಬಳಸಿ ಧಾರವಾಡದ ಡಿ.ಸಿ.ಕಾಂಪೌಡ್ ಬಳಿ 15 ಕೋಟಿ ರೂ. ವೆಚ್ಚದಲ್ಲಿ ಈಜುಗೋಳ ನಿರ್ಮಿಸಲಾಗುತ್ತಿದೆ. ಇದನ್ನು ಮೇಲ್ದರ್ಜೆಗೇರಿಸಿ ಕ್ರೀಡಾ ಸಮುಚ್ಚಯವನ್ನಾಗಿಸಲಾಗುವುದು. ಇದಕ್ಕೆ ತಗಲುವ ಹೆಚ್ಚುವರಿ 15 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಸ್ವಾಮ್ಯದ ತೈಲ ಹಾಗೂ ನೈಸರ್ಗಿಕ ಅನಿಲ ಕಾರ್ಪೊರೇಷನ್ (ಔಓಉಅ) ನೀಡಲು ಸಿದ್ಧವಿದೆ. ಧಾರವಾಡ ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಕಂಪನಿಗಳ ಸಾರ್ವಜನಿಕ ಹೊಣೆಗಾರಿಕೆ ನಿಧಿ ಅಡಿ ಕ್ರೀಡಾಂಗಣಗಳನ್ನು ನಿರ್ಮಿಸಲಾಗುವುದು.
ಕ್ರೀಡೆಗೆ ಹೆಚ್ಚಿನ ಓತ್ತು ನೀಡುವುದರೊಂದಿಗೆ ಮುಂಬರುವ ಓಲಿಂಪಿಕ್‍ನಲ್ಲಿ ಭಾರತದ ಕ್ರೀಡಾಪಟುಗಳು ಎರಡಂಕಿಯನ್ನು ದಾಟಿ ಪದಗಳನ್ನು ಜಯಿಸುವಂತೆ ಪ್ರೋತ್ಸಾಹಿಸಲಾಗುವುದು ಎಂದರು.

WhatsApp Image 2020 01 05 at 8.34.44 PM

ಕೇಂದ್ರ ರಸ್ತೆ ನಿಧಿ ಅಡಿ ಹುಬ್ಬಳ್ಳಿ ಧಾರವಾಡ ಬಹುತೇಕ ರಸ್ತೆಗಳನ್ನು ದುರಸ್ತಿಗೊಳಿಸಲಾಗಿದೆ. ಪಾಲಿಕೆಯು ಕಸ ಹಾಗೂ ಧೂಳು ಮುಕ್ತ ನಗರವನ್ನಾಗಿಸಲು ಪ್ರಯತ್ನಿಸಬೇಕು. ಬೀದಿ ದೀಪ ಹಾಗೂ ಕುಡಿಯುವ ನೀರಿನ ಸರಬರಾಜಿಗೂ ಒತ್ತು ನೀಡಬೇಕು ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ಮೊದಲ ಹಂತದ ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಇಂದು ಚಾಲನೆ ನೀಡಲಾಗಿದೆ. ಆದಷ್ಟು ಬೇಗ ಬಿಆರ್‍ಟಿಎಸ್ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು. ಧಾರವಾಡ ಜಿಲ್ಲೆಯಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ. ಸ್ಥಗಿತಗೊಂಡಿದ್ದ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ನಗರದ ಪ್ರಮುಖ ರಸ್ತೆಗಳನ್ನು ಕಾಂಕ್ರೀಟಿಕರಣಗೊಳಿಸಲಾಗುವುದು. ಫೆಬ್ರವರಿ 14ರಂದು ಉತ್ತರ ಕರ್ನಾಟಕಕ್ಕೆ ಅನುಕೂಲವಾಗುವಂತೆ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕುರಿತು ಉದ್ಯಮಿಗಳನ್ನು ಆಹ್ವಾನಿಸಲು ಮುಂಬೈಯಲ್ಲಿ ರೋಡ್ ಶೋ ಮಾಡಲಾಗಿದೆ. ಜ.29 ರಂದು ಹೈದರಾಬಾದ್‍ನಲ್ಲೂ ರೋಡ್ ಶೋ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

WhatsApp Image 2020 01 05 at 8.34.14 PM

ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಸಿ.ಡಬ್ಲ್ಯೂ.ಶಕೀಲ್ ಅಹಮದ್ ಮಾತನಾಡಿ, ಸ್ಮಾರ್ಟ್ ಸಿಟಿಯ 55 ಯೋಜನೆಗಳ ಪೈಕಿ 9 ಯೋಜನೆಗಳು ಪೂರ್ಣಗೊಂಡಿವೆ. 3.3 ಕೋಟಿ ರೂ. ವೆಚ್ಚದಲ್ಲಿ ಈಜುಗೊಳ, 3.6 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ಹೆಲ್ತ್, 1.17ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ಸ್ಕೂಲ್ ನಿರ್ಮಿಸಲಾಗಿದೆ. 6.08 ಕೋಟಿ ರೂ. ವೆಚ್ಚದಲ್ಲಿ ಬೆಂಗೇರಿ ಹಾಗೂ 2.09 ಕೋಟಿ ರೂ. ವೆಚ್ಚದಲ್ಲಿ ಉಣಕಲ್ ಮಾರುಕಟ್ಟೆಗಳನ್ನು ಬಹುಉಪಯೋಗಿ ಸ್ಥಳಗಳನ್ನಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಇಂದಿರಾ ಗಾಜಿನ ಮನೆ ಆವರಣದಲ್ಲಿ 4.59 ಕೋಟಿ ರೂ. ವೆಚ್ಚದಲ್ಲಿ ಬಹುವಾಹನ ನಿಲುಗಡೆ ಕಾಮಗಾರಿ ಆರಂಭಿಸಲು ಕಾರ್ಯಾದೇಶ ನೀಡಲಾಗಿದೆ. ಇಂದಿರಾಗಾಜಿನ ಮನೆಯಲ್ಲಿ ಪುಟಾಣಿ ರೈಲು ಹಾಗೂ ಸ್ಮಾರ್ಟ್ ಪ್ಯಾಕೇಜ್ 5&6 ಅಡಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು. ಶಾಸಕ ಅರವಿಂದ ಚಂದ್ರಕಾಂತ್ ಬೆಲ್ಲದ್, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ಹು-ಧಾ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್ ಇದ್ದರು.

TAGGED:hubliprahlad joshiPublic TVSports complexಕ್ರೀಡಾ ಸಮುಚ್ಚಯಪಬ್ಲಿಕ್ ಟಿವಿಪ್ರಹ್ಲಾದ್ ಜೋಶಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Interview
Bengaluru City

ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ – ಸಂದರ್ಶನದ ದಿನಾಂಕ ಮುಂದೂಡಿದ KPSC

Public TV
By Public TV
14 minutes ago
priyank kharge
Bidar

ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

Public TV
By Public TV
22 minutes ago
Shivalik LPG carrier 1
Latest

ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌

Public TV
By Public TV
31 minutes ago
Chikkamagaluru Funeral
Chikkamagaluru

ಪುರುಷ ಪ್ರಧಾನ ಸಮಾಜಕ್ಕೆ ತಿಲಾಂಜಲಿ – ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
38 minutes ago
GBA
Bengaluru City

ಸಿಲಿಂಡರ್ ಕೊರತೆ – ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ

Public TV
By Public TV
1 hour ago
bank loan
Districts

9 ರೂ. ಸಾಲಕ್ಕೆ ಬೆನ್ನು ಬಿದ್ದ ಬ್ಯಾಂಕ್‌ – ಸಾಲ ತೀರಿಸಿ ಕೊನೆಗೂ ತನ್ನ ಖಾತೆಗೆ ಬಾಕಿ 66 ಪೈಸೆ ಹಾಕಿಸಿಕೊಂಡ ರೈತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?