ಚಿಕ್ಕೋಡಿ (ಬೆಳಗಾವಿ): ಚಿಂಚಣಿ ಸಿದ್ದಸಂಸ್ಥಾನ ಮಠದ ಅಲ್ಲಮಪ್ರಭು ಮಹಾಸ್ವಾಮೀಜಿ (63) (Sri Allamaprabhu Swamiji) ಅನಾರೋಗ್ಯದಿಂದ ಲಿಂಗೈಕ್ಯರಾಗಿದ್ದಾರೆ.
ಚಿಂಚಣಿ ಶ್ರೀಗಳು ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಬೆಳಗಾವಿಯ (Belagavi) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು (ಭಾನುವಾರ) ಮುಂಜಾನೆ ಲಿಂಗೈಕ್ಯರಾಗಿದ್ದಾರೆ. ಇದನ್ನೂ ಓದಿ: ಹಾಸನಾಂಬೆ ದೇಗುಲಕ್ಕೆ ದಾಖಲೆಯ ಆದಾಯ- 9 ದಿನಗಳಲ್ಲಿ 4,56,22,580 ರೂ. ಸಂಗ್ರಹ
ಗಡಿಭಾಗದಲ್ಲಿ ಕನ್ನಡದ ಸ್ವಾಮೀಜಿ ಎಂದೇ ಅವರು ಖ್ಯಾತಿಯಾಗಿದ್ದರು. ಸ್ವಾಮೀಜಿಗಳ ಅಗಲಿಕೆಯಿಂದ ಭಕ್ತ ವೃಂದದಲ್ಲಿ ಶೋಕ ಮನೆಮಾಡಿದೆ. ಇದನ್ನೂ ಓದಿ: ಅತಿವೃಷ್ಠಿಯಲ್ಲಿ ಬಿಎಸ್ವೈ ಭಿಕ್ಷೆ ಬೇಡಿದ್ದರು, ಸಿದ್ದರಾಮಯ್ಯರಂತೆ ಡ್ಯಾನ್ಸ್ ಮಾಡಿರಲಿಲ್ಲ: ಆರಗ ಜ್ಞಾನೇಂದ್ರ ವ್ಯಂಗ್ಯ