Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀಲಂಕಾದಲ್ಲಿ ಪರಿಸ್ಥಿತಿ ಉದ್ವಿಗ್ನ – ಸರ್ಕಾರ ಬೆಂಬಲಿಗನನ್ನು ಬಸ್‌ನಿಂದ ಕೆಳಗಿಳಿಸಿ ಕಸದ ಗಾಡಿಗೆ ಎಸೆದ ಪ್ರತಿಭಟನಾಕಾರರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶ್ರೀಲಂಕಾದಲ್ಲಿ ಪರಿಸ್ಥಿತಿ ಉದ್ವಿಗ್ನ – ಸರ್ಕಾರ ಬೆಂಬಲಿಗನನ್ನು ಬಸ್‌ನಿಂದ ಕೆಳಗಿಳಿಸಿ ಕಸದ ಗಾಡಿಗೆ ಎಸೆದ ಪ್ರತಿಭಟನಾಕಾರರು

Latest

ಶ್ರೀಲಂಕಾದಲ್ಲಿ ಪರಿಸ್ಥಿತಿ ಉದ್ವಿಗ್ನ – ಸರ್ಕಾರ ಬೆಂಬಲಿಗನನ್ನು ಬಸ್‌ನಿಂದ ಕೆಳಗಿಳಿಸಿ ಕಸದ ಗಾಡಿಗೆ ಎಸೆದ ಪ್ರತಿಭಟನಾಕಾರರು

Public TV
Last updated: May 10, 2022 6:20 pm
Public TV
Share
3 Min Read
SHARE

ಕೊಲಂಬೊ: ಆರ್ಥಿಕ ಬಿಕ್ಕಟ್ಟಿನ ಕಾರಣದಿಂದಾಗಿ ಶ್ರೀಲಂಕಾದಲ್ಲಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆಡಳಿತದ ವಿರುದ್ಧ ರೊಚ್ಚಿಗೆದ್ದಿರುವ ಪ್ರತಿಭಟನಾಕಾರರು ವಿಧ್ವಂಸಕ ಕೃತ್ಯಗಳನ್ನು ಎಸಗುತ್ತಿದ್ದಾರೆ. ಜನರು ರೋಷಾವೇಷಕ್ಕೆ ಬೆಚ್ಚಿದ ಮಹಿಂದಾ ರಾಜಪಕ್ಸ ಸೋಮವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಶ್ರೀಲಂಕಾ ದೇಶಾದ್ಯಂತ ಕಳೆದ ಒಂದು ವಾರದಿಂದ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಅನೇಕ ಸಾವು-ನೋವು, ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದೆ. ದೇಶದಲ್ಲಿ ಹಿಂಸಾಚಾರದಿಂದಾಗಿ ಐದು ಮಂದಿ ಸಾವನ್ನಪ್ಪಿದ್ದು, 225 ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ರೊಚ್ಚಿಗೆದ್ದ ಜನ – ಸಂಸದ, ಮಾಜಿ ಸಚಿವರ ಮನೆಗೆ ಬೆಂಕಿ

SRILANKA 2

ಏಪ್ರಿಲ್ 9 ರಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ನಿರ್ಗಮಿತ ಪ್ರಧಾನ ಮಂತ್ರಿ ಮಹಿಂದಾ ರಾಜಪಕ್ಸ ಅವರ ಬೆಂಬಲಿಗರಿಂದ ದಾಳಿ ನಂತರ ಪ್ರತೀಕಾರ ನಡೆಸಲು ಮುಂದಾದರು.

ಪ್ರತಿಭಟನಾಕಾರರ ಮೇಲೆ ಗುಂಡುಹಾರಿಸಿದ ಸಂಸದ
ಸೋಮವಾರ ರಾಜಧಾನಿ ಕೊಲಂಬೊದಿಂದ ಹೊರಟಿದ್ದ ಆಡಳಿತ ಪಕ್ಷದ ಶಾಸಕ ಅಮರಕೀರ್ತಿ ಅತುಕೋರಾಲ ಅವರ ವಾಹನವನ್ನು ತಡೆದ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದರು. ಈ ವೇಳೆ 27 ವರ್ಷದ ವ್ಯಕ್ತಿ ಗುಂಡಿಗೆ ಬಲಿಯಾಗಿ, ಇಬ್ಬರು ಗಾಯಗೊಂಡರು. ಘಟನೆ ನಂತರ ಸಂಸದರು ತಾವೇ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಅವರನ್ನು ಕೊಲೆ ಮಾಡಲಾಗಿದೆ ಎಂದು ಪಕ್ಷ ಆರೋಪಿಸಿದೆ. ಶಾಸಕರ ಅಂಗರಕ್ಷಕ ಕೂಡ ಸಾವನ್ನಪ್ಪಿದ್ದಾನೆ. ಅಲ್ಲಿ ಏನಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸೋಮವಾರದಂದು ದಕ್ಷಿಣದ ವೀರಕೇಟಿಯ ಪಟ್ಟಣದಲ್ಲಿ ರಾಜಪಕ್ಸ ಅವರ ಪಕ್ಷದ ಪ್ರಾಂತೀಯ ರಾಜಕಾರಣಿಯೊಬ್ಬರು ಗುಂಡು ಹಾರಿಸಿ ಇಬ್ಬರನ್ನು ಕೊಂದು ಮೂವರನ್ನು ಗಾಯಗೊಳಿಸಿದ್ದಾರೆ. ಕೃತ್ಯದ ನಂತರ ರಾಜಕಾರಣಿ ಕಾಣೆಯಾಗಿದ್ದಾನೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಬುಗಿಲೆದ್ದ ಆಕ್ರೋಶಕ್ಕೆ ಆಡಳಿತ ಪಕ್ಷದ ಸಂಸದ ಬಲಿ

srilanka

ರಾಜಕಾರಣಿಗಳ ಮನೆಗಳಿಗೆ ಬೆಂಕಿ
ಕರ್ಫ್ಯೂ ಹೊರತಾಗಿಯೂ ಆಡಳಿತ ಪಕ್ಷದ ಉನ್ನತ ರಾಜಕಾರಣಿಗಳ ಕನಿಷ್ಠ 41 ಮನೆಗಳನ್ನು ರಾತ್ರಿಯಿಡೀ ಸುಟ್ಟು ಹಾಕಲಾಗಿದೆ. ಆ ಮನೆಗಳಲ್ಲಿ ನಿಲ್ಲಿಸಿದ್ದ ನೂರಾರು ದ್ವಿಚಕ್ರ ವಾಹನಗಳೂ ಸುಟ್ಟು ಕರಕಲಾಗಿವೆ.

ರಾಜಪಕ್ಸ ಮ್ಯೂಸಿಯಂ ಧ್ವಂಸ
ಮೆಡಾ ಮುಲಾನಾ ಎಂಬ ಆಡಳಿತ ಕುಟುಂಬದ ಪೂರ್ವಜರ ಗ್ರಾಮದಲ್ಲಿರುವ ರಾಜಪಕ್ಸ ಮನೆತನದವರ ಕುರಿತಾದ ವಸ್ತುಸಂಗ್ರಹಾಲಯದ ಮೇಲೆ ಗುಂಪೊಂದು ದಾಳಿ ನಡೆಸಿ ಅದನ್ನು ನೆಲಸಮಗೊಳಿಸಿದೆ. ರಾಜಪಕ್ಸ ಪೋಷಕರ ಎರಡು ಮೇಣದ ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ವಾಯುವ್ಯ ಪಟ್ಟಣವಾದ ಕುರುನೆಗಾಲದಲ್ಲಿ ರಾಜಪಕ್ಸರ ರಾಜಕೀಯ ಕಚೇರಿಯೂ ಸಹ ನಾಶವಾಗಿದೆ. ಇದನ್ನೂ ಓದಿ: ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸ ರಾಜೀನಾಮೆ

sri lanka mp house fire

ಆಸ್ಪತ್ರೆಯಲ್ಲಿ ನಿರ್ಬಂಧ
ರಾಜಪಕ್ಸ ವಿರೋಧಿ ಪ್ರತಿಭಟನಾಕಾರರೊಂದಿಗಿನ ಘರ್ಷಣೆಯಲ್ಲಿ ಗಾಯಗೊಂಡ ಸರ್ಕಾರಿ ಬೆಂಬಲಿಗರನ್ನು ರಕ್ಷಿಸಲು ಮುಖ್ಯ ಕೊಲಂಬೊ ರಾಷ್ಟ್ರೀಯ ಆಸ್ಪತ್ರೆಯ ವೈದ್ಯರು ಮುಂದಾದರು. ಆದರೆ ಅವರಿಗೆ ಚಿಕಿತ್ಸೆ ನೀಡದಂತೆ ಪ್ರತಿಭಟನಾಕಾರರು ತಡೆಯಲು ಮುಂದಾದರು. ʻಅವರು ಕೊಲೆಗಾರರಾಗಿರಬಹುದು, ಆದರೆ ಚಿಕಿತ್ಸೆ ಪಡೆಯಬೇಕಾದ ರೋಗಿಗಳುʼ ಎಂದು ವೈದ್ಯರು ನಿರ್ಬಂಧಕ್ಕೆ ವಿರೋಧ ವ್ಯಕ್ತಪಡಿಸಿದರು.

ಒಟ್ಟು 219 ಮಂದಿಯನ್ನು ಕೊಲಂಬೊ ರಾಷ್ಟ್ರೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರು ತೀವ್ರ ನಿಗಾದಲ್ಲಿದ್ದಾರೆ ಎಂದು ಆಸ್ಪತ್ರೆಯ ವಕ್ತಾರ ಪುಷ್ಪಾ ಸೊಯ್ಸಾ ತಿಳಿಸಿದ್ದಾರೆ. ಗಾಯಗೊಂಡ ಸರ್ಕಾರಿ ಬೆಂಬಲಿಗರನ್ನು ಕರೆತರಲು ಸೈನಿಕರು ಗೇಟ್‌ಗಳನ್ನು ಬಲವಂತವಾಗಿ ತೆರೆಯಬೇಕಾದ ಪರಿಸ್ಥಿತಿ ಇತ್ತು. ಪ್ರತಿಭಟನಾಕಾರರ ವಿರೋಧದಿಂದಾಗಿ ಆಸ್ಪತ್ರೆಗೆ ಪ್ರವೇಶಿಸಲು ಬೀಗಗಳನ್ನು ಮುರಿಯಬೇಕಾಯಿತು. ಇದನ್ನೂ ಓದಿ: 1945 ರಲ್ಲಿದ್ದಂತೆ, ವಿಜಯವು ನಮ್ಮದಾಗಿರುತ್ತದೆ: ಪುಟಿನ್ ಪ್ರತಿಜ್ಞೆ

Mahinda Rajapaksa

ಬಸ್‌ಗಳಿಗೆ ಬೆಂಕಿ
ಕೊಲಂಬೊಗೆ ಪ್ರಯಾಣಿಸಲು ರಾಜಪಕ್ಸ ಬೆಂಬಲಿಗರು ಬಳಸುತ್ತಿದ್ದ ಹತ್ತಾರು ಬಸ್‌ಗಳಿಗೆ ದೇಶದಾದ್ಯಂತ ಬೆಂಕಿ ಹಚ್ಚಲಾಯಿತು. ಮಹಾರಾಗಮಾದ ಉಪನಗರದಲ್ಲಿ ಜನಸಮೂಹವು ಸರ್ಕಾರಿ ಪರ ಗುಂಪಿನ ನಾಯಕನನ್ನು ಬಸ್‌ನಿಂದ ಬಲವಂತವಾಗಿ ಕೆಳಗಿಳಿಸಿ ಕಸದ ಗಾಡಿಗೆ ಎಸೆದರು. ಮೊದಲು ವಾಹನವನ್ನು ಬುಲ್ಡೋಜರ್‌ನಿಂದ ಜಖಂಗೊಳಿಸಿದರು.

ಜನರನ್ನು ಕೆರೆಗೆ ತಳ್ಳಿ ದುಷ್ಕೃತ್ಯ
ಆಕ್ರೋಶಗೊಂಡ ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಟೆಂಪಲ್ ಟ್ರೀಸ್ ನಿವಾಸದ ಬಳಿಯ ಕೆರೆಯೊಂದಕ್ಕೆ ಹತ್ತಾರು ಮಂದಿಯನ್ನು ತಳ್ಳಿ ಆಕ್ರೋಶ ಹೊರಕಾಕಿದರು. ಕೆರೆಗೆ ತಳ್ಳಲ್ಪಟ್ಟವರನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು.

TAGGED:Economic Crisisprotestsri lanka crisissri lanka violenceಆರ್ಥಿಕ ಬಿಕ್ಕಟ್ಟುಪ್ರತಿಭಟನೆಶ್ರೀಲಂಕಾ
Share This Article
Facebook Whatsapp Whatsapp Telegram

Cinema news

Toxic Teaser
Toxic Teaser | ಡ್ಯಾಡಿ ಈಸ್ ಹೋಮ್ – ಯಶ್ ʻಟಾಕ್ಸಿಕ್ʼ ಕಿಕ್ ಅಬ್ಬಬ್ಬಾ!
Bollywood Cinema Latest Main Post Sandalwood
yash
40ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ʻಮಾಸ್ಟರ್‌ಪೀಸ್‌ʼ ರಾಕಿಭಾಯ್‌
Cinema Latest Main Post Sandalwood
Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema
Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories

You Might Also Like

Zameer Ahmed Khan
Bengaluru City

161 ಮನೆ ನೆಲಸಮ ಆಗಿದೆ, 26 ಜನಕ್ಕೆ ಇವತ್ತೇ ಮನೆ ಕೊಡಬಹುದು: ಜಮೀರ್

Public TV
By Public TV
19 minutes ago
IED neutralised
Latest

ರಾಜೌರಿಯಲ್ಲಿ 4 Kg ಐಇಡಿ ನಿಷ್ಕ್ರಿಯ – ಭಯೋತ್ಪಾದಕರ ಸಂಜು ವಿಫಲ, ತಪ್ಪಿದ ಅನಾಹುತ

Public TV
By Public TV
30 minutes ago
Santosh Lad
Dharwad

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯೇ ಬಟ್ಟೆ ಹರಿದುಕೊಂಡಿದ್ದಾಳೆ: ಸಂತೋಷ್ ಲಾಡ್

Public TV
By Public TV
44 minutes ago
Traffic Police
Districts

ಸಹ ಸಿಬ್ಬಂದಿಯಿಂದ ಕಿರುಕುಳ – ಸಂಚಾರ ಪೊಲೀಸ್‌ ಠಾಣೆಯಲ್ಲೇ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ

Public TV
By Public TV
1 hour ago
Chikkaballapura Devanahalli Train Rams On Hand
Chikkaballapur

ರೈಲು ಹರಿದು ಕೈ ಕಟ್ – ಗಾಂಜಾ ಮತ್ತಿನಲ್ಲಿ ಚಿಕಿತ್ಸೆ ಬೇಡ ಅಂತ ಓಡಿದ ಭೂಪ

Public TV
By Public TV
1 hour ago
Chikkamagaluru School
Chikkamagaluru

ಮೂಡಿಗೆರೆ | ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನ ಪ್ರವಾಸ ಭಾಗ್ಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?