ಕೊಲಂಬೊ: ಸಾರ್ವಜನಿಕ ಆಸ್ತಿಯನ್ನು ಲೂಟಿ ಮಾಡುವ ಅಥವಾ ಇತರರಿಗೆ ಹಾನಿ ಮಾಡುವವರ ಮೇಲೆ ಗುಂಡು ಹಾರಿಸಲು ಶ್ರೀಲಂಕಾ ರಕ್ಷಣಾ ಸಚಿವಾಲಯವು ಸೇನಾಪಡೆಗಳಿಗೆ ಆದೇಶಿಸಿದೆ ಎಂದು ಸೇನಾ ವಕ್ತಾರರು ಡೈಲಿ ಮಿರರ್ಗೆ ತಿಳಿಸಿದ್ದಾರೆ.
ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಯನ್ನು ಹಾನಿಗೊಳಿಸುವುದು ಅಥವಾ ಇತರರಿಗೆ ಹಾನಿ ಮಾಡುವುದು ಕಂಡುಬಂದರೆ ಅಂತಹವರನ್ನು ಗುಂಡಿಕ್ಕಿ ಕೊಲ್ಲಲಾಗುವುದು ಎಂದು ರಕ್ಷಣಾ ಸಚಿವಾಲಯ ಎಚ್ಚರಿಕೆಯ ಸಂದೇಶ ರವಾನಿಸಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಪರಿಸ್ಥಿತಿ ಉದ್ವಿಗ್ನ – ಸರ್ಕಾರ ಬೆಂಬಲಿಗನನ್ನು ಬಸ್ನಿಂದ ಕೆಳಗಿಳಿಸಿ ಕಸದ ಗಾಡಿಗೆ ಎಸೆದ ಪ್ರತಿಭಟನಾಕಾರರು
ಆಡಳಿತ ಪಕ್ಷದ ರಾಜಕಾರಣಿಗಳ ಒಡೆತನದ ಹಲವಾರು ಮನೆಗಳನ್ನು ಹಾನಿಗೊಳಿಸಲಾಗಿದೆ. ಬೆಂಕಿ ಹಚ್ಚಿ ನಾಶಗೊಳಿಸಲಾಗಿದೆ. ಸರ್ಕಾರದ ಬೆಂಬಲಿಗರ ಮೇಲೆ ಕಳೆದ ಎರಡು ದಿನಗಳಿಂದ ದಾಳಿ ಮಾಡಲಾಗಿದೆ.
ಶ್ರೀಲಂಕಾದಲ್ಲಿನ ಜನರ ಕುಂದುಕೊರತೆಗಳನ್ನು ಪರಿಹರಿಸಲು ಸಂಯಮ ಮತ್ತು ಅರ್ಥಪೂರ್ಣ ಮಾತುಕತೆಗೆ ಮಾನವ ಹಕ್ಕುಗಳ ಯುಎನ್ ಹೈ ಕಮಿಷನರ್ ಮಿಚೆಲ್ ಬ್ಯಾಚೆಲೆಟ್ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ರೊಚ್ಚಿಗೆದ್ದ ಜನ – ಸಂಸದ, ಮಾಜಿ ಸಚಿವರ ಮನೆಗೆ ಬೆಂಕಿ
ಆರ್ಥಿಕ ಬಿಕ್ಕಟ್ಟಿನ ಕಾರಣದಿಂದಾಗಿ ಶ್ರೀಲಂಕಾದಲ್ಲಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆಡಳಿತದ ವಿರುದ್ಧ ರೊಚ್ಚಿಗೆದ್ದಿರುವ ಪ್ರತಿಭಟನಾಕಾರರು ವಿಧ್ವಂಸಕ ಕೃತ್ಯಗಳನ್ನು ಎಸಗುತ್ತಿದ್ದಾರೆ. ಜನರು ರೋಷಾವೇಷಕ್ಕೆ ಬೆಚ್ಚಿದ ಮಹಿಂದಾ ರಾಜಪಕ್ಸ ಸೋಮವಾರ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.