Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೋಗೋದಾದ್ರೆ ಇವತ್ತೇ ಪಕ್ಷ ಬಿಟ್ಟು ಹೋಗಿ, ಪಾರ್ಟಿ ಶುದ್ಧವಾಗಲಿ – ಸುಧಾಕರ್‌ ವಿರುದ್ಧ ಎಸ್‌.ಆರ್‌ ವಿಶ್ವನಾಥ್‌ ಕೆಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೋಗೋದಾದ್ರೆ ಇವತ್ತೇ ಪಕ್ಷ ಬಿಟ್ಟು ಹೋಗಿ, ಪಾರ್ಟಿ ಶುದ್ಧವಾಗಲಿ – ಸುಧಾಕರ್‌ ವಿರುದ್ಧ ಎಸ್‌.ಆರ್‌ ವಿಶ್ವನಾಥ್‌ ಕೆಂಡ

Bengaluru City

ಹೋಗೋದಾದ್ರೆ ಇವತ್ತೇ ಪಕ್ಷ ಬಿಟ್ಟು ಹೋಗಿ, ಪಾರ್ಟಿ ಶುದ್ಧವಾಗಲಿ – ಸುಧಾಕರ್‌ ವಿರುದ್ಧ ಎಸ್‌.ಆರ್‌ ವಿಶ್ವನಾಥ್‌ ಕೆಂಡ

Public TV
Last updated: January 30, 2025 5:04 pm
Public TV
Share
3 Min Read
SR VISHWANATH
SHARE

– ಕಾಂಗ್ರೆಸ್‌ ಪರ ಕೆಲಸ ಮಾಡಿಲ್ಲ ಅಂತ ಪ್ರಮಾಣ ಮಾಡಿ; ಸವಾಲ್‌

ಬೆಂಗಳೂರು: ರಾಜ್ಯ ಬಿಜೆಪಿಯ (BJP) ಆತಂಕರಿಕ ಕಲಹ ಈಗ ಬೀದಿ ರಂಪವಾಗಿದೆ. ಬಿ.ವೈ ವಿಜಯೇಂದ್ರ ನಾಯಕತ್ವದ ವಿರುದ್ಧ ಆಕ್ರೋಶ ದಿನಕಳೆದಂತೆ ಹೆಚ್ಚುತ್ತಲೇ ಇದೆ. ಜಿಲ್ಲಾಧ್ಯಕ್ಷರ ಆಯ್ಕೆ ಪಟ್ಟಿ ಪ್ರಕಟವಾದ ನಂತರ ಬಿಜೆಪಿ ಮನೆಯ ಚಿತ್ರಣವೇ ಬದಲಾಗಿದೆ. ಬಿಜೆಪಿ ಬಂಡಾಯದ ಬೆಂಕಿಗೆ ಏಕಪಕ್ಷೀಯವಾಗಿ ಜಿಲ್ಲಾಧ್ಯಕ್ಷರ ನೇಮಕ ಮಾಡಿದ್ದು ತುಪ್ಪ ಸುರಿದಂತಾಗಿದೆ. ಈ ನಡುವೆ ಸಂಸದ ಡಾ.ಕೆ ಸುಧಾಕರ್‌ ಕೂಡ ತಿರುಗಿಬಿದ್ದಿದ್ದಾರೆ. ಈ ಬೆನ್ನಲ್ಲೇ ಶಾಸಕ ಎಸ್‌.ಆರ್‌ ವಿಶ್ವನಾಥ್‌ (SR Vishwanath) ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಧಾಕರ್ ರಾಜ್ಯಾಧ್ಯಕ್ಷರ ಬಗ್ಗೆ ಹಗುರ ಮಾತಾಡಿರೋದು ನನಗೆ ಹಿಡಿಸಲಿಲ್ಲ. ಈ ಹಿಂದೆಯೂ ನನ್ನ ಬಗ್ಗೆ ಅವರು ಮಾತನಾಡಿದ್ದಾರೆ. ನಾನೇನು ದಡ್ಡ ಅಲ್ಲ, ನನಗೂ ಅರ್ಥ ಆಗುತ್ತೆ. ಅವರಿಂದ ಸರ್ಕಾರ ರಚನೆ ಆಗಿರಬಹುದು, ಆದ್ರೆ 17 ಜನರಲ್ಲಿ ಕೊನೆಯದಾಗಿ ಬಂದವರು ಸುಧಾಕರ್‌. ಅವರ ಮೇಲೆ ವಿಧಾನಸೌಧದಲ್ಲಿ ಹಲ್ಲೆ ನಡೆದಾಗ ನಾನೇ ಹೋಗಿ ಬಚಾವ್‌ ಮಾಡಿದೆ ಎಂದು ಹೇಳಿದ್ದಾರೆ.

ಸುಧಾಕರ್ (K Sudhakar) ಕೋವಿಡ್ ನಿರ್ವಹಿಸಿದ್ರು, ಸಮರ್ಥ ಸಚಿವ ಆಗಿದ್ದವರು. ಸಮರ್ಥ ಸಚಿವ ಅನಿಸಿಕೊಂಡ ಮೇಲೆ ಚಿಕ್ಕಬಳ್ಳಾಪುರ ಯಾಕೆ ಸೋತ್ರಿ? ಚಿಕ್ಕಬಳ್ಳಾಪುರದಲ್ಲಿ ಒಳ್ಳೇ ಕೆಲಸ ನೀವು ಮಾಡಿದ್ರೆ ಜನ ಯಾಕೆ ನಿಮ್ಮನ್ನ ಸೋಲಿಸ್ತಿದ್ರು? ಎಂಪಿ ಸ್ಥಾನದ ಟಿಕೆಟ್ ಸಿಗಲ್ಲ ಅಂತಾದಾಗ ಏನೇನು ಮಾತಾಡಿದ್ರಿ? ಕಾಂಗ್ರೆಸ್‌ನವರ ಜೊತೆ ಆಗ ನೀವು ಮಾತಾಡಲಿಲ್ಲವಾ? ಆಗ ನಿಮಗೆ ಪಕ್ಷ ನಿಷ್ಠೆ ಇತ್ತಾ? ನೀವು ಕಾಂಗ್ರೆಸ್‌ ಜೊತೆಗೆ ಮಾತಾಡಲಿಲ್ಲ ಅಂದ್ರೆ ಪ್ರಮಾಣ ಮಾಡಿ, ನಾನು ಪ್ರಮಾಣ ಮಾಡ್ತೀನಿ ಅಂತ ಸುಧಾಕರ್‌ಗೆ ಸವಾಲ್‌ ಹಾಕಿದ್ದಾರೆ.

ಇನ್ನೂ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ವಿಚಾರ ಕುರಿತು ಮಾತನಾಡಿದ ಶಾಸಕರು, ಜಿಲ್ಲೆಗೆ ತಲಾ ಮೂರು ಹೆಸರು ಕಳಿಸಲಾಗಿತ್ತು. ಈ ಪೈಕಿ ಸಂದೀಪ್ ರೆಡ್ಡಿ ಆಯ್ಕೆ ಆಗಿದ್ದಾರೆ. ಅವರು ನಿನ್ನ ಬಂಧುವೂ ಅಲ್ಲ, ನನ್ನ ಸಂಬಂಧಿಯೂ ಅಲ್ಲ. ಏನ್ ತೀರ್ಮಾನ ತಗೋತೀರಿ, ಪಕ್ಷ ಬಿಡ್ತೀರಾ? ನಿನಗೆ ತಾಕತ್ತಿದ್ದರೆ ಪಕ್ಷ ಬಿಟ್ಟು ಚುನಾವಣೆಗೆ ಬಾ.. ನಮ್ಮ ಬಗ್ಗೆ, ಯಲಹಂಕ ಕಾರ್ಯಕರ್ತರ ಬಗ್ಗೆ ಗೌರವ ಇಟ್ಕೊಂಡು ಮಾತಾಡು… ಅದನ್ನು ಬಿಟ್ಟು ನಮ್ಮ ಕ್ಷೇತ್ರದಲ್ಲಿ ಮುಖಂಡರನ್ನ ಎತ್ತಿ ಕಟ್ಟೋ ಕೆಲಸ ಮಾಡಬೇಡ ಅಂತ ಸುಧಾಕರ್ ವಿರುದ್ಧ ಏಕವಚನದಲ್ಲಿ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

ಪಕ್ಷದಲ್ಲಿ ಏನೇ ಭಿನ್ನಾಭಿಪ್ರಾಯ ಇದ್ದರೂ ವರಿಷ್ಠರ ಬಳಿ ಮಾತಾಡಬೇಕು. 40 ವರ್ಷದಿಂದ ಪಕ್ಷದಲ್ಲಿದ್ದವರು ನಾವು, ನಾವೇ ಸುಮ್ನಿದೀವಿ. ಬಾಗೇಪಲ್ಲಿ, ಹೊಸಕೋಟೆ, ದೇವನಹಳ್ಳಿಯಲ್ಲಿ ನೀನು ಕಾಂಗ್ರೆಸ್‌ಪರ ಕೆಲಸಮಾಡಿದ್ದೀಯ. ಬಿಜೆಪಿ ಪಕ್ಷ ತಾಯಿ ಇದ್ದ ಹಾಗೆ. ಇದ್ದರೆ ಪಕ್ಷದಲ್ಲಿ ಇರು, ಇಲ್ಲ ಹೋಗು. ಕಾಂಗ್ರೆಸ್‌ಗೆ ಹೋದ್ರೇ ಸ್ಥಾನಮಾನ ಸಿಕ್ಕಿಬಿಡುತ್ತಾ? ನಿಮ್ಮ ದುರಹಂಕಾರದಿಂದ ಪಕ್ಷ ಅಧಿಕಾರಕ್ಕೆ ಬರದಂತೆ ಮಾಡಿದ್ದು ನೀವು ಎಂದು ಲೇವಡಿ ಮಾಡಿದ್ದಾರೆ.

ಮುಂದುರಿದು… ಬೇಕಿದ್ದರೆ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ನಾನು ಗೆಲ್ಲಿಸಿ ತೋರಿಸ್ತೀನಿ. ಕಳೆದ ಲೋಕಸಭಾ ಚುನಾವಣೆಯಲ್ಲಿ ನೀನು ಗೆದ್ದಿದ್ದು ಸುಧಾಕರ್ ಹೆಸರಿಂದಲ್ಲ. ಮೋದಿ ಹೆಸರಿಂದ, ಅದಕ್ಕೆ ಜೆಡಿಎಸ್ ಬೆಂಬಲ ಕೊಡ್ತು. ನೀನು ಕಾಂಗ್ರೆಸ್‌ನಲ್ಲಿದ್ದಾಗ ನಾವು ಗೆಲ್ಲಲಿಲ್ವಾ ಅಲ್ಲಿ? ಇನ್ನೊಂದು ಚಕಾರ ಎತ್ತಬಾರದು ನೀನು.. ನನ್ನ ತಂಟೆಗೆ ಬರಬೇಡ. ಹೋಗುವ ಹಾಗಿದ್ರೆ ಇವತ್ತೇ ಪಕ್ಷ ಬಿಟ್ಟು ಹೋಗಿ, ಪಕ್ಷ ಶುದ್ಧವಾಗಲಿ, ಹೋಗೋರೆಲ್ಲ ಹೋಗಲಿ ಎಂದು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಇದೇ ವೇಳೆ‌ ಶಾಸಕ ಯತ್ನಾಳ್‌ಗೂ ಟಾಂಗ್‌ ಕೊಟ್ಟರು. ನೀವು ಹಿರಿಯರು, ಯಾಕೆ ಹೀಗೆಲ್ಲ ಮಾತಾಡ್ತೀರಿ? ನಿಮ್ಮ ಹಿಂದೆ ಯಾರಿದ್ದಾರೆ? ಬನ್ನಿಮಾತಾಡೋಣ, ವೈಯಕ್ತಿಕ ಹೇಳಿಕೆ ಎಲ್ಲ ಬೇಡ. ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದ್ರೆ ಮಾಡ್ಕಳಿ, ಆದ್ರೆ ಬಹಿರಂಗ ಎಲ್ಲ ಯಾಕೆ ಮಾತಾಡ್ತೀರಿ? ಬಿಜೆಪಿಗೆ ಬರೋದು ಬಂದಿದ್ದೀರಿ, ವಾಪಸ್ ಹೋಗೋ ಯೋಚನೆ ಬೇಡ. ಪಕ್ಷ ಬಿಟ್ ಹೋದವರು ಯಾರೂ ಸಕ್ಸಸ್ ಆಗಿಲ್ಲ ಇದು ನಿಮಗೂ ಅನ್ವಯ, ಸುಧಾಕರ್‌ಗೂ ಅನ್ವಯ ಎಂದು ನುಡಿದಿದ್ದಾರೆ.

TAGGED:bjpBY VijayendraK Sudhakarsr vishwanathಎಸ್.ಆರ್ ವಿಶ್ವನಾಥ್ಕೆ.ಸುಧಾಕರ್ಬಿಜೆಪಿಬಿವೈ ವಿಜಯೇಂದ್ರ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Dharwad 4
Dharwad

ಸಂಗ್ರಹಿಸಿದ್ದ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ, ಇಡೀ ಮನೆಯೇ ಧಗಧಗ – ಮಹಿಳೆ ಗಂಭೀರ

Public TV
By Public TV
30 minutes ago
US Strikes
Latest

900 ಕೆಜಿ ಬಂಕರ್ ಬಸ್ಟರ್ ಬಾಂಬ್‌ನಿಂದ ಅಮೆರಿಕ ದಾಳಿ – ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ!

Public TV
By Public TV
39 minutes ago
Water Bill Electricity Bill Toll Price Hike 1 1
Bengaluru City

ನೀರು, ವಿದ್ಯುತ್, ಟೋಲ್ ದರ ಏರಿಕೆ – ಏ.1ರಿಂದ ಜನರ ಜೀವನ ದುಬಾರಿ

Public TV
By Public TV
1 hour ago
Hasi Karaga 2
Bengaluru City

ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ – ಇಂದು ದ್ರೌಪದಿ ದೇವಿ ಹಸಿ ಕರಗ ಶಕ್ತ್ಯೋತ್ಸವ

Public TV
By Public TV
2 hours ago
Accident 2
Districts

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ನಡ್ವೆ ಭೀಕರ ಅಪಘಾತ; ತಪ್ಪಿದ ದುರಂತ

Public TV
By Public TV
3 hours ago
Mysuru Crime
Crime

ಖರ್ಚಿಗೆ ಹಣ ಕೊಟ್ಟಿಲ್ಲ ಅಂತ ಯುವಕರಿಂದ ಮಂಗಳಮುಖಿಯರ ಮೇಲೆ ಹಲ್ಲೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?