Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಮನೆ ಮೇಲೆ ತಕ್ಷಣ ಐಟಿ ದಾಳಿ ಮಾಡ್ಲಿ- ಎಸ್.ಆರ್ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ನಮ್ಮ ಮನೆ ಮೇಲೆ ತಕ್ಷಣ ಐಟಿ ದಾಳಿ ಮಾಡ್ಲಿ- ಎಸ್.ಆರ್ ಪಾಟೀಲ್

Bagalkot

ನಮ್ಮ ಮನೆ ಮೇಲೆ ತಕ್ಷಣ ಐಟಿ ದಾಳಿ ಮಾಡ್ಲಿ- ಎಸ್.ಆರ್ ಪಾಟೀಲ್

Public TV
Last updated: October 13, 2019 12:01 pm
Public TV
Share
3 Min Read
sr patil
SHARE

ಬಾಗಲಕೋಟೆ: ನಮ್ಮ ಮನೆ ಮೇಲೆ ಐಟಿ ಅಧಿಕಾರಿಗಳು ತಕ್ಷಣ ದಾಳಿ ಮಾಡಲಿ ಎಂದು ಪರಿಷತ್ ವಿಪಕ್ಷನಾಯಕ ಎಸ್.ಆರ್ ಪಾಟೀಲ್ ಸವಾಲು ಹಾಕಿದ್ದಾರೆ.

ಐಟಿ ದಾಳಿ ಕುರಿತು ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಬಳಿ ಏನಿದೆ, ನಮ್ಮ ಮೇಲೆ ರೇಡ್ ಮಾಡಿದರೆ ಅವರೇ ನಮಗೆ ದುಡ್ಡು ಕೊಟ್ಟು ಹೋಗಬೇಕು. ಆ ರೀತಿಯ ಪರಿಸ್ಥಿತಿ ನಮ್ಮದು. ಹೀಗಾಗಿ ನಾಳೆಯೇ ನಮ್ಮ ಮನೆ ಮೇಲೆ ಐಟಿಯವರು ದಾಳಿ ಮಾಡಲಿ ಎಂದರು.

ಯಾವ ರೀತಿಯ ಕಾನೂನು ಬಾಹಿರವಾಗಿ ಹಣ ಬಂದಿದೆ ಎಂದು ಪರಿಶೀಲಿಸಿ ಐಟಿ ಅಧಿಕಾರಿಗಳು ದಾಳಿ ಮಾಡಲ್ಲ. ಕೇವಲ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಿ ಅವರ ನೈತಿಕ ಸ್ಥೈರ್ಯ ಕುಗ್ಗಿಸಬೇಕು ಎಂದು ದಾಳಿ ಮಾಡುತ್ತಾರೆ. ಆದರೆ ಇದು ಸಫಲವಾಗುತ್ತದೆ ಎಂಬುದು ಅವರ ತಿರುಕನ ಕನಸು ಎಂದು ಕಿಡಿಕಾರಿದರು.

PARAMESHWAR 3 Copy

ಇದೇ ವೇಳೆ ಜಿ. ಪರಮೇಶ್ವರ್ ಮನೆ ಮೇಲೆ ಐಟಿ ದಾಳಿ ಹಾಗೂ ಅವರ ಪಿ.ಎ ರಮೇಶ್ ಆತ್ಮಹತ್ಯೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಇದು ರಾಜಕೀಯ ಪ್ರೇರಿತವಾದ ದಾಳಿ. ದುರದ್ದೇಶದಿಂದ ಕಾಂಗ್ರೆಸ್ ನಾಯಕರ ನೈತಿಕ ಸ್ಥೈರ್ಯ ಕುಗ್ಗಿಸಬೇಕೆಂದು ದಾಳಿ ಮಾಡಲಾಗಿದೆ. ಸಂವಿಧಾನಾತ್ಮಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿರುವುದು ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲು. ಬಿಜೆಪಿ ನಾಯಕರು ಹೇಗಿದ್ದಾರೆಂದು ದೇಶದ 130 ಕೋಟಿ ಜನರಿಗೆ ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಮೇಶ್ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಗೊತ್ತಿಲ್ಲ. ಆದರೆ ರಮೇಶ್ ಆತ್ಮಹತ್ಯೆ ಪ್ರಕರಣದ ತನಿಖೆಯಾಗಬೇಕು. ಆತ್ಮಹತ್ಯೆ ಮಾಡಿಕೊಳ್ಳಲು ಪ್ರೇರಣೆ ಮಾಡಿದ್ದರೆ ಅದು ಸಹ ತಪ್ಪು. ಐಟಿ ಅಧಿಕಾರಿಗಳ ಕಿರುಕುಳ, ಕಾನೂನು ಬಾಹಿರವಾಗಿ ಬೆದರಿಕೆ ಹಾಕಿದ್ದರೆ, ಅದು ಅಪರಾಧವಾಗುತ್ತದೆ. ಅದಕ್ಕೆ ಐಟಿ ಅಧಿಕಾರಿಗಳೇ ಜವಾಬ್ದಾರರಾಗುತ್ತಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ವಿಶ್ವ ಪರ್ಯಟನೆ ಮಾಡಿದ್ದಾರೆ. ಮಂಗಳಲೋಕ, ಚಂದ್ರಲೋಕ ಎರಡೇ ಉಳಿದಿವೆ. ಅನೇಕ ರಾಷ್ಟ್ರಗಳಿಗೆ ಭೇಟಿ ನೀಡುವ ಪ್ರಧಾನಿ ಮೋದಿ, ಚಂದ್ರಯಾನ ವೀಕ್ಷಣೆಗಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ರಾಜ್ಯದಲ್ಲಿ ನೆರೆ ಬಂದು ಲಕ್ಷಾಂತರ ಜನ ಮನೆ ಮಠ ಕಳೆದುಕೊಂಡು ಪರಿತಪಿಸುತ್ತಿದ್ದರು. ಆದರೂ ಮೋದಿಯವರು ಮಾತ್ರ ನೀವು ಇದ್ದೀರೋ ಸತ್ತಿದ್ದೀರೋ, ನೀರಲ್ಲಿ ಮುಳುಗಿದವರು ಹೊರಗಡೆ ಬಂದಿದ್ದೀರಾ ಎಂದೂ ಕೇಳಿಲ್ಲ. ರಾಜ್ಯ ರಾಜಧಾನಿಗೆ ಬಂದು ರಾಜ್ಯ ನಾಯಕರನ್ನು ಕರೆಸಿ ವಿಚಾರಿಸಿಲ್ಲ. ಕನಿಷ್ಟ ಪಕ್ಷ ಮುಖ್ಯಮಂತ್ರಿಯನ್ನು ಕರೆಸಿಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

blg ramadhurga flood

ನೆರೆಯಿಂದ 38 ಸಾವಿರ ಕೋಟಿ ರೂ. ಹಾನಿಯಾಗಿದೆ ಎಂದು ವರದಿ ಕೊಟ್ಟರೆ ಕೇವಲ 1,200 ಕೋಟಿ ಬಿಡುಗಡೆ ಮಾಡಿದ್ದಾರೆ. 100 ರೂ.ಗೆ ಮೂರು ರೂಪಾಯಿ ಕೊಟ್ಟಿದ್ದಾರೆ. ಸಿಎಂಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಬಿಡಬೇಕು. ಇಲ್ಲದಿದ್ದಲ್ಲಿ ಆಡಳಿತದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೆರೆ ಪರಿಹಾರ ವಿಚಾರದಲ್ಲಿ ಕಣ್ಣು ಇಲ್ಲ, ಮೂಗಿಲ್ಲ, ಬಾಯಿ ಇಲ್ಲ, ಕಿವಿ ಇಲ್ಲ, ತ್ವಚೆ ಹೀಗೆ ಪಂಚೇಂದ್ರಿಯಗಳೇ ಇಲ್ಲದ ಸರ್ಕಾರ ಇದಾಗಿದೆ. ನನ್ನ 45 ವರ್ಷದ ಸಾರ್ವಜನಿಕ ಬದುಕಿನಲ್ಲಿ ಈ ರೀತಿಯ ಸರ್ಕಾರವನ್ನ ನಾನು ಎಂದೂ ನೋಡಿಲ್ಲ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.

ಬಿಜೆಪಿ ಶಾಸಕರೇ ನೆರೆ ಪರಿಹಾರದ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜನಪರವಾಗಿ ಮಾತನಾಡಿದರು. ಪಕ್ಷ ಅವರಿಗೆ ನೋಟಿಸ್ ಕೊಟ್ಟಿದೆ. ನೆರೆ ಪರಿಹಾರದ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಮಾತನಾಡಿದರೆ ಅವರನ್ನೂ ದೇಶದ್ರೋಹಿ ಅಂದ ಸರ್ಕಾರ ಇದು. ಈ ಭಂಡ ಸರ್ಕಾರಕ್ಕೆ ಉಪಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ. 15 ಸ್ಥಾನದಲ್ಲಿ ನಾವು ಕನಿಷ್ಟ ಹತ್ತು ಸ್ಥಾನ ಗೆಲ್ಲುತ್ತೇವೆ. ಬಿಜೆಪಿಯವರು 8 ಸ್ಥಾನಗಳನ್ನು ಗೆಲ್ಲಲೇಬೇಕು. ಅವರ ಸಂಖ್ಯೆ 113 ಆಗದಿದ್ರೆ ಏನಾಗುತ್ತೆ ನೋಡಿ, ಇದು ಅಂಕಿಗಳ ಆಟ ಎಂದು ಮಾರ್ಮಿಕವಾಗಿ ನುಡಿದರು.

Yatnal

ಕಲಾಪಕ್ಕೆ ಮಾಧ್ಯಮದವರ ನಿರ್ಬಂಧದ ಕುರಿತು ಮಾತನಾಡಿದ ಅವರು, ಮಾಧ್ಯಮದವರ ಕಣ್ಣಿಗೆ ಬಟ್ಟೆ ಕಟ್ಟಿದ್ದಾರೆ. ಪ್ರಜಾಪ್ರಭುತ್ವದ ನಾಲ್ಕನೇಯ ಅಂಗವನ್ನೇ ವಿಧಾಸಭೆ ಕಲಾಪದಿಂದ ಹೊರಗಿಟ್ಟಿದ್ದಾರೆ. ವಿಧಾನಸಭೆ ಕಲಾಪದ ದೃಶ್ಯ ಸೆರೆ ಹಿಡಿಯಬಾರದೆಂದು ಮಾಧ್ಯಮದವನ್ನು ಹೊರಹಾಕಿದ್ದಾರೆ. ಸಂವಿಧಾನದ ಮೂಲವೇ ಫ್ರೀಡಂ ಆಫ್ ಸ್ಪೀಚ್, ಅದನ್ನೇ ಹತ್ತಿಕ್ಕುವಂತಹ ಕೆಲಸ ಮಾಡಿದ್ದಾರೆ. ಇದು ನಾಚಿಗೇಡಿನ ಸರ್ಕಾರ ಎಂದು ಕಿಡಿಕಾರಿದರು.

TAGGED:bagalkotG Parameshwarit attackit raidPublic TVSR Patilಎಸ್.ಆರ್.ಪಾಟೀಲ್ಐಟಿ ದಾಳಿಜಿ.ಪರಮೇಶ್ವರ್ಪಬ್ಲಿಕ್ ಟಿವಿಬಾಗಲಕೋಟೆ
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
2 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
2 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
3 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
3 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
4 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?