ಕೊಲಂಬೊ: ಶ್ರೀಲಂಕಾದ ಭದ್ರತಾ ಪಡೆಗಳು ಶುಕ್ರವಾರ ರಾಜಧಾನಿಯಲ್ಲಿನ ಪ್ರಮುಖ ಸರ್ಕಾರಿ ವಿರೋಧಿ ಪ್ರತಿಭಟನಾ ಶಿಬಿರವನ್ನು ಧ್ವಂಸಗೊಳಿಸಿದೆ.
ಆರ್ಥಿಕ ಬಿಕ್ಕಟ್ಟಿನಿಂದ ಶ್ರೀಲಂಕಾ ಸ್ಥಿತಿ ಗಂಭೀರವಾಗಿದ್ದು, ಸರ್ಕಾರದ ವಿರುದ್ಧವೇ ಜನರು ಆಕ್ರೋಶಗೊಂಡು ಹಿಂಸಾಚಾರದ ವಾತಾವರಣ ಸೃಷ್ಟಿ ಮಾಡಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆಗಳು ಮತ್ತು ಪೊಲೀಸ್ ವಿಶೇಷ ಕಾರ್ಯಪಡೆಯ ಕಮಾಂಡೋಗಳು ಜನರ ಮೇಲೆ ಲಾಠಿ ಪ್ರಯೋಗಿಸಿ ಸ್ಥಿತಿಯನ್ನು ಶಾಂತಿಗೆ ತರಲು ಪ್ರಯತ್ನ ಮಾಡಿದ್ದಾರೆ. ಅದಕ್ಕೆ ಸರ್ಕಾರದ ವಿರೋಧಿ ಪ್ರತಿಭಟನಾ ಶಿಬಿರವನ್ನು ಭದ್ರತಾ ಪಡೆ ಧ್ವಂಸ ಮಾಡಿದೆ. ಇದನ್ನೂ ಓದಿ: ನಲಪಾಡ್ ಮಾಡಿರೋ ಕೃತ್ಯಕ್ಕೂ ನಮಗೂ ಸಂಬಂಧವಿಲ್ಲ: ಅಶೋಕ್ ಪಟ್ಟಣ
ಕೊಲಂಬೊದಲ್ಲಿನ ಸಮುದ್ರ ಮುಂಭಾಗದ ಅಧ್ಯಕ್ಷೀಯ ಸಚಿವಾಲಯವನ್ನು ಮುತ್ತಿಗೆ ಹಾಕುವ ಜನರ ಮೇಲೆ ಸ್ವಯಂಚಾಲಿತ ಆಕ್ರಮಣಕಾರಿ ರೈಫಲ್ಗಳಿಂದ ದಾಳಿ ಮಾಡಲು ಸಿಬ್ಬಂದಿ ಸಜ್ಜಾಗಿದ್ದರು. ವಸಾಹತುಶಾಹಿ ಕಟ್ಟಡದ ಹೊರಗೆ ನೂರಾರು ಸೈನಿಕರು ಪ್ರತಿಭಟನಾಕಾರರನ್ನು ತಡೆಯಲು ಬ್ಯಾರಿಗೇಡ್ಗಳು ಮತ್ತು ಡೇರೆಗಳನ್ನು ಹಾಕಲಾಗಿತ್ತು. ಆದರೂ ಸಹ ಪ್ರತಿಭಟನಾಕಾರರು ಅದನ್ನು ಮೀರಿ ಆವರಣದ ಮೆಟ್ಟಿಲುಗಳ ಮೇಲೆ ಬಂದರು. ಪರಿಣಾಮ ಅವರ ಮೇಲೆ ಲಾಠಿ ಚಾರ್ಜ್ ಮಾಡಲಾಗಿತ್ತು.
ಹೊಸ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಹಳೆಯ ಸ್ನೇಹಿತನನ್ನು ಪ್ರಧಾನಿಯಾಗಿ ಮತ್ತು ಉಚ್ಚಾಟಿತ ರಾಷ್ಟ್ರದ ಮುಖ್ಯಸ್ಥರ ವಕೀಲರನ್ನು ವಿದೇಶಾಂಗ ಸಚಿವರನ್ನಾಗಿ ನೇಮಿಸುವ ಕೆಲವೇ ಗಂಟೆಗಳ ಮೊದಲು ಈ ಘಟನೆ ನಡೆದಿದೆ. ಇದನ್ನೂ ಓದಿ: 2 ವರ್ಷಗಳ ನಂತರ ಸೋಫಾದಲ್ಲಿ ಪತ್ತೆಯಾದ ಮಹಿಳೆ ಅಸ್ಥಿಪಂಜರ
ಸಿಂಗಾಪುರದಿಂದ ಪಲಾಯನ ಮಾಡಿದ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಸ್ಥಾನಕ್ಕೆ ಬುಧವಾರ ವಿಕ್ರಮಸಿಂಘೆ ಅವರನ್ನು ಆಯ್ಕೆ ಮಾಡಲಾಗಿತ್ತು.