Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಶ್ರೀಲಂಕಾದಲ್ಲಿ ಪರಿಸ್ಥಿತಿ ಉದ್ವಿಗ್ನ – ಸರ್ಕಾರ ಬೆಂಬಲಿಗನನ್ನು ಬಸ್‌ನಿಂದ ಕೆಳಗಿಳಿಸಿ ಕಸದ ಗಾಡಿಗೆ ಎಸೆದ ಪ್ರತಿಭಟನಾಕಾರರು

Public TV
Last updated: May 10, 2022 6:20 pm
Public TV
Share
3 Min Read
SHARE

ಕೊಲಂಬೊ: ಆರ್ಥಿಕ ಬಿಕ್ಕಟ್ಟಿನ ಕಾರಣದಿಂದಾಗಿ ಶ್ರೀಲಂಕಾದಲ್ಲಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆಡಳಿತದ ವಿರುದ್ಧ ರೊಚ್ಚಿಗೆದ್ದಿರುವ ಪ್ರತಿಭಟನಾಕಾರರು ವಿಧ್ವಂಸಕ ಕೃತ್ಯಗಳನ್ನು ಎಸಗುತ್ತಿದ್ದಾರೆ. ಜನರು ರೋಷಾವೇಷಕ್ಕೆ ಬೆಚ್ಚಿದ ಮಹಿಂದಾ ರಾಜಪಕ್ಸ ಸೋಮವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಶ್ರೀಲಂಕಾ ದೇಶಾದ್ಯಂತ ಕಳೆದ ಒಂದು ವಾರದಿಂದ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಅನೇಕ ಸಾವು-ನೋವು, ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದೆ. ದೇಶದಲ್ಲಿ ಹಿಂಸಾಚಾರದಿಂದಾಗಿ ಐದು ಮಂದಿ ಸಾವನ್ನಪ್ಪಿದ್ದು, 225 ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ರೊಚ್ಚಿಗೆದ್ದ ಜನ – ಸಂಸದ, ಮಾಜಿ ಸಚಿವರ ಮನೆಗೆ ಬೆಂಕಿ

SRILANKA 2

ಏಪ್ರಿಲ್ 9 ರಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ನಿರ್ಗಮಿತ ಪ್ರಧಾನ ಮಂತ್ರಿ ಮಹಿಂದಾ ರಾಜಪಕ್ಸ ಅವರ ಬೆಂಬಲಿಗರಿಂದ ದಾಳಿ ನಂತರ ಪ್ರತೀಕಾರ ನಡೆಸಲು ಮುಂದಾದರು.

ಪ್ರತಿಭಟನಾಕಾರರ ಮೇಲೆ ಗುಂಡುಹಾರಿಸಿದ ಸಂಸದ
ಸೋಮವಾರ ರಾಜಧಾನಿ ಕೊಲಂಬೊದಿಂದ ಹೊರಟಿದ್ದ ಆಡಳಿತ ಪಕ್ಷದ ಶಾಸಕ ಅಮರಕೀರ್ತಿ ಅತುಕೋರಾಲ ಅವರ ವಾಹನವನ್ನು ತಡೆದ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದರು. ಈ ವೇಳೆ 27 ವರ್ಷದ ವ್ಯಕ್ತಿ ಗುಂಡಿಗೆ ಬಲಿಯಾಗಿ, ಇಬ್ಬರು ಗಾಯಗೊಂಡರು. ಘಟನೆ ನಂತರ ಸಂಸದರು ತಾವೇ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಅವರನ್ನು ಕೊಲೆ ಮಾಡಲಾಗಿದೆ ಎಂದು ಪಕ್ಷ ಆರೋಪಿಸಿದೆ. ಶಾಸಕರ ಅಂಗರಕ್ಷಕ ಕೂಡ ಸಾವನ್ನಪ್ಪಿದ್ದಾನೆ. ಅಲ್ಲಿ ಏನಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸೋಮವಾರದಂದು ದಕ್ಷಿಣದ ವೀರಕೇಟಿಯ ಪಟ್ಟಣದಲ್ಲಿ ರಾಜಪಕ್ಸ ಅವರ ಪಕ್ಷದ ಪ್ರಾಂತೀಯ ರಾಜಕಾರಣಿಯೊಬ್ಬರು ಗುಂಡು ಹಾರಿಸಿ ಇಬ್ಬರನ್ನು ಕೊಂದು ಮೂವರನ್ನು ಗಾಯಗೊಳಿಸಿದ್ದಾರೆ. ಕೃತ್ಯದ ನಂತರ ರಾಜಕಾರಣಿ ಕಾಣೆಯಾಗಿದ್ದಾನೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಬುಗಿಲೆದ್ದ ಆಕ್ರೋಶಕ್ಕೆ ಆಡಳಿತ ಪಕ್ಷದ ಸಂಸದ ಬಲಿ

srilanka

ರಾಜಕಾರಣಿಗಳ ಮನೆಗಳಿಗೆ ಬೆಂಕಿ
ಕರ್ಫ್ಯೂ ಹೊರತಾಗಿಯೂ ಆಡಳಿತ ಪಕ್ಷದ ಉನ್ನತ ರಾಜಕಾರಣಿಗಳ ಕನಿಷ್ಠ 41 ಮನೆಗಳನ್ನು ರಾತ್ರಿಯಿಡೀ ಸುಟ್ಟು ಹಾಕಲಾಗಿದೆ. ಆ ಮನೆಗಳಲ್ಲಿ ನಿಲ್ಲಿಸಿದ್ದ ನೂರಾರು ದ್ವಿಚಕ್ರ ವಾಹನಗಳೂ ಸುಟ್ಟು ಕರಕಲಾಗಿವೆ.

ರಾಜಪಕ್ಸ ಮ್ಯೂಸಿಯಂ ಧ್ವಂಸ
ಮೆಡಾ ಮುಲಾನಾ ಎಂಬ ಆಡಳಿತ ಕುಟುಂಬದ ಪೂರ್ವಜರ ಗ್ರಾಮದಲ್ಲಿರುವ ರಾಜಪಕ್ಸ ಮನೆತನದವರ ಕುರಿತಾದ ವಸ್ತುಸಂಗ್ರಹಾಲಯದ ಮೇಲೆ ಗುಂಪೊಂದು ದಾಳಿ ನಡೆಸಿ ಅದನ್ನು ನೆಲಸಮಗೊಳಿಸಿದೆ. ರಾಜಪಕ್ಸ ಪೋಷಕರ ಎರಡು ಮೇಣದ ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ವಾಯುವ್ಯ ಪಟ್ಟಣವಾದ ಕುರುನೆಗಾಲದಲ್ಲಿ ರಾಜಪಕ್ಸರ ರಾಜಕೀಯ ಕಚೇರಿಯೂ ಸಹ ನಾಶವಾಗಿದೆ. ಇದನ್ನೂ ಓದಿ: ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸ ರಾಜೀನಾಮೆ

sri lanka mp house fire

ಆಸ್ಪತ್ರೆಯಲ್ಲಿ ನಿರ್ಬಂಧ
ರಾಜಪಕ್ಸ ವಿರೋಧಿ ಪ್ರತಿಭಟನಾಕಾರರೊಂದಿಗಿನ ಘರ್ಷಣೆಯಲ್ಲಿ ಗಾಯಗೊಂಡ ಸರ್ಕಾರಿ ಬೆಂಬಲಿಗರನ್ನು ರಕ್ಷಿಸಲು ಮುಖ್ಯ ಕೊಲಂಬೊ ರಾಷ್ಟ್ರೀಯ ಆಸ್ಪತ್ರೆಯ ವೈದ್ಯರು ಮುಂದಾದರು. ಆದರೆ ಅವರಿಗೆ ಚಿಕಿತ್ಸೆ ನೀಡದಂತೆ ಪ್ರತಿಭಟನಾಕಾರರು ತಡೆಯಲು ಮುಂದಾದರು. ʻಅವರು ಕೊಲೆಗಾರರಾಗಿರಬಹುದು, ಆದರೆ ಚಿಕಿತ್ಸೆ ಪಡೆಯಬೇಕಾದ ರೋಗಿಗಳುʼ ಎಂದು ವೈದ್ಯರು ನಿರ್ಬಂಧಕ್ಕೆ ವಿರೋಧ ವ್ಯಕ್ತಪಡಿಸಿದರು.

ಒಟ್ಟು 219 ಮಂದಿಯನ್ನು ಕೊಲಂಬೊ ರಾಷ್ಟ್ರೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರು ತೀವ್ರ ನಿಗಾದಲ್ಲಿದ್ದಾರೆ ಎಂದು ಆಸ್ಪತ್ರೆಯ ವಕ್ತಾರ ಪುಷ್ಪಾ ಸೊಯ್ಸಾ ತಿಳಿಸಿದ್ದಾರೆ. ಗಾಯಗೊಂಡ ಸರ್ಕಾರಿ ಬೆಂಬಲಿಗರನ್ನು ಕರೆತರಲು ಸೈನಿಕರು ಗೇಟ್‌ಗಳನ್ನು ಬಲವಂತವಾಗಿ ತೆರೆಯಬೇಕಾದ ಪರಿಸ್ಥಿತಿ ಇತ್ತು. ಪ್ರತಿಭಟನಾಕಾರರ ವಿರೋಧದಿಂದಾಗಿ ಆಸ್ಪತ್ರೆಗೆ ಪ್ರವೇಶಿಸಲು ಬೀಗಗಳನ್ನು ಮುರಿಯಬೇಕಾಯಿತು. ಇದನ್ನೂ ಓದಿ: 1945 ರಲ್ಲಿದ್ದಂತೆ, ವಿಜಯವು ನಮ್ಮದಾಗಿರುತ್ತದೆ: ಪುಟಿನ್ ಪ್ರತಿಜ್ಞೆ

Mahinda Rajapaksa

ಬಸ್‌ಗಳಿಗೆ ಬೆಂಕಿ
ಕೊಲಂಬೊಗೆ ಪ್ರಯಾಣಿಸಲು ರಾಜಪಕ್ಸ ಬೆಂಬಲಿಗರು ಬಳಸುತ್ತಿದ್ದ ಹತ್ತಾರು ಬಸ್‌ಗಳಿಗೆ ದೇಶದಾದ್ಯಂತ ಬೆಂಕಿ ಹಚ್ಚಲಾಯಿತು. ಮಹಾರಾಗಮಾದ ಉಪನಗರದಲ್ಲಿ ಜನಸಮೂಹವು ಸರ್ಕಾರಿ ಪರ ಗುಂಪಿನ ನಾಯಕನನ್ನು ಬಸ್‌ನಿಂದ ಬಲವಂತವಾಗಿ ಕೆಳಗಿಳಿಸಿ ಕಸದ ಗಾಡಿಗೆ ಎಸೆದರು. ಮೊದಲು ವಾಹನವನ್ನು ಬುಲ್ಡೋಜರ್‌ನಿಂದ ಜಖಂಗೊಳಿಸಿದರು.

ಜನರನ್ನು ಕೆರೆಗೆ ತಳ್ಳಿ ದುಷ್ಕೃತ್ಯ
ಆಕ್ರೋಶಗೊಂಡ ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಟೆಂಪಲ್ ಟ್ರೀಸ್ ನಿವಾಸದ ಬಳಿಯ ಕೆರೆಯೊಂದಕ್ಕೆ ಹತ್ತಾರು ಮಂದಿಯನ್ನು ತಳ್ಳಿ ಆಕ್ರೋಶ ಹೊರಕಾಕಿದರು. ಕೆರೆಗೆ ತಳ್ಳಲ್ಪಟ್ಟವರನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು.

TAGGED:Economic Crisisprotestsri lanka crisissri lanka violenceಆರ್ಥಿಕ ಬಿಕ್ಕಟ್ಟುಪ್ರತಿಭಟನೆಶ್ರೀಲಂಕಾ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Karavali movie 1
‘ಮಾವೀರ’ನಾಗಿ ಎಂಟ್ರಿ ಕೊಟ್ಟ ಸು ಫ್ರಂ ಸೋ ಕರುಣಾಕರ ಗುರೂಜಿ
Cinema Latest Sandalwood Top Stories
Rajath Dharmasthala
ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
Cinema Dakshina Kannada Latest Main Post South cinema
Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories
Allu Arjun Sneha Reddy
ಶೂಟಿಂಗ್‌ಗಾಗಿ ಮುಂಬೈಗೆ ಹಾರಿದ ಐಕಾನ್ ಸ್ಟಾರ್
Cinema Latest Top Stories
chiranjeevi 6
ಟ್ರೋಲರ್ಸ್‌ ವಿರುದ್ಧ ರೊಚ್ಚಿಗೆದ್ದ ಚಿರಂಜೀವಿ
Cinema Latest South cinema

You Might Also Like

Asim Munir
Crime

ಭಾರತದ ಮೇಲೆ ದಾಳಿ ಮಾಡಿ – ಪಾಕ್ ಸೇನಾ ಮುಖ್ಯಸ್ಥನಿಗೆ ಬೆಂಗಳೂರಿನ ಅಲ್‌ಖೈದಾ ಭಯೋತ್ಪಾದಕಿ ಮನವಿ

Public TV
By Public TV
26 minutes ago
AshwiniVaishnaw
Davanagere

ಒಪ್ಪಂದದಿಂದ ಹಿಂದೆ ಸರಿದ ರಾಜ್ಯ ಸರ್ಕಾರ – ಶಿವಮೊಗ್ಗ To ಹರಿಹರ ರೈಲ್ವೆ ಯೋಜನೆ ಕೈಬಿಟ್ಟ ಕೇಂದ್ರ

Public TV
By Public TV
57 minutes ago
Ground Penetrating Radar
Dakshina Kannada

ಬುರುಡೆ ರಹಸ್ಯ| 13ನೇ ಜಾಗದ ಶೋಧಕ್ಕೆ GPR ಬಳಕೆ ಸಾಧ್ಯತೆ

Public TV
By Public TV
1 hour ago
Mysuru Vehicle Overturns
Districts

ಬಸ್ ಬಾರದ್ದಕ್ಕೆ ಹಾಲಿನ ಗಾಡಿ ಹತ್ತಿದ ವಿದ್ಯಾರ್ಥಿಗಳು – ವಾಹನ ಪಲ್ಟಿ, 7 ಮಂದಿಗೆ ಗಾಯ

Public TV
By Public TV
1 hour ago
Weather
Districts

6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಜಾರಿ – ಭಾರೀ ಮಳೆಯಾಗುವ ಸಾಧ್ಯತೆ

Public TV
By Public TV
2 hours ago
India signs MoU with Russia to deepen cooperation across sectors
Latest

ಟ್ರಂಪ್‌ ಬೆದರಿಕೆಗೆ ಜಗ್ಗದ ಭಾರತ – ರಷ್ಯಾದ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?