ಕೊಲಂಬೊ: ಆರ್ಥಿಕವಾಗಿ ದಿವಾಳಿಯಾಗಿರುವ ಶ್ರೀಲಂಕಾ (Sri Lanka) ಮುಂದಿನ ತಿಂಗಳು ನಡೆಯಲಿರುವ ಸ್ಥಳೀಯ ಚುನಾವಣೆಗಳನ್ನು (Election) ಮುಂದೂಡಿದೆ ಎಂದು ಶ್ರೀಲಂಕಾದ ಸುಪ್ರೀಂಕೋರ್ಟ್ಗೆ ಚುನಾವಣೆ ಆಯೋಗ ಮಾಹಿತಿ ನೀಡಿದೆ.
ಬ್ಯಾಲೆಟ್ ಪೇಪರ್ ಮುದ್ರಣ, ಇಂಧನ ಹಾಗೂ ಭದ್ರತಾ ವ್ಯವಸ್ಥೆಗೆ ಬೇಕಾಗಿರುವ ಹಣವನ್ನು ನೀಡಲು ಸರ್ಕಾರದಲ್ಲಿ ಹಣವಿಲ್ಲವೆಂದು ಹಣಸಕಾಸು ಇಲಾಖೆ ತಿಳಿಸಿದೆ.
ಸಂಬಳ, ಪಿಂಚಣಿ ಮತ್ತು ಅಗತ್ಯ ಸೇವೆಗಳನ್ನೇ ನೀಡಲು ಹಣ (Money) ಸಾಕಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ನಡೆಸುವುದು ಅಸಾಧ್ಯವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ವರ್ಷ ರಾಷ್ಟ್ರೀಯ ಆರ್ಥಿಕ ದಿವಾಳಿತನದ ವಿರುದ್ಧ ಜನರು ನಡೆಸಿದ ಭಾರೀ ಪ್ರತಿಭಟನೆ ಬಳಿಕ ರಾನಿಲ್ ವಿಕ್ರಮ ಸಿಂಘೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಸ್ಥಳೀಯ ಚುನಾವಣೆ ಮಾರ್ಚ್ 9ರಂದು ನಡೆಯಬೇಕಿತ್ತು. ಈ ಚುನಾವಣೆಗೆ ಮತದಾನಕ್ಕೆ ಸುಮಾರು 10 ಶತಕೋಟಿ ರೂ. (27.6 ಮಿಲಿಯನ್ ಡಾಲರ್) ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಇದರಿಂದಾಗಿ ಚುನಾವಣೆ ಮುಂದೂಡಲಾಗಿದೆ. ಇದನ್ನೂ ಓದಿ: ವೃದ್ಧೆಗೆ ಬೆಡ್ ನೀಡದೆ ನೆಲದ ಮೇಲೆ ಕೂರಿಸಿ ಚಿಕಿತ್ಸೆ ನೀಡಿದ ವೈದ್ಯರು
ಈ ಬಗ್ಗೆ ವಿರೋಧ ಪಕ್ಷದ ಸಂಸದ ವಿಮಲ್ ವೀರವಾಂಸ ಮಾತನಾಡಿ, ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ಹಾಗೂ ಚುನಾವಣೆಯನ್ನು ನಡೆಸದಿರಲು ಸರ್ಕಾರ ಆರ್ಥಿಕ ಬಿಕ್ಕಟ್ಟನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಅನಿತಾ ಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ: ಅಶ್ವಥ್ ನಾರಾಯಣ್
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k