ಕೊಲಂಬೊ: ಹಿಂಸಾತ್ಮಕ ಪ್ರತಿಭಟನೆಗಳು ಹಾಗೂ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದ ನಂತರ ಶ್ರೀಲಂಕಾದ ಪ್ರಧಾನಿ ಹುದ್ದೆಯನ್ನು ವಹಿಸಿಕೊಳ್ಳುವ ಅಧ್ಯಕ್ಷ ಗೊಟಾಬಯ ರಾಜಪಕ್ಸ ಅವರ ಪ್ರಸ್ತಾಪಕ್ಕೆ ಶ್ರೀಲಂಕಾದ ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರು ಒಪ್ಪಿಗೆ ನೀಡಿದ್ದಾರೆ.
ಶ್ರೀಲಂಕಾ ಅಧ್ಯಕ್ಷರಿಗೆ ಸಜಿತ್ ಪ್ರೇಮದಾಸ ಪತ್ರ ಬರೆದಿದ್ದು, ನಿಗದಿತ ಸಮಯದೊಳಗೆ ಗೊಟಬಯ ರಾಜಪಕ್ಸ ಅವರು ಅಧಿಕಾರವನ್ನು ತೊರೆಯಲು ಒಪ್ಪಿಗೆ ನೀಡಿದರೆ, ಹೊಸ ಸರ್ಕಾರ ರಚಿಸಲು ಅಧ್ಯಕ್ಷರ ಆಹ್ವಾನವನ್ನು ಸ್ವೀಕರಿಸಲು ನಾನು ಒಪ್ಪುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಿಳೆ ಕತ್ತು ಹಿಸುಕಿ ಸಮಾಧಿ ಮಾಡಲು ಹೋಗಿ ತಾನೇ ಸತ್ತ
ಈ ಹಿಂದೆ, ಬಿಕ್ಕಟ್ಟಿನಲ್ಲಿರುವ ದೇಶದ ಪ್ರಧಾನಿ ಹುದ್ದೆಯನ್ನು ಸಜಿತ್ ತಿರಸ್ಕರಿಸಿದ್ದರು. ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ಈ ವಾರದೊಳಗೆ ಹೊಸ ಪ್ರಧಾನಿಯನ್ನು ನೇಮಿಸುವುದಾಗಿ ಬುಧವಾರ ಹೇಳಿದ ಒಂದು ದಿನದ ನಂತರ ಅಜಿತ್ ಒಪ್ಪಿಗೆ ಸೂಚಿಸಿದ್ದಾರೆ. ಬಹುಪಾಲು ಸಂಸದರು ಮತ್ತು ಜನರ ವಿಶ್ವಾಸ ಹೊಂದಿರುವ ವ್ಯಕ್ತಿಯನ್ನು ಪ್ರಧಾನಿಯಾಗಿ ಆಯ್ಕೆ ಮಾಡಲಾಗುವುದು ಎಂದು ಗೊಟಬಯ ದೂರದರ್ಶನದ ಭಾಷಣದಲ್ಲಿ ಹೇಳಿದ್ದರು.
19 ನೇ ತಿದ್ದುಪಡಿಯ ನಿಬಂಧನೆಗಳಿಗೆ ಅಧಿಕಾರ ನೀಡುವ ಹೊಸ ಸಾಂವಿಧಾನಿಕ ತಿದ್ದುಪಡಿಯನ್ನು ತರಲಾಗುವುದು. ಹೊಸ ಪ್ರಧಾನಿ ಮತ್ತು ಕ್ಯಾಬಿನೆಟ್ ದೇಶವನ್ನು ಸ್ಥಿರಗೊಳಿಸಲು ಯೋಜನೆಯನ್ನು ಪ್ರಸ್ತುತಪಡಿಸಬಹುದು ಎಂದು ತಿಳಿಸಿದ್ದರು. ಇದನ್ನೂ ಓದಿ: ಉತ್ತರ ಕೊರಿಯಾದಲ್ಲಿ ಮೊದಲ ಬಾರಿಗೆ ಕೊರೊನಾ ಪ್ರಕರಣ ಪತ್ತೆ- ಕಟ್ಟುನಿಟ್ಟಿನ ಲಾಕ್ಡೌನ್ ಘೋಷಣೆ
ಕೆಲವರು ಕಾರ್ಯನಿರ್ವಾಹಕ ಅಧ್ಯಕ್ಷ ಸ್ಥಾನವನ್ನು ರದ್ದುಗೊಳಿಸುವಂತೆ ಕೇಳಿದ್ದಾರೆ. ಎಲ್ಲಾ ಮಧ್ಯಸ್ಥಗಾರರೊಂದಿಗೆ ಚರ್ಚಿಸಿದ ನಂತರ ನಾನು ಅದಕ್ಕೆ ಅವಕಾಶ ನೀಡುತ್ತೇನೆ. ದೇಶವು ಗಂಭೀರ ಬಿಕ್ಕಟ್ಟನ್ನು ಎದುರಿಸುತ್ತಿದೆ. ರಾಜ್ಯ ಯಂತ್ರವನ್ನು ಮುಂದುವರಿಸಲು ನಿಮ್ಮ ಬೆಂಬಲವನ್ನು ನಾನು ಕೋರುತ್ತೇನೆ ಎಂದು ರಾಜಪಕ್ಸ ಮನವಿ ಮಾಡಿದ್ದಾರೆ.ಒಂಬತ್ತು ಮಂದಿ ಮೃತಪಟ್ಟು ಸುಮಾರು 300 ಮಂದಿ ಗಾಯಗೊಂಡಿರುವ ಹಿಂಸಾಚಾರ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಧ್ಯಕ್ಷರು ತಿಳಿಸಿದ್ದಾರೆ.
ಸರ್ಕಾರದ ಪರ ಗುಂಪುಗಳು ಸರ್ಕಾರದ ವಿರೋಧಿ ಪ್ರತಿಭಟನಾಕಾರರೊಂದಿಗಿನ ಘರ್ಷಣೆಯ ನಂತರ ಹಿಂಸಾತ್ಮಕ ಘಟನೆಗಳು ವರದಿಯಾದವು. ಬುಧವಾರದವರೆಗೆ ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಲಾಗಿತ್ತು. ಕಾನೂನು ಸುವ್ಯವಸ್ಥೆ ಕಾಪಾಡಲು ಮಿಲಿಟರಿಯನ್ನು ನಿಯೋಜಿಸಲಾಗಿದೆ.