ಕಟುಕನ ಕೈಗೆ ಕುರಿ ಕೊಟ್ಟಂತೆ ಆಗಿದೆ- ಡಿಕೆಶಿ ವಿರುದ್ಧ ಹಿರೇಮಠ್ ಕಿಡಿ

Public TV
1 Min Read
HIREMATH

ಬಳ್ಳಾರಿ: ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರಿಗೆ ಜಿಲ್ಲೆಯ ಉಸ್ತುವಾರಿ ಹೊಣೆ ನೀಡಿರುವುದು ಕಟುಕನ ಕೈಗೆ ಕುರಿ ಕೊಟ್ಟಂತೆ ಆಗಿದೆ ಎಸ್ ಆರ್ ಹಿರೇಮಠ್ ಲೇವಡಿ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂಧನ ಸಚಿವರಾಗಿ ಸೋಲಾರ್ ಹಗರಣ, ರಿಪಬ್ಲಿಕ್ ಆಫ್ ರಾಮನಗರ ಮಾಡಿದ್ದು ಡಿಕೆಶಿ. ಭ್ರಷ್ಟಾಚಾರದ ಪ್ರತಿರೂಪವಾದ ಡಿಕೆಶಿಯನ್ನು ಬಳ್ಳಾರಿ ಜಿಲ್ಲೆಗೆ ಉಸ್ತುವಾರಿ ಮಾಡಿರುವುದು ಸರ್ಕಾರದ ನಿಷ್ಕ್ರಿಯತೆಯನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಂಎಂಎಲ್ ಗಣಿ ಕಂಪೆನಿಯಿಂದ 10.8 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಡಿಕೆಶಿ ಲೂಟಿ ಮಾಡಿದ್ದಾರೆ. ಇಂಥವರಿಗೆ ಜಿಲ್ಲಾ ಉಸ್ತುವಾರಿ ಸಚಿವ ನೀಡುವುದು ಸರಿಯಲ್ಲ. ಇದು ಸಮ್ಮಿಶ್ರ ಸರ್ಕಾರಕ್ಕೆ ನಾಚಿಗೇಡುತನದ ವಿಷಯವಾಗಿದೆ. ನಾಚಿಕೆಗೇಡಿಗೂ ಮಿತಿಯಿರುತ್ತದೆ ಅದನ್ನು ಈ ಸರ್ಕಾರ ಮೀರಿದೆ. ಅಕ್ರಮ ಗಣಿಗಾರಿಕೆ ಸಂಬಂಧ ನ್ಯಾಯಾಧೀಶ ಸಂತೋಷ್ ಹೆಗಡೆ ಅವರು ನೀಡಿದ ಎರಡು ವರದಿಗಳು ಇದುವರೆಗೂ ಅನುಷ್ಠಾನವಾಗಿಲ್ಲ. ಈಗಿನ ಸಮ್ಮಿಶ್ರ ಸರ್ಕಾರಕ್ಕೆ ಮರ್ಯಾದೆಯಿದ್ದರೆ ಅನುಷ್ಠಾನ ಮಾಡಲಿ ಗಣಿಭಾದಿತ ಪ್ರದೇಶಗಳ ಅಭಿವೃದ್ಧಿಗೆ ಮೀಸಲಿರುವ ಸಾವಿರಾರು ಕೋಟಿ ಹಣ ಬೇರೆಡೆ ಬಳಕೆಯಾಗಲು ಅವಕಾಶ ಮಾಡಿಕೊಡಬಾರದು ಎಂದು ಆಗ್ರಹಿಸಿದರು.

ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾಗಿರುವ ಡಿಕೆ ಶಿವಕುಮಾರ್ ಅವರಿಗೆ ರಾಮನಗರ ಮತ್ತು ಬಳ್ಳಾರಿ ಜಿಲ್ಲೆಯ ಉಸ್ತುವಾರಿಯನ್ನು ನೀಡಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Share This Article
Leave a Comment

Leave a Reply

Your email address will not be published. Required fields are marked *