Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀಲಂಕಾದಲ್ಲಿ ಪರಿಸ್ಥಿತಿ ಉದ್ವಿಗ್ನ – ಸರ್ಕಾರ ಬೆಂಬಲಿಗನನ್ನು ಬಸ್‌ನಿಂದ ಕೆಳಗಿಳಿಸಿ ಕಸದ ಗಾಡಿಗೆ ಎಸೆದ ಪ್ರತಿಭಟನಾಕಾರರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶ್ರೀಲಂಕಾದಲ್ಲಿ ಪರಿಸ್ಥಿತಿ ಉದ್ವಿಗ್ನ – ಸರ್ಕಾರ ಬೆಂಬಲಿಗನನ್ನು ಬಸ್‌ನಿಂದ ಕೆಳಗಿಳಿಸಿ ಕಸದ ಗಾಡಿಗೆ ಎಸೆದ ಪ್ರತಿಭಟನಾಕಾರರು

Latest

ಶ್ರೀಲಂಕಾದಲ್ಲಿ ಪರಿಸ್ಥಿತಿ ಉದ್ವಿಗ್ನ – ಸರ್ಕಾರ ಬೆಂಬಲಿಗನನ್ನು ಬಸ್‌ನಿಂದ ಕೆಳಗಿಳಿಸಿ ಕಸದ ಗಾಡಿಗೆ ಎಸೆದ ಪ್ರತಿಭಟನಾಕಾರರು

Public TV
Last updated: May 10, 2022 6:20 pm
Public TV
Share
3 Min Read
SHARE

ಕೊಲಂಬೊ: ಆರ್ಥಿಕ ಬಿಕ್ಕಟ್ಟಿನ ಕಾರಣದಿಂದಾಗಿ ಶ್ರೀಲಂಕಾದಲ್ಲಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆಡಳಿತದ ವಿರುದ್ಧ ರೊಚ್ಚಿಗೆದ್ದಿರುವ ಪ್ರತಿಭಟನಾಕಾರರು ವಿಧ್ವಂಸಕ ಕೃತ್ಯಗಳನ್ನು ಎಸಗುತ್ತಿದ್ದಾರೆ. ಜನರು ರೋಷಾವೇಷಕ್ಕೆ ಬೆಚ್ಚಿದ ಮಹಿಂದಾ ರಾಜಪಕ್ಸ ಸೋಮವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಶ್ರೀಲಂಕಾ ದೇಶಾದ್ಯಂತ ಕಳೆದ ಒಂದು ವಾರದಿಂದ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಅನೇಕ ಸಾವು-ನೋವು, ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದೆ. ದೇಶದಲ್ಲಿ ಹಿಂಸಾಚಾರದಿಂದಾಗಿ ಐದು ಮಂದಿ ಸಾವನ್ನಪ್ಪಿದ್ದು, 225 ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ರೊಚ್ಚಿಗೆದ್ದ ಜನ – ಸಂಸದ, ಮಾಜಿ ಸಚಿವರ ಮನೆಗೆ ಬೆಂಕಿ

SRILANKA 2

ಏಪ್ರಿಲ್ 9 ರಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ನಿರ್ಗಮಿತ ಪ್ರಧಾನ ಮಂತ್ರಿ ಮಹಿಂದಾ ರಾಜಪಕ್ಸ ಅವರ ಬೆಂಬಲಿಗರಿಂದ ದಾಳಿ ನಂತರ ಪ್ರತೀಕಾರ ನಡೆಸಲು ಮುಂದಾದರು.

ಪ್ರತಿಭಟನಾಕಾರರ ಮೇಲೆ ಗುಂಡುಹಾರಿಸಿದ ಸಂಸದ
ಸೋಮವಾರ ರಾಜಧಾನಿ ಕೊಲಂಬೊದಿಂದ ಹೊರಟಿದ್ದ ಆಡಳಿತ ಪಕ್ಷದ ಶಾಸಕ ಅಮರಕೀರ್ತಿ ಅತುಕೋರಾಲ ಅವರ ವಾಹನವನ್ನು ತಡೆದ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದರು. ಈ ವೇಳೆ 27 ವರ್ಷದ ವ್ಯಕ್ತಿ ಗುಂಡಿಗೆ ಬಲಿಯಾಗಿ, ಇಬ್ಬರು ಗಾಯಗೊಂಡರು. ಘಟನೆ ನಂತರ ಸಂಸದರು ತಾವೇ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಅವರನ್ನು ಕೊಲೆ ಮಾಡಲಾಗಿದೆ ಎಂದು ಪಕ್ಷ ಆರೋಪಿಸಿದೆ. ಶಾಸಕರ ಅಂಗರಕ್ಷಕ ಕೂಡ ಸಾವನ್ನಪ್ಪಿದ್ದಾನೆ. ಅಲ್ಲಿ ಏನಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸೋಮವಾರದಂದು ದಕ್ಷಿಣದ ವೀರಕೇಟಿಯ ಪಟ್ಟಣದಲ್ಲಿ ರಾಜಪಕ್ಸ ಅವರ ಪಕ್ಷದ ಪ್ರಾಂತೀಯ ರಾಜಕಾರಣಿಯೊಬ್ಬರು ಗುಂಡು ಹಾರಿಸಿ ಇಬ್ಬರನ್ನು ಕೊಂದು ಮೂವರನ್ನು ಗಾಯಗೊಳಿಸಿದ್ದಾರೆ. ಕೃತ್ಯದ ನಂತರ ರಾಜಕಾರಣಿ ಕಾಣೆಯಾಗಿದ್ದಾನೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಬುಗಿಲೆದ್ದ ಆಕ್ರೋಶಕ್ಕೆ ಆಡಳಿತ ಪಕ್ಷದ ಸಂಸದ ಬಲಿ

srilanka

ರಾಜಕಾರಣಿಗಳ ಮನೆಗಳಿಗೆ ಬೆಂಕಿ
ಕರ್ಫ್ಯೂ ಹೊರತಾಗಿಯೂ ಆಡಳಿತ ಪಕ್ಷದ ಉನ್ನತ ರಾಜಕಾರಣಿಗಳ ಕನಿಷ್ಠ 41 ಮನೆಗಳನ್ನು ರಾತ್ರಿಯಿಡೀ ಸುಟ್ಟು ಹಾಕಲಾಗಿದೆ. ಆ ಮನೆಗಳಲ್ಲಿ ನಿಲ್ಲಿಸಿದ್ದ ನೂರಾರು ದ್ವಿಚಕ್ರ ವಾಹನಗಳೂ ಸುಟ್ಟು ಕರಕಲಾಗಿವೆ.

ರಾಜಪಕ್ಸ ಮ್ಯೂಸಿಯಂ ಧ್ವಂಸ
ಮೆಡಾ ಮುಲಾನಾ ಎಂಬ ಆಡಳಿತ ಕುಟುಂಬದ ಪೂರ್ವಜರ ಗ್ರಾಮದಲ್ಲಿರುವ ರಾಜಪಕ್ಸ ಮನೆತನದವರ ಕುರಿತಾದ ವಸ್ತುಸಂಗ್ರಹಾಲಯದ ಮೇಲೆ ಗುಂಪೊಂದು ದಾಳಿ ನಡೆಸಿ ಅದನ್ನು ನೆಲಸಮಗೊಳಿಸಿದೆ. ರಾಜಪಕ್ಸ ಪೋಷಕರ ಎರಡು ಮೇಣದ ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ವಾಯುವ್ಯ ಪಟ್ಟಣವಾದ ಕುರುನೆಗಾಲದಲ್ಲಿ ರಾಜಪಕ್ಸರ ರಾಜಕೀಯ ಕಚೇರಿಯೂ ಸಹ ನಾಶವಾಗಿದೆ. ಇದನ್ನೂ ಓದಿ: ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸ ರಾಜೀನಾಮೆ

sri lanka mp house fire

ಆಸ್ಪತ್ರೆಯಲ್ಲಿ ನಿರ್ಬಂಧ
ರಾಜಪಕ್ಸ ವಿರೋಧಿ ಪ್ರತಿಭಟನಾಕಾರರೊಂದಿಗಿನ ಘರ್ಷಣೆಯಲ್ಲಿ ಗಾಯಗೊಂಡ ಸರ್ಕಾರಿ ಬೆಂಬಲಿಗರನ್ನು ರಕ್ಷಿಸಲು ಮುಖ್ಯ ಕೊಲಂಬೊ ರಾಷ್ಟ್ರೀಯ ಆಸ್ಪತ್ರೆಯ ವೈದ್ಯರು ಮುಂದಾದರು. ಆದರೆ ಅವರಿಗೆ ಚಿಕಿತ್ಸೆ ನೀಡದಂತೆ ಪ್ರತಿಭಟನಾಕಾರರು ತಡೆಯಲು ಮುಂದಾದರು. ʻಅವರು ಕೊಲೆಗಾರರಾಗಿರಬಹುದು, ಆದರೆ ಚಿಕಿತ್ಸೆ ಪಡೆಯಬೇಕಾದ ರೋಗಿಗಳುʼ ಎಂದು ವೈದ್ಯರು ನಿರ್ಬಂಧಕ್ಕೆ ವಿರೋಧ ವ್ಯಕ್ತಪಡಿಸಿದರು.

ಒಟ್ಟು 219 ಮಂದಿಯನ್ನು ಕೊಲಂಬೊ ರಾಷ್ಟ್ರೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರು ತೀವ್ರ ನಿಗಾದಲ್ಲಿದ್ದಾರೆ ಎಂದು ಆಸ್ಪತ್ರೆಯ ವಕ್ತಾರ ಪುಷ್ಪಾ ಸೊಯ್ಸಾ ತಿಳಿಸಿದ್ದಾರೆ. ಗಾಯಗೊಂಡ ಸರ್ಕಾರಿ ಬೆಂಬಲಿಗರನ್ನು ಕರೆತರಲು ಸೈನಿಕರು ಗೇಟ್‌ಗಳನ್ನು ಬಲವಂತವಾಗಿ ತೆರೆಯಬೇಕಾದ ಪರಿಸ್ಥಿತಿ ಇತ್ತು. ಪ್ರತಿಭಟನಾಕಾರರ ವಿರೋಧದಿಂದಾಗಿ ಆಸ್ಪತ್ರೆಗೆ ಪ್ರವೇಶಿಸಲು ಬೀಗಗಳನ್ನು ಮುರಿಯಬೇಕಾಯಿತು. ಇದನ್ನೂ ಓದಿ: 1945 ರಲ್ಲಿದ್ದಂತೆ, ವಿಜಯವು ನಮ್ಮದಾಗಿರುತ್ತದೆ: ಪುಟಿನ್ ಪ್ರತಿಜ್ಞೆ

Mahinda Rajapaksa

ಬಸ್‌ಗಳಿಗೆ ಬೆಂಕಿ
ಕೊಲಂಬೊಗೆ ಪ್ರಯಾಣಿಸಲು ರಾಜಪಕ್ಸ ಬೆಂಬಲಿಗರು ಬಳಸುತ್ತಿದ್ದ ಹತ್ತಾರು ಬಸ್‌ಗಳಿಗೆ ದೇಶದಾದ್ಯಂತ ಬೆಂಕಿ ಹಚ್ಚಲಾಯಿತು. ಮಹಾರಾಗಮಾದ ಉಪನಗರದಲ್ಲಿ ಜನಸಮೂಹವು ಸರ್ಕಾರಿ ಪರ ಗುಂಪಿನ ನಾಯಕನನ್ನು ಬಸ್‌ನಿಂದ ಬಲವಂತವಾಗಿ ಕೆಳಗಿಳಿಸಿ ಕಸದ ಗಾಡಿಗೆ ಎಸೆದರು. ಮೊದಲು ವಾಹನವನ್ನು ಬುಲ್ಡೋಜರ್‌ನಿಂದ ಜಖಂಗೊಳಿಸಿದರು.

ಜನರನ್ನು ಕೆರೆಗೆ ತಳ್ಳಿ ದುಷ್ಕೃತ್ಯ
ಆಕ್ರೋಶಗೊಂಡ ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಟೆಂಪಲ್ ಟ್ರೀಸ್ ನಿವಾಸದ ಬಳಿಯ ಕೆರೆಯೊಂದಕ್ಕೆ ಹತ್ತಾರು ಮಂದಿಯನ್ನು ತಳ್ಳಿ ಆಕ್ರೋಶ ಹೊರಕಾಕಿದರು. ಕೆರೆಗೆ ತಳ್ಳಲ್ಪಟ್ಟವರನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು.

TAGGED:Economic Crisisprotestsri lanka crisissri lanka violenceಆರ್ಥಿಕ ಬಿಕ್ಕಟ್ಟುಪ್ರತಿಭಟನೆಶ್ರೀಲಂಕಾ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Snehamayi Krishna 2
Bengaluru City

ಮುಡಾ ಹಗರಣದ ದೂರುದಾರನೇ ಅರೆಸ್ಟ್ – ಸ್ನೇಹಮಯಿ ಕೃಷ್ಣ ಮನೆ, ಕಚೇರಿ ಮೇಲೆ ದಾಳಿ

Public TV
By Public TV
7 hours ago
T20 World Cup 2026 Australia Oman
Cricket

T20 WC 2026 | ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ಅಬ್ಬರಿಸಿದ ಆಸೀಸ್‌ – ಓಮನ್‌ ವಿರುದ್ಧ 9 ವಿಕೆಟ್‌ಗಳ ಜಯ

Public TV
By Public TV
7 hours ago
Siddaramaiah 10
Bengaluru City

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ವಿರೋಧಿಗಳಿಗೆ ಸಿಎಂ ತಿರುಗೇಟು

Public TV
By Public TV
8 hours ago
Bird Flu 3
Districts

ಆಂಧ್ರದ ಚಿತ್ತೂರಲ್ಲಿ ಹಕ್ಕಿ ಜ್ವರ ಪತ್ತೆ – ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ

Public TV
By Public TV
8 hours ago
Narendra Modi great friend of mine Donald Trump Announces 26 percentage Discounted Reciprocal Tariff On India
Latest

ಟ್ರಂಪ್ ಟ್ಯಾರಿಫ್‌ ಗೆ ಭಾರೀ ಹಿನ್ನಡೆ – ಸುಂಕ ಹೇರಲು ಅಧಿಕಾರ ಇಲ್ಲ; ಯುಎಸ್‌ ಸುಪ್ರೀಂ ಕೋರ್ಟ್‌ ಚಾಟಿ

Public TV
By Public TV
9 hours ago
rottweiler dog
Bengaluru City

ಬೆಂಗಳೂರು | 4 ವರ್ಷದ ಬಾಲಕನ ಮೇಲೆ ರಾಟ್ ವೀಲರ್ ದಾಳಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?